Homeಕರ್ನಾಟಕಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

"ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಅವರ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ?

- Advertisement -
- Advertisement -

ಸೆಪ್ಟಂಬರ್ 26 ರಂದು ವಿಧಾನಸಭಾ ಅಧಿವೇಶನದ ಕೊನೆಯ ದಿನ ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಿಷಯ ಸದನದಲ್ಲಿ ಚರ್ಚೆಗೆ ಬಂದು ಗದ್ದಲದ ನಡುವೆಯೇ ಅಂಗೀಕರಿಸಲಾಯಿತು. ಈ ಮಸೂದೆ ಚರ್ಚೆಯ ವೇಳೆ ಬಿಜೆಪಿ ಶಾಸಕರು, ಸಚಿವರು ಕಾಂಗ್ರೆಸ್‌ ಮುಖಂಡರನ್ನು ಪೇಚಿಗೆ ಸಿಲುಕಿಸಿದರು. ಹಾಗಾದರೆ ಸದನದಲ್ಲಿ ನಡೆದುದ್ದಾದರೂ ಏನು? ಇಲ್ಲಿದೆ ವಿವರ..

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ “ಉದ್ಯಮಿಗಳು, ಬಹುರಾಷ್ಟ್ರೀಯ ಕಂಪೆನಿಗಳು ಮತ್ತು ರಿಯಲ್ ಎಸ್ಟೇಟ್ ವ್ಯಾಪಾರಿಗಳು ಅಸಹಾಯಕ ರೈತರಿಗೆ ವಂಚಿಸಿ ಸುಲಭದಲ್ಲಿ ಭೂಮಿ ಖರೀದಿ ಮಾಡಲು ನೆರವಾಗುವ ಉದ್ದೇಶದಿಂದಲೇ ಈ ತಿದ್ದುಪಡಿಯನ್ನು ತರಲಾಗಿದೆ. ಇದರಲ್ಲಿ ಯಾವ ರೈತರ ಹಿತದೃಷ್ಟಿಯೂ ಇಲ್ಲ” ಎಂದರು.

ಭೂ ಸುಧಾರಣೆ ಕಾಯ್ದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ. ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಜಾರಿಗೆ ತಂದು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ್ದರು, ರಾಜ್ಯ ಬಿಜೆಪಿ ಸರ್ಕಾರ ಉಳ್ಳವನನ್ನೇ ಭೂ ಒಡೆಯನನ್ನಾಗಿ ಮಾಡಲು ಹೊರಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ, ಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ, ಕಲಂ 63ರಲ್ಲಿ ನಿಗದಿಪಡಿಸಿದ ಭೂ ಒಡೆತನದ ಮಿತಿಯನ್ನು ದ್ವಿಗುಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೃಷಿ ಕ್ಷೇತ್ರದ ಶವಪೆಟ್ಟಿಗೆಗೆ ಹೊಡೆದಿರುವ ಕೊನೆಯ ಮೊಳೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಕೃಷಿ ಭೂಮಿ ಖರೀದಿಗೆ ಆದಾಯದ ಮಿತಿಯ ಸೆಕ್ಷನ್ 79ಎ, ಕೃಷಿಕರೇತರರಿಗೆ ಭೂಮಿ ಖರೀದಿ ನಿಷೇಧಿಸಿದ್ದ ಸೆಕ್ಷನ್ 79ಬಿ, ಸುಳ್ಳು ಪ್ರಮಾಣಪತ್ರಕ್ಕೆ ದಂಡ ವಿಧಿಸುವ ಸೆಕ್ಷನ್ 79 ಸಿ, ಕೃಷಿಕರಲ್ಲದವರಿಗೆ ಭೂಮಿ ವರ್ಗಾವಣೆ ನಿಷೇಧಿಸಿದ್ದ ಸೆಕ್ಷನ್ 80, ಗರಿಷ್ಠ ಭೂಮಿತಿಯ ಸೆಕ್ಷನ್ 63ರ ರದ್ದತಿ ಭೂತಾಯಿಗೆ ಬಗೆವ ದ್ರೋಹ ಎಂದರು.

ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ “ಈ ತಿದ್ದುಪಡಿಯನ್ನು ಬಿಜೆಪಿ ತಂದಿದೆ ಎಂದು ಎಲ್ಲರೂ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 03-01-2014 ರಂದು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಒಂದು ಉಪಸಮಿತಿ ರಚಿಸಿದ್ದರು. ವಾಸ್ತವಿಕವಾಗ ಸದರಿ ಕಾಯ್ದೆಯು ಕಾಲಕ್ರಮೇಣ ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಇದನ್ನು ಜಾರಿಗೊಳಿಸಲು ಸಾಧ್ಯವಿಲ್ಲದ ಕಾರಣ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ 79ಎ, ಬಿ ರದ್ದುಗೊಳಿಸಬೇಕೆಂದು ಉಪಸಮಿತಿ ನಿರ್ಣಯ ಮಾಡಿತ್ತು’ ಎಂದರು.

ಆಗ ಕಾಂಗ್ರೆಸ್ ಪಕ್ಷದ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತವಿರೋಧಿ ಸರ್ಕಾರ ಎಂದು ಜರಿದು ಗದ್ದಲವೆಬ್ಬಿಸಿ, ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿ ಸದನದಿಂದ ಹೊರನಡೆದರು.

“ಭೂ ಸುಧಾರಣಗೆ ಸಂಬಂಧಿಸಿದಂತೆ ಟೌನ್ ಅಂಡ್ ಕಂಟ್ರಿ ಪ್ಲಾನ್ ಅಡಿಯಲ್ಲಿ 20 ಯೂನಿಟ್‌ಗಳಿಂದ 40 ಯೂನಿಟ್‌ಗೆ 2015ರಲ್ಲಿ ಹೆಚ್ಚಿಸಲಾಗಿದೆ. ಆಗ ಕಾಂಗ್ರೆಸ್‌ಗೆ ಇದು ರೈತವಿರೋಧಿ ಎಂದು ಜ್ಞಾಪಕ ಇರಲಿಲ್ಲವೇ? 4 ಯೂನಿಟ್‌ನಿಂದ ಕಾಂಗ್ರೆಸ್ 8 ಕ್ಕೆ ಹೆಚ್ಚಿಸಿದೆ. ಪದೇ ಪದೇ ಈ ಸುಧಾರಣೆಗಳನ್ನು ತಿದ್ದುಪಡಿಮಾಡಬೇಕೆಂದು ತಂದವರು ಅವರೆ, ನಾವಲ್ಲ. ಈಗ ನಾನು 2014ರ ಸಣ್ಣ ಸ್ಯಾಂಪಲ್ ಕೊಟ್ಟಿದ್ದಕ್ಕೆ ಓಡಿ ಹೋದರು. ಇವರು ಭ್ರಷ್ಟಾಚಾರಿಗಳ ಪರ, ಇವರ ನಾಟಕ ಬಯಲಾಯಿತು” ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದರು.

“ಕಾಯ್ದೆಯನ್ನು ಯಾರು ತಂದಿತ್ತು? ಕಾಂಗ್ರೆಸ್ ಪಕ್ಷವೇ ಪ್ರಸ್ತಾಪ ಮಾಡಿತ್ತು. ನಾಚಿಕೆಯಾಗಬೇಕು ಅದಕ್ಕೆ. 109 ಅಡಿಯಲ್ಲಿ 1973, 74 ರ ಅಧಿವೇಶನದಲ್ಲಿ 79 ಎ, ಬಿ ಬೇಕಾ ಬೇಡವೇ ಎಂಬ ಚರ್ಚೆ ನಡೆಯುತ್ತಿತ್ತು. ವಿಶ್ವನಾಥ್ ರೆಡ್ಡಿಯವರು, ಎಚ್.ಎಸ್ ಸಿದ್ದಪ್ಪನವರು, ಮಲ್ಲಿಕಾರ್ಜುನ ಖರ್ಗೆ, ಎಂ.ಡಿ ನಂಜುಂಡಸ್ವಾಮಿಯವರು, ಏಕಾಂತಯ್ಯನವರು ಸೇರಿದಂತೆ ಹಲವರು ಇದನ್ನು ತೆಗೆಯಬೇಕೆಂದು ಒತ್ತಾಯಿಸಿದ್ದರು. ಆಗ ಭೂಮಿತಿ ಕೇವಲ 54 ಎಕರೆ ಇರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಭೂಮಿ ಖರೀದಿಗೆ 50,000 ವಾರ್ಷಿಕ ಆದಾಯ ಮಿತಿಯನ್ನು ತೆಗೆದುಹಾಕಬೇಕೆಂದು ಕಾಂಗ್ರೆಸ್ ಸದಸ್ಯರು ವಾದಿಸಿದ್ದರು. ಆದರೆ ಈಗ ಮಾತ್ರ ರೈತರ ಪರ ಎಂದು ಪೋಸು ಕೊಡುತ್ತಿದ್ದಾರೆ” ಎಂದು ಆರ್ ಅಶೋಕ್ ಕಿಡಿಕಾರಿದರು. ಆದರೆ ಉತ್ತರಿಸಲು ಕಾಂಗ್ರೆಸ್ ಸದಸ್ಯರಾರೂ ಇರಲಿಲ್ಲ..


ಇದನ್ನೂ ಓದಿ: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಸದನದಲ್ಲಿ ಮಾತಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...