Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...