Homeಕರ್ನಾಟಕಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

ಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರು, ದಲಿತರು, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪೂರ್ಣಕುಂಭ ಕಳಶ ಹಾಗೂ ಗೋವುಗಳೊಂದಿಗೆ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

“ಯಾವುದೇ ಜನಪ್ರತಿನಿಧಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. 17 ಗ್ರಾಮಗಳ ಮಹಿಳೆಯರು ಪೂರ್ಣಕುಂಭ ಕಳಶಗಳೊಂದಿಗೆ ಪ್ರತಿಭಟನೆಗೆ ಆಗಮಿಸಿದ್ದರು. ಗೋವುಗಳನ್ನು ಅಲಂಕರಿಸಿಕೊಂಡು ರಾಮಗೊಂಡನಹಳ್ಳಿಯಿಂದ ಬಿಡಿಎ ಕಚೇರಿಯವರೆಗೆ ಗೋವುಗಳ ಬೃಹತ್‌ ಜಾಥಾ ನಡೆಸಲಾಯಿತು.

ಮುಖಂಡರಾದ ರಮೇಶ್ ರಾಮಗೊಂಡನಹಳ್ಳಿ ಮಾತನಾಡಿ, “ಮುಖ್ಯಮಂತ್ರಿ, ಪ್ರಧಾನಮಂತ್ರಿ, ಕೇಂದ್ರ ಸಚಿವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು, ಸ್ಥಳೀಯ ರಾಜಕಾರಣಿಗಳು- ಎಲ್ಲರಿಗೂ ಮನವಿಯನ್ನು ಸಲ್ಲಿಸಿದ್ದೇವೆ. ನಮ್ಮ ಮನವಿಗೆ ಜನಪ್ರತಿನಿಧಿಗಳು ಕಿವಿಗೊಡುತ್ತಿಲ್ಲ. ನಮ್ಮ ಭೂಮಿಯನ್ನು ಆಕ್ರಮಿಸಲು ಮುಂದಾಗಿರುವುದನ್ನು ಖಂಡಿಸಿ ಸಂಕ್ರಾಂತಿ ದಿನದಂದು ಬೀದಿಗೆ ಇಳಿದಿದ್ದೇವೆ” ಎಂದಿದ್ದಾರೆ.

“ಗೋರಕ್ಷಕ ಸರ್ಕಾರ ಎನ್ನುವ ಬಿಜೆಪಿಯ ವಿರುದ್ಧ ಹೋರಾಡುತ್ತಿದ್ದೇವೆ. ನಾವೇನು ಪಾಕಿಸ್ತಾನಿಗಳಾ? ನಾವು ಹಿಂದೂಗಳಲ್ಲವಾ? ನಮ್ಮ ಗೋವುಗಳನ್ನು ರಕ್ಷಿಸಬಾರದಾ? ನಮಗೆ ಹೈನುಗಾರಿಕೆ ಮತ್ತು ಬೇರ್‍ಯಾವುದೇ ಉದ್ಯೋಗ ಗೊತ್ತಿಲ್ಲ. ಹೀಗಿರುವ ನಮ್ಮ ಜಾಗವನ್ನು ಆಕ್ರಮಿಸಿಕೊಳ್ಳಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಮ್ಮ ರೈತರ ಜೊತೆಗೆ ಚರ್ಚೆ ಮಾಡಬೇಕು. ಯೋಜನೆ ಮಾಡಲೇಬೇಕಾದರೆ 2013ರ ಕಾಯ್ದೆಯ ಪ್ರಕಾರ ನಮಗೆ ಪುನರ್‌ವಸತಿ ಕಲ್ಪಿಸಬೇಕು. ಬದಲಿ ಭೂಮಿಯನ್ನು ನೀಡಬೇಕು. ಇಲ್ಲವಾದರೆ ನಮ್ಮ ಪ್ರಾಣಹೋದರೂ  ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಎಚ್ಚರಿಸಿದರು.

ಏನಿದು ವಿವಾದ?

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಇಲ್ಲಿನ ನಿವಾಸಿಗಳು ಹೋರಾಟ ನಡೆಯುತ್ತಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಅದನ್ನೇ ಮುಂದುಮಾಡಿ LAA 1894ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...