Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

"ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಅವರ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ?

- Advertisement -
- Advertisement -

ಸೆಪ್ಟಂಬರ್ 26 ರಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯ ಸದನದಲ್ಲಿ ಚರ್ಚೆಗೆ ಬಂದು ಗದ್ದಲದ ನಡುವೆಯೇ ಅಂಗೀಕರಿಸಲಾಯಿತು. ಈ ಮಸೂದೆ ಚರ್ಚೆಯ ವೇಳೆ ಬಿಜೆಪಿ ಶಾಸಕರು, ಸಚಿವರು ಕಾಂಗ್ರೆಸ್‌ ಮುಖಂಡರನ್ನು ಪೇಚಿಗೆ ಸಿಲುಕಿಸಿದರು. ಹಾಗಾದರೆ ಸದನದಲ್ಲಿ ನಡೆದುದ್ದಾದರೂ ಏನು? ಇಲ್ಲಿದೆ ವಿವರ..

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ “ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ” ಎಂದರು.

ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ “ಈ ತಿದ್ದುಪಡಿಯನ್ನು ಬಿಜೆಪಿ ತಂದಿದೆ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 03-01-2014 ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಉಪಸಮಿತಿ ರಚಿಸಿದ್ದರು. ವಾಸ್ತವಿಕವಾಗ ಸದರಿ ಕಾಯ್ದೆಯು ಕಾಲಕ್ರಮೇಣ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಇದನ್ನು ಜಾರಿಗೊಳಿಸಲು ಸಾಧ್ಯವಿಲ್ಲದ ಕಾರಣ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ ರದ್ದುಗೊಳಿಸಬೇಕೆಂದು ಉಪಸಮಿತಿ ನಿರ್ಣಯ ಮಾಡಿತ್ತು’ ಎಂದರು.

ಆಗ ಕಾಂಗ್ರೆಸ್ ಪಕ್ಷದ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತವಿರೋಧಿ ಸರ್ಕಾರ ಎಂದು ಜರಿದು ಗದ್ದಲವೆಬ್ಬಿಸಿ, ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಹೊರನಡೆದರು.

“ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಆಗ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ? 4 ಯೂನಿಟ್‌ನಿಂದ ಕಾಂಗ್ರೆಸ್ 8 ಕ್ಕೆ ಹೆಚ್ಚಿಸಿದೆ. ಪದೇ ಪದೇ ಈ ಸುಧಾರಣೆಗಳನ್ನು ತಿದ್ದುಪಡಿಮಾಡಬೇಕೆಂದು ತಂದವರು ಅವರೆ, ನಾವಲ್ಲ. ಈಗ ನಾನು 2014ರ ಸಣ್ಣ ಸ್ಯಾಂಪಲ್ ಕೊಟ್ಟಿದ್ದಕ್ಕೆ ಓಡಿ ಹೋದರು. ಇವರು ಭ್ರಷ್ಟಾಚಾರಿಗಳ ಪರ, ಇವರ ನಾಟಕ ಬಯಲಾಯಿತು” ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

“ಕಾಯ್ದೆಯನ್ನು ಯಾರು ತಂದಿತ್ತು? ಕಾಂಗ್ರೆಸ್ ಪಕ್ಷವೇ ಪ್ರಸ್ತಾಪ ಮಾಡಿತ್ತು. ನಾಚಿಕೆಯಾಗಬೇಕು ಅದಕ್ಕೆ. 109 ಅಡಿಯಲ್ಲಿ 1973, 74 ರ ಅಧಿವೇಶನದಲ್ಲಿ 79 ಎ, ಬಿ ಬೇಕಾ ಬೇಡವೇ ಎಂಬ ಚರ್ಚೆ ನಡೆಯುತ್ತಿತ್ತು. ವಿಶ್ವನಾಥ್ ರೆಡ್ಡಿಯವರು, ಎಚ್.ಎಸ್ ಸಿದ್ದಪ್ಪನವರು, ಮಲ್ಲಿಕಾರ್ಜುನ ಖರ್ಗೆ, ಎಂ.ಡಿ ನಂಜುಂಡಸ್ವಾಮಿಯವರು, ಏಕಾಂತಯ್ಯನವರು ಸೇರಿದಂತೆ ಹಲವರು ಇದನ್ನು ತೆಗೆಯಬೇಕೆಂದು ಒತ್ತಾಯಿಸಿದ್ದರು. ಆಗ ಭೂಮಿತಿ ಕೇವಲ 54 ಎಕರೆ ಇರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಭೂಮಿ ಖರೀದಿಗೆ 50,000 ವಾರ್ಷಿಕ ಆದಾಯ ಮಿತಿಯನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್ ಸದಸ್ಯರು ವಾದಿಸಿದ್ದರು. ಆದರೆ ಈಗ ಮಾತ್ರ ರೈತರ ಪರ ಎಂದು ಪೋಸು ಕೊಡುತ್ತಿದ್ದಾರೆ” ಎಂದು ಆರ್ ಅಶೋಕ್ ಕಿಡಿಕಾರಿದರು. ಆದರೆ ಉತ್ತರಿಸಲು ಕಾಂಗ್ರೆಸ್ ಸದಸ್ಯರಾರೂ ಇರಲಿಲ್ಲ..


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...