Homeಕರ್ನಾಟಕಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

ಪ್ರಾಣ ಹೋದರೂ ಭೂಮಿ ಬಿಡೆವು: ಸಂಕ್ರಾಂತಿಯಂದು ಗೋವುಗಳೊಂದಿಗೆ ಬೀದಿಗಿಳಿದ ಬೆಂಗಳೂರು ರೈತರು

- Advertisement -
- Advertisement -

ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಸುತ್ತಮುತ್ತಲ 17 ಗ್ರಾಮಗಳ ರೈತರು, ದಲಿತರು, ಹಿಂದುಳಿದ ವರ್ಗಗಳ ಜನರಿಗೆ ಸೇರಿದ ಭೂಮಿ ಹಾಗೂ ಮನೆಗಳನ್ನು ಹಳೆ ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪೂರ್ಣಕುಂಭ ಕಳಶ ಹಾಗೂ ಗೋವುಗಳೊಂದಿಗೆ ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ.

“ಯಾವುದೇ ಜನಪ್ರತಿನಿಧಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. 17 ಗ್ರಾಮಗಳ ಮಹಿಳೆಯರು ಪೂರ್ಣಕುಂಭ ಕಳಶಗಳೊಂದಿಗೆ ಪ್ರತಿಭಟನೆಗೆ ಆಗಮಿಸಿದ್ದರು. ಗೋವುಗಳನ್ನು ಅಲಂಕರಿಸಿಕೊಂಡು ರಾಮಗೊಂಡನಹಳ್ಳಿಯಿಂದ ಬಿಡಿಎ ಕಚೇರಿಯವರೆಗೆ ಗೋವುಗಳ ಬೃಹತ್‌ ಜಾಥಾ ನಡೆಸಲಾಯಿತು.

ಮುಖಂಡರಾದ ರಮೇಶ್ ರಾಮಗೊಂಡನಹಳ್ಳಿ ಮಾತನಾಡಿ, “ಮುಖ್ಯಮಂತ್ರಿ, ಪ್ರಧಾನಮಂತ್ರಿ, ಕೇಂದ್ರ ಸಚಿವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು, ಸ್ಥಳೀಯ ರಾಜಕಾರಣಿಗಳು- ಎಲ್ಲರಿಗೂ ಮನವಿಯನ್ನು ಸಲ್ಲಿಸಿದ್ದೇವೆ. ನಮ್ಮ ಮನವಿಗೆ ಜನಪ್ರತಿನಿಧಿಗಳು ಕಿವಿಗೊಡುತ್ತಿಲ್ಲ. ನಮ್ಮ ಭೂಮಿಯನ್ನು ಆಕ್ರಮಿಸಲು ಮುಂದಾಗಿರುವುದನ್ನು ಖಂಡಿಸಿ ಸಂಕ್ರಾಂತಿ ದಿನದಂದು ಬೀದಿಗೆ ಇಳಿದಿದ್ದೇವೆ” ಎಂದಿದ್ದಾರೆ.

“ಗೋರಕ್ಷಕ ಸರ್ಕಾರ ಎನ್ನುವ ಬಿಜೆಪಿಯ ವಿರುದ್ಧ ಹೋರಾಡುತ್ತಿದ್ದೇವೆ. ನಾವೇನು ಪಾಕಿಸ್ತಾನಿಗಳಾ? ನಾವು ಹಿಂದೂಗಳಲ್ಲವಾ? ನಮ್ಮ ಗೋವುಗಳನ್ನು ರಕ್ಷಿಸಬಾರದಾ? ನಮಗೆ ಹೈನುಗಾರಿಕೆ ಮತ್ತು ಬೇರ್‍ಯಾವುದೇ ಉದ್ಯೋಗ ಗೊತ್ತಿಲ್ಲ. ಹೀಗಿರುವ ನಮ್ಮ ಜಾಗವನ್ನು ಆಕ್ರಮಿಸಿಕೊಳ್ಳಲು ಬಿಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ನಮ್ಮ ರೈತರ ಜೊತೆಗೆ ಚರ್ಚೆ ಮಾಡಬೇಕು. ಯೋಜನೆ ಮಾಡಲೇಬೇಕಾದರೆ 2013ರ ಕಾಯ್ದೆಯ ಪ್ರಕಾರ ನಮಗೆ ಪುನರ್‌ವಸತಿ ಕಲ್ಪಿಸಬೇಕು. ಬದಲಿ ಭೂಮಿಯನ್ನು ನೀಡಬೇಕು. ಇಲ್ಲವಾದರೆ ನಮ್ಮ ಪ್ರಾಣಹೋದರೂ  ನಮ್ಮ ಭೂಮಿಯನ್ನು ಬಿಟ್ಟುಕೊಡುವುದಿಲ್ಲ” ಎಂದು ಎಚ್ಚರಿಸಿದರು.

ಏನಿದು ವಿವಾದ?

17 ಗ್ರಾಮಗಳ ಸುಮಾರು 2,000ಕ್ಕೂ ಹೆಚ್ಚು ಕುಟುಂಬಗಳು ಇರುವ ತುಂಡು ಭೂಮಿಯನ್ನು ನಂಬಿಕೊಂಡು ಕೃಷಿ ಮಾಡಿ ಜೀವನ ಕಟ್ಟಿಕೊಂಡಿದ್ದಾರೆ. ಸಣ್ಣ ಪುಟ್ಟ ಮನೆಗಳನ್ನು ನಿರ್ಮಿಸಿಕೊಂಡು, ಹೈನುಗಾರಿಕೆ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಭೂ ಸ್ವಾಧೀನ ಹೆಸರಿನಲ್ಲಿ ನಮ್ಮನ್ನು ಒಕ್ಕಲೆಬ್ಬಿಸಿ ತಬ್ಬಲಿಗಳಾಗಿ ಮಾಡಬೇಡಿ, ಬೀದಿಪಾಲು ಮಾಡಬೇಡಿ ಎಂದು ಕಳೆದ 3 ವರ್ಷಗಳಿಂದಲೂ ಇಲ್ಲಿನ ನಿವಾಸಿಗಳು ಹೋರಾಟ ನಡೆಯುತ್ತಿದೆ.

ಬೆಂಗಳೂರು ಅಭಿವೃದ್ದಿಯ ಹೆಸರು ಹೇಳಿ ಇರುವ ಮನೆಗಳನ್ನು ಹೊಡೆದುಹಾಕಿ ಲೇಔಟ್ ನಿರ್ಮಾಣ ಮಾಡಿ ಇನ್ನೊಬ್ಬರಿಗೆ ಸೈಟ್‌ ಕೊಡುವಂತಹದ್ದು ಯಾವ ನ್ಯಾಯ? ನಮ್ಮನ್ನು ನಮ್ಮ ಮೂಲಸ್ಥಳದಿಂದ ದಯವಿಟ್ಟು ಒಕ್ಕಲೆಬ್ಬಿಸಬೇಡಿ ಎಂದು ಜನರು ಬೇಡಿಕೊಂಡರೂ ಸರ್ಕಾರ ಅವರ ಗೋಳು ಕೇಳಲು ಸಿದ್ದವಿಲ್ಲ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಕೆ.ಶಿವರಾಮ ಕಾರಂತ ಬಡಾವಣೆಯನ್ನು ಅಭಿವೃದ್ಧಿಪಡಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಡಿಸೆಂಬರ್ 30, 2008ರಲ್ಲಿ ಹೊರಡಿಸಲಾಗಿದ್ದ ಪೂರ್ವಭಾವಿ ಅಧಿಸೂಚನೆಯ ಅವಧಿ ಮುಗಿದಿದ್ದರೂ ಅದನ್ನೇ ಮುಂದುಮಾಡಿ LAA 1894ರ ಅಡಿಯಲ್ಲಿ 3546 ಎಕರೆ ಮತ್ತು 12 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಆದರೆ ಭೂಮಿಯನ್ನು ಕಳೆದುಕೊಂಡವರಿಗೆ, ʼಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕ ಮತ್ತು ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2013ʼ (LARR 2013)ರ ಅನ್ವಯ ಪರಿಹಾರವನ್ನು ಒದಗಿಸಬೇಕು ಎಂದು ದಿನಾಂಕ 03.11.2022 ರಂದು ತನ್ನ ತೀರ್ಪಿತ್ತು ಸರ್ವೋಚ್ಛ ನ್ಯಾಯಲಯವು ಭೂಮಿಯನ್ನು ಕಳೆದುಕೊಳ್ಳುವವರ ಹಕ್ಕುಗಳನ್ನು ಎತ್ತಿಹಿಡಿದಿದೆ. ಆ ಪ್ರಕಾರ LARR 2013ಯು ಜಾರಿಗೆ ಬಂದ ನಂತರ  LAA 1894 ಅನ್ನು ಅನ್ವಯಿಸಲಾಗುವುದಿಲ್ಲ. ಆದರೂ ಹಳೆಯ ಕ್ರೂರ ಮತ್ತು ಶೋಷಣೆಯ ಪ್ರತೀಕವಾಗಿರುವ, ವಸಾಹತುಶಾಹಿ ಪಳೆಯುಳಿಕೆ ಭೂಸ್ವಾಧೀನ ಕಾಯಿದೆ- 1894ರಡಿಯಲ್ಲಿ ಭೂಮಿ ವಶಪಡಿಸಿಕೊಂಡು ನಮ್ಮನ್ನು ಬೀದಿಗೆ ತಳ್ಳಲಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಸದರಿ ಲೇಔಟ್‌ ನಿರ್ಮಾಣಕ್ಕೆ ತೀರ ಅಗತ್ಯವಿದಲ್ಲಿ ಮಾತ್ರವೇ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ಈ ಪ್ರಕ್ರಿಯೆಯು LARR 2013 ಕಾಯ್ದೆಯಡಿಯಲ್ಲಿ ಉಲ್ಲೇಖಿಸಲಾಗಿರುವ ಕಾರ್ಯವಿಧಾನಗಳನ್ನು ಅನುಸರಿಸಿಯೇ ಭೂಸ್ವಾಧೀನ ಪಡಿಸಿಕೊಳ್ಳಬೇಕೆಂಬ ಮನವಿಯನ್ನು ರಾಜ್ಯ ಸರ್ಕಾರದ ಬಳಿ ಸಲ್ಲಿಸುತ್ತಲೇ ಬಂದಿದ್ದೇವೆ. ಆಶ್ಚರ್ಯವೆಂಬಂತೆ ಹಾಗೂ ಗೊಂದಲಕಾರಿಯಾಗಿ BDA ಯು ದಿನಾಂಕ 30.10.2018 ರಂದು LARR 2013ರ ನಿಬಂಧನೆಗಳಡಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿತು. ಆದರೂ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ಪೀಠವು ದಿನಾಂಕ 03.12.2020ರಂದು ನೀಡಿದ ಆದೇಶದ ಮೂಲಕ ಭೂಮಿಯ ಡಿನೋಟಿಫಿಕೇಶನ್‌ಗಾಗಿ ಅರ್ಜಿಗಳನ್ನು ಪರಿಗಣಿಸಲು ನ್ಯಾಯಮೂರ್ತಿ ಚಂದ್ರಶೇಖರ್ ಸಮಿತಿಯನ್ನು ಸ್ಥಾಪಿಸಿತು ಮಾತ್ರವಲ್ಲ ವಸಾಹತುಶಾಹಿ ಕಾಲದ LAA 1894ರ ಪ್ರಕಾರವೇ ಪರಿಹಾರ ನೀಡಬೇಕೆಂದು ತೀರ್ಪಿತ್ತಿತು. ಸರ್ವೋಚ್ಛ ನ್ಯಾಯಾಲದ ಈ ಪೀಠವು ನಮ್ಮ ಮನವಿಯನ್ನು ಆಲಿಸದೆಯೇ ಇಂದಿಗೂ ವಿವಿಧ ಆದೇಶಗಳನ್ನು ನೀಡುತ್ತಲಿದೆ. ಯಾವ ಕಾರಣಕ್ಕೆ ಹೀಗೆ ಎಂದು ನಾವು ಅರಿಯಲು ಸಾಧ್ಯವಾಗುತ್ತಿಲ್ಲವಾದರೂ, ಇದರರ್ಥ LARR, 2013ರ ಅಡಿಯಲ್ಲಿ ನಾವು ಪರಿಹಾರವನ್ನು ಪಡೆದುಕೊಳ್ಳುವ ನಮ್ಮ ಕಾನೂನಾತ್ಮಕ ಹಕ್ಕನ್ನು ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮಹಾನದಿ ಕೋಲ್‌ ಫೀಲ್ಡ್ಸ್‌ ಪ್ರಕರಣದಲ್ಲಿ ಅಂದಿನ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಸರ್ವೋಚ್ಛ ನ್ಯಾಯಾಲಯದ ತ್ರಿಸದಸ್ಯ ಪೀಠ ನೀಡಿದ ತೀರ್ಪೇ ದೇಶದ ಕಾನೂನು. ಇದರನ್ವಯ ಸದರಿ ಪ್ರಕರಣ ಸೇರಿದಂತೆ, ಭೂಸ್ವಾಧೀನ ಪ್ರಕರಣಗಳೆಲ್ಲವುಗಳಲ್ಲಿಯೂ ಭೂಮಿ ಕಳೆದುಕೊಳ್ಳುವವರ ಹಿತಾಸಕ್ತಿಗಳನ್ನೂ – ಹಕ್ಕುಗಳನ್ನೂ ರಕ್ಷಿಸಲಾಗಿದೆ ಎಂಬುದನ್ನು ಕರ್ನಾಟಕ ರಾಜ್ಯ ಸರ್ಕಾರವು ಖಚಿತಪಡಿಸಿಕೊಳ್ಳಬೇಕಿದೆ. ಹಾಗಾಗಿ  ಸದ್ಯ ಚಾಲ್ತಿಯಲ್ಲಿರುವ ಆದೇಶಗಳ ತುರ್ತು ಮರು-ಪರಿಶೀಲನೆಗೆ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಬೇಕೆಂದು ಕೂಡ ನಾವು ಒತ್ತಾಯಿಸುತ್ತೇವೆ ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...