ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದ್ದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಬಹುಮತ ದೊರೆತು ಅಂಗೀಕಾರವಾಗಿದೆ. ಆದರೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ತಮ್ಮ ಪಕ್ಷದ ಈ ನಡೆಯನ್ನು ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, “ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ಮಂಡಿಸಿದ ಭೂ ಸುಧಾರಣೆ ತಿದ್ದುಪಡಿ ಮಸೂದೆ ಪರ ಮತ ಹಾಕಿದ ಜೆಡಿಎಸ್: ಪರಿಷತ್ನಲ್ಲಿ ಅಂಗೀಕಾರ
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್ ಮಾಡಿದೆ. ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು” ಎಂದು ಸಮರ್ಥಿಸಿಕೊಂಡಿದ್ದಾರೆ.
ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು. 2/10
— H D Kumaraswamy (@hd_kumaraswamy) December 9, 2020
ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ
“ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ. ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್ನ ಹೆಗ್ಗಳಿಕೆಯಲ್ಲವೇ? ಎಸ್ಸಿ/ಎಸ್ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಬರೆದುಕೊಂಡಿದ್ದಾರೆ.
ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್ನ ಹೆಗ್ಗಳಿಕೆಯಲ್ಲವೇ? ಎಸ್ಸಿ/ಎಸ್ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ. 4/10
— H D Kumaraswamy (@hd_kumaraswamy) December 9, 2020
ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?
“ಕಾಯ್ದೆಯಲ್ಲಿನ 79(ಎ, ಬಿ) ಕಲಂಗಳ ಔಚಿತ್ಯದ ಬಗ್ಗೆ ಈ ವರೆಗೆ ಶಾಸನಸಭೆಗಳ ಒಳ, ಹೊರಗೆ ಸಾಕಷ್ಟು ಚರ್ಚೆಗಳಾಗಿವೆ. ಪ್ರೊ. ನಂಜುಂಡಸ್ವಾಮಿ ಅವರೇ, ‘ಇದು ಜನರ ಸ್ವಾತಂತ್ರ್ಯ ಹರಣ ಮಾಡುತ್ತದೆ’ ಎಂದು ಪ್ರತಿಪಾದಿಸಿದ್ದರು. ಕೃಷಿ ಮಾಡುವ ಇಚ್ಛೆ ಇದ್ದೂ, ಕೃಷಿಕರಲ್ಲದಿದ್ದರೆ ಕೃಷಿ ಭೂಮಿ ಹೊಂದಂತೆ ಮಾಡುತ್ತಿದ್ದ ಈ ನಿಯಮವನ್ನು ತೆಗೆದುಹಾಕಲಾಗಿದೆ. 79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್”
79(ಎ, ಬಿ) ಕಲಂ ಅಗತ್ಯತೆ, ಸಾಧಕ-ಬಾಧಕಗಳ ಪರಾಮರ್ಶೆಗೆ ಸಿದ್ದರಾಮಯ್ಯ ಅವರೂ ಸಿಎಂ ಆಗಿದ್ದಾಗ ಶ್ರೀನಿವಾಸ ಪ್ರಸಾದ್ರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ ಮಾಡಿದ್ದರು. ಆದರೆ, ಈ ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರದ್ದು ಈಗ ದಿವ್ಯ ಮೌನ. ಈ ಕಲಂ ತೆಗೆದು ಹಾಕಿ ಕೃಷಿ ಮಾಡುವ ಮನಸ್ಸುಗಳಿಗೆ ಕೃಷಿ ಸಾಧ್ಯವಾಗಿಸುತ್ತಿರುವುದು ಜೆಡಿಎಸ್. 6/10
— H D Kumaraswamy (@hd_kumaraswamy) December 9, 2020
ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್
“79(ಎ, ಬಿ) ಕಲಂಗೆ ಇತಿಶ್ರೀ ಹಾಡಿರುವುದು ನಮ್ಮ ಕೃಷಿ ವ್ಯಾಪ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಯುವಕರನ್ನು ಕೃಷಿಯತ್ತ ಆಕರ್ಷಿಸಲು ಸಹಾಯಕವಾಗುತ್ತದೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಬಯಸುವವರಿಗೆ ಹಾದಿ ಸುಗಮವಾಗುತ್ತದೆ. ಸಾಂಪ್ರದಾಯಕ ಕೃಷಿಯ ಜಾಗಕ್ಕೆ ವೈಜ್ಞಾನಿಕ ಕೃಷಿ ಬರಲು ಅನುಕೂಲವಾಗುತ್ತದೆ. ಇದನ್ನು ಎಲ್ಲರೂ ಗಮನಿಸಬೇಕು. ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್ ಅನ್ನು ದೂರಲಾಗುತ್ತಿದೆ. ಜೆಡಿಎಸ್ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್ ಅನ್ನು ದೂರಲಾಗುತ್ತಿದೆ. ಜೆಡಿಎಸ್ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ. 8/10
— H D Kumaraswamy (@hd_kumaraswamy) December 9, 2020
ಇದನ್ನೂ ಓದಿ: ಜನರು ಸ್ವಾಭಿಮಾನದಿಂದ ಬದುಕಲು ಭೂಮಿ ಕೊಡಿ: ಹೋರಾಟಗಾರ ನಿರ್ವಾಣಪ್ಪ
“ಮಿತಿಗಳು, ಭಿನ್ನಮತಗಳ ನಡುವೆಯೂ ರೈತರ 25 ಸಾವಿರ ಕೋಟಿಗೂ ಮಿಗಿಲಾದ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿಯೇ ಹೊರತು ಬೇರಾರೂ ಅಲ್ಲ. ಆಗ ನನ್ನನ್ನು ಯಾರೊಬ್ಬರೂ ಬೆನ್ನುತಟ್ಟಲಿಲ್ಲ, ರೈತರಿಗೆ ನೀಡಿದ ವಚನ ಪಾಲಿಸಿ, ಅಧಿಕಾರದಿಂದ ಹೊರ ನಡೆದಾಗ ನನ್ನ ಬೆಂಬಲಕ್ಕೆ ಯಾರೂ ಬರಲಿಲ್ಲ. ಈಗ ಸುಧಾರಣೆ ಕ್ರಮಗಳನ್ನು ಸಾಧಿಸಿದಾಗಲೂ ನಾನು ಏಕಾಂಗಿ. ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ”
ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ
ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ. 10/10
— H D Kumaraswamy (@hd_kumaraswamy) December 9, 2020
ರಾಜ್ಯಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಜಾರಿಗೆ ತರಲು ಮುಂದಾಗಿದ್ದ ವಿವಾದಾತ್ಮಕ ಕೃಷಿ ಕಾನೂನುಗಳು ನಿನ್ನೆ ವಿಧಾನಪರಿಷತ್ತಿನಲ್ಲಿ ಬಹುಮತಪಡೆದು ಅಂಗೀಕಾರವಾಗಿದೆ.
ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ
ರಾಜ್ಯ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಈ ಮೊದಲು ವಿರೋಧಿಸಿದ್ದ ಜೆಡಿಎಸ್ ಪಕ್ಷ ಇಂದು ಅಚ್ಚರಿಯ ರೀತಿಯಲ್ಲಿ ಬಿಜೆಪಿ ಪರವಾಗಿ ವಿಧಾನ ಪರಿಷತ್ನಲ್ಲಿ ಮಸೂದೆ ಪರ ಮತ ಹಾಕಿದೆ. ಇದರಿಂದ ಮಸೂದೆಯು ಕಾಯ್ದೆಯಾಗಿ ಅಂಗೀಕಾರಗೊಂಡಿದೆ.
ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಮಸೂದೆಗೆ ಆಗಸ್ಟ್ ಅಂತ್ಯದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಬಹುಮತವಿದ್ದ ಬಿಜೆಪಿ ಅಂಗೀಕರಿಸಿತ್ತು. ಆದರೆ ಅದೇ ಸಮಯದಲ್ಲಿ ವಿಧಾನಪರಿಷತ್ನಲ್ಲಿ ಆ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿರಲಿಲ್ಲ.
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ
ಈ ವಿಷಯ ತಿಳಿಯುತ್ತಿದ್ದಂತೆ ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷವು ತನ್ನನ್ನು ಬಿಜೆಪಿಗೆ ಮಾರಿಕೊಂಡಿದೆ ಎಂದು ರೈತರು ಕಿಡಿಕಾರಿದ್ದಾರೆ. ಏಕಾಏಕಿ ಮೌರ್ಯ ಸರ್ಕಲ್ ನಲ್ಲಿ ಹೋರಾಟಗಾರರು ರಸ್ತೆತಡೆ ಆರಂಭಿಸಿ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಸ್ತೆ ತಡೆ ಪ್ರತಿಭಟನೆ ಮುಂದುವರೆಯುತ್ತಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಹಲವು ಹೋರಾಟಗಾರರನ್ನು ಬಂಧಿಸಲಾಗಿತ್ತು.
ಭೂ ಸುಧಾರಣಾ ಕಾಯಿದೆಗೆ ಹೊಸ ತಿದ್ದುಪಡಿ ಪ್ರಕಾರ ಈಗ ಒಬ್ಬರು 450 ಎಕರೆಗೂ ಹೆಚ್ಚು ಕೃಷಿ ಭೂಮಿ ಹೊಂದಬಹುದು. ಇಂತಹ ಕರಾಳ ತಿದ್ದುಪಡಿ ತರಲು ಕಾರ್ಪೋರೇಟ್ ಗಳ ಜೊತೆ ಮಾರಿಕೊಂಡು ಶಾಮೀಲಾಗಿರುವ ಜೆಡಿಎಸ್, ಬಿಜೆಪಿಗೆ ಧಿಕ್ಕಾರ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ