Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...