Homeಕರ್ನಾಟಕಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

ಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರು, ದಲಿತರು, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪೂರ್ಣಕುಂಭ ಕಳಶ ಹಾಗೂ ಗೋವುಗಳೊಂದಿಗೆ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

“ಯಾವುದೇ ಜನಪ್ರತಿನಿಧಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. 17 ಗ್ರಾಮಗಳ ಮಹಿಳೆಯರು ಪೂರ್ಣಕುಂಭ ಕಳಶಗಳೊಂದಿಗೆ ಪ್ರತಿಭಟನೆಗೆ ಆಗಮಿಸಿದ್ದರು. ಗೋವುಗಳನ್ನು ಅಲಂಕರಿಸಿಕೊಂಡು ರಾಮಗೊಂಡನಹಳ್ಳಿಯಿಂದ ಬಿಡಿಎ ಕಚೇರಿಯವರೆಗೆ ಗೋವುಗಳ ಬೃಹತ್‌ ಜಾಥಾ ನಡೆಸಲಾಯಿತು.

ಮುಖಂಡರಾದ ರಮೇಶ್ ರಾಮಗೊಂಡನಹಳ್ಳಿ ಮಾತನಾಡಿ, “ಮುಖ್ಯಮಂತ್ರಿ, ಪ್ರಧಾನಮಂತ್ರಿ, ಕೇಂದ್ರ ಸಚಿವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು, ಸ್ಥಳೀಯ ರಾಜಕಾರಣಿಗಳು- ಎಲ್ಲರಿಗೂ ಮನವಿಯನ್ನು ಸಲ್ಲಿಸಿದ್ದೇವೆ. ನಮ್ಮ ಮನವಿಗೆ ಜನಪ್ರತಿನಿಧಿಗಳು ಕಿವಿಗೊಡುತ್ತಿಲ್ಲ. ನಮ್ಮ ಭೂಮಿಯನ್ನು ಆಕ್ರಮಿಸಲು ಮುಂದಾಗಿರುವುದನ್ನು ಖಂಡಿಸಿ ಸಂಕ್ರಾಂತಿ ದಿನದಂದು ಬೀದಿಗೆ ಇಳಿದಿದ್ದೇವೆ” ಎಂದಿದ್ದಾರೆ.

“ಗೋರಕ್ಷಕ ಸರ್ಕಾರ ಎನ್ನುವ ಬಿಜೆಪಿಯ ವಿರುದ್ಧ ಹೋರಾಡುತ್ತಿದ್ದೇವೆ. ನಾವೇನು ಪಾಕಿಸ್ತಾನಿಗಳಾ? ನಾವು ಹಿಂದೂಗಳಲ್ಲವಾ? ನಮ್ಮ ಗೋವುಗಳನ್ನು ರಕ್ಷಿಸಬಾರದಾ? ನಮಗೆ ಹೈನುಗಾರಿಕೆ ಮತ್ತು ಬೇರ್‍ಯಾವುದೇ ಉದ್ಯೋಗ ಗೊತ್ತಿಲ್ಲ. ಹೀಗಿರುವ ನಮ್ಮ ಜಾಗವನ್ನು ಆಕ್ರಮಿಸಿಕೊಳ್ಳಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಮ್ಮ ರೈತರ ಜೊತೆಗೆ ಚರ್ಚೆ ಮಾಡಬೇಕು. ಯೋಜನೆ ಮಾಡಲೇಬೇಕಾದರೆ 2013ರ ಕಾಯ್ದೆಯ ಪ್ರಕಾರ ನಮಗೆ ಪುನರ್‌ವಸತಿ ಕಲ್ಪಿಸಬೇಕು. ಬದಲಿ ಭೂಮಿಯನ್ನು ನೀಡಬೇಕು. ಇಲ್ಲವಾದರೆ ನಮ್ಮ ಪ್ರಾಣಹೋದರೂ  ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಎಚ್ಚರಿಸಿದರು.

ಏನಿದು ವಿವಾದ?

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಇಲ್ಲಿನ ನಿವಾಸಿಗಳು ಹೋರಾಟ ನಡೆಯುತ್ತಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಅದನ್ನೇ ಮುಂದುಮಾಡಿ LAA 1894ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...