Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

"ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಅವರ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ?

- Advertisement -
- Advertisement -

ಸೆಪ್ಟಂಬರ್ 26 ರಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯ ಸದನದಲ್ಲಿ ಚರ್ಚೆಗೆ ಬಂದು ಗದ್ದಲದ ನಡುವೆಯೇ ಅಂಗೀಕರಿಸಲಾಯಿತು. ಈ ಮಸೂದೆ ಚರ್ಚೆಯ ವೇಳೆ ಬಿಜೆಪಿ ಶಾಸಕರು, ಸಚಿವರು ಕಾಂಗ್ರೆಸ್‌ ಮುಖಂಡರನ್ನು ಪೇಚಿಗೆ ಸಿಲುಕಿಸಿದರು. ಹಾಗಾದರೆ ಸದನದಲ್ಲಿ ನಡೆದುದ್ದಾದರೂ ಏನು? ಇಲ್ಲಿದೆ ವಿವರ..

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ “ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ” ಎಂದರು.

ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ “ಈ ತಿದ್ದುಪಡಿಯನ್ನು ಬಿಜೆಪಿ ತಂದಿದೆ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 03-01-2014 ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಉಪಸಮಿತಿ ರಚಿಸಿದ್ದರು. ವಾಸ್ತವಿಕವಾಗ ಸದರಿ ಕಾಯ್ದೆಯು ಕಾಲಕ್ರಮೇಣ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಇದನ್ನು ಜಾರಿಗೊಳಿಸಲು ಸಾಧ್ಯವಿಲ್ಲದ ಕಾರಣ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ ರದ್ದುಗೊಳಿಸಬೇಕೆಂದು ಉಪಸಮಿತಿ ನಿರ್ಣಯ ಮಾಡಿತ್ತು’ ಎಂದರು.

ಆಗ ಕಾಂಗ್ರೆಸ್ ಪಕ್ಷದ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತವಿರೋಧಿ ಸರ್ಕಾರ ಎಂದು ಜರಿದು ಗದ್ದಲವೆಬ್ಬಿಸಿ, ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಹೊರನಡೆದರು.

“ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಆಗ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ? 4 ಯೂನಿಟ್‌ನಿಂದ ಕಾಂಗ್ರೆಸ್ 8 ಕ್ಕೆ ಹೆಚ್ಚಿಸಿದೆ. ಪದೇ ಪದೇ ಈ ಸುಧಾರಣೆಗಳನ್ನು ತಿದ್ದುಪಡಿಮಾಡಬೇಕೆಂದು ತಂದವರು ಅವರೆ, ನಾವಲ್ಲ. ಈಗ ನಾನು 2014ರ ಸಣ್ಣ ಸ್ಯಾಂಪಲ್ ಕೊಟ್ಟಿದ್ದಕ್ಕೆ ಓಡಿ ಹೋದರು. ಇವರು ಭ್ರಷ್ಟಾಚಾರಿಗಳ ಪರ, ಇವರ ನಾಟಕ ಬಯಲಾಯಿತು” ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

“ಕಾಯ್ದೆಯನ್ನು ಯಾರು ತಂದಿತ್ತು? ಕಾಂಗ್ರೆಸ್ ಪಕ್ಷವೇ ಪ್ರಸ್ತಾಪ ಮಾಡಿತ್ತು. ನಾಚಿಕೆಯಾಗಬೇಕು ಅದಕ್ಕೆ. 109 ಅಡಿಯಲ್ಲಿ 1973, 74 ರ ಅಧಿವೇಶನದಲ್ಲಿ 79 ಎ, ಬಿ ಬೇಕಾ ಬೇಡವೇ ಎಂಬ ಚರ್ಚೆ ನಡೆಯುತ್ತಿತ್ತು. ವಿಶ್ವನಾಥ್ ರೆಡ್ಡಿಯವರು, ಎಚ್.ಎಸ್ ಸಿದ್ದಪ್ಪನವರು, ಮಲ್ಲಿಕಾರ್ಜುನ ಖರ್ಗೆ, ಎಂ.ಡಿ ನಂಜುಂಡಸ್ವಾಮಿಯವರು, ಏಕಾಂತಯ್ಯನವರು ಸೇರಿದಂತೆ ಹಲವರು ಇದನ್ನು ತೆಗೆಯಬೇಕೆಂದು ಒತ್ತಾಯಿಸಿದ್ದರು. ಆಗ ಭೂಮಿತಿ ಕೇವಲ 54 ಎಕರೆ ಇರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಭೂಮಿ ಖರೀದಿಗೆ 50,000 ವಾರ್ಷಿಕ ಆದಾಯ ಮಿತಿಯನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್ ಸದಸ್ಯರು ವಾದಿಸಿದ್ದರು. ಆದರೆ ಈಗ ಮಾತ್ರ ರೈತರ ಪರ ಎಂದು ಪೋಸು ಕೊಡುತ್ತಿದ್ದಾರೆ” ಎಂದು ಆರ್ ಅಶೋಕ್ ಕಿಡಿಕಾರಿದರು. ಆದರೆ ಉತ್ತರಿಸಲು ಕಾಂಗ್ರೆಸ್ ಸದಸ್ಯರಾರೂ ಇರಲಿಲ್ಲ..


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...