Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...