Homeಕರ್ನಾಟಕಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

ಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರು, ದಲಿತರು, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪೂರ್ಣಕುಂಭ ಕಳಶ ಹಾಗೂ ಗೋವುಗಳೊಂದಿಗೆ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

“ಯಾವುದೇ ಜನಪ್ರತಿನಿಧಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. 17 ಗ್ರಾಮಗಳ ಮಹಿಳೆಯರು ಪೂರ್ಣಕುಂಭ ಕಳಶಗಳೊಂದಿಗೆ ಪ್ರತಿಭಟನೆಗೆ ಆಗಮಿಸಿದ್ದರು. ಗೋವುಗಳನ್ನು ಅಲಂಕರಿಸಿಕೊಂಡು ರಾಮಗೊಂಡನಹಳ್ಳಿಯಿಂದ ಬಿಡಿಎ ಕಚೇರಿಯವರೆಗೆ ಗೋವುಗಳ ಬೃಹತ್‌ ಜಾಥಾ ನಡೆಸಲಾಯಿತು.

ಮುಖಂಡರಾದ ರಮೇಶ್ ರಾಮಗೊಂಡನಹಳ್ಳಿ ಮಾತನಾಡಿ, “ಮುಖ್ಯಮಂತ್ರಿ, ಪ್ರಧಾನಮಂತ್ರಿ, ಕೇಂದ್ರ ಸಚಿವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು, ಸ್ಥಳೀಯ ರಾಜಕಾರಣಿಗಳು- ಎಲ್ಲರಿಗೂ ಮನವಿಯನ್ನು ಸಲ್ಲಿಸಿದ್ದೇವೆ. ನಮ್ಮ ಮನವಿಗೆ ಜನಪ್ರತಿನಿಧಿಗಳು ಕಿವಿಗೊಡುತ್ತಿಲ್ಲ. ನಮ್ಮ ಭೂಮಿಯನ್ನು ಆಕ್ರಮಿಸಲು ಮುಂದಾಗಿರುವುದನ್ನು ಖಂಡಿಸಿ ಸಂಕ್ರಾಂತಿ ದಿನದಂದು ಬೀದಿಗೆ ಇಳಿದಿದ್ದೇವೆ” ಎಂದಿದ್ದಾರೆ.

“ಗೋರಕ್ಷಕ ಸರ್ಕಾರ ಎನ್ನುವ ಬಿಜೆಪಿಯ ವಿರುದ್ಧ ಹೋರಾಡುತ್ತಿದ್ದೇವೆ. ನಾವೇನು ಪಾಕಿಸ್ತಾನಿಗಳಾ? ನಾವು ಹಿಂದೂಗಳಲ್ಲವಾ? ನಮ್ಮ ಗೋವುಗಳನ್ನು ರಕ್ಷಿಸಬಾರದಾ? ನಮಗೆ ಹೈನುಗಾರಿಕೆ ಮತ್ತು ಬೇರ್‍ಯಾವುದೇ ಉದ್ಯೋಗ ಗೊತ್ತಿಲ್ಲ. ಹೀಗಿರುವ ನಮ್ಮ ಜಾಗವನ್ನು ಆಕ್ರಮಿಸಿಕೊಳ್ಳಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಮ್ಮ ರೈತರ ಜೊತೆಗೆ ಚರ್ಚೆ ಮಾಡಬೇಕು. ಯೋಜನೆ ಮಾಡಲೇಬೇಕಾದರೆ 2013ರ ಕಾಯ್ದೆಯ ಪ್ರಕಾರ ನಮಗೆ ಪುನರ್‌ವಸತಿ ಕಲ್ಪಿಸಬೇಕು. ಬದಲಿ ಭೂಮಿಯನ್ನು ನೀಡಬೇಕು. ಇಲ್ಲವಾದರೆ ನಮ್ಮ ಪ್ರಾಣಹೋದರೂ  ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಎಚ್ಚರಿಸಿದರು.

ಏನಿದು ವಿವಾದ?

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಇಲ್ಲಿನ ನಿವಾಸಿಗಳು ಹೋರಾಟ ನಡೆಯುತ್ತಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಅದನ್ನೇ ಮುಂದುಮಾಡಿ LAA 1894ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...