Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....