Homeಮುಖಪುಟಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

- Advertisement -
- Advertisement -

ನೂತನ ಪಾರ್ಲಿಮೆಂಟ್ ಭೂಮಿ ಪೂಜೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲವೆಂಬ ಚರ್ಚೆ ಆರಂಭವಾಗಿದೆ. ನಿಜಕ್ಕೂ ಇಂತಹ ಸಂವಿಧಾನ ವಿರೋಧಿ ನಡೆ ಸಹ್ಯವಲ್ಲ. ರಾಷ್ಟ್ರಪತಿಗಳು ದಲಿತರೆಂಬ ಕಾರಣಕ್ಕೆ ಇಂತಹ ಅಮಾನವೀಯ ಕೃತ್ಯದಲ್ಲಿ ಕೇಂದ್ರ ಸರ್ಕಾರವೇ ಭಾಗಿಯಾಗಿದ್ದು ಖುದ್ದು ಪ್ರಧಾನ ಮಂತ್ರಿಗಳೇ ಇದರ ಸಹಭಾಗಿಯಾಗಿರುವುದು ವಿಷಾದನೀಯ ಸಂಗತಿ.

ಇದರ ಜೊತೆಗೆ ಮತ್ತೊಂದು ಸಂವಿಧಾನ ವಿರೋಧಿ ಕೃತ್ಯವೂ ಅಂದು ನಡೆದು ಹೋಗಿದೆ. ಭಾರತದ ಸಂವಿಧಾನವು ಧರ್ಮ, ಲಿಂಗ, ಜಾತಿ, ಜನಾಂಗ, ಪ್ರದೇಶಗಳ ಅಧಾರದಲ್ಲಿ ತಾರತಮ್ಯ ಸಲ್ಲದು ಎಂದು ಹೇಳಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಆದರೆ ನೂತನ ಪಾರ್ಲಿಮೆಂಟ್ ಕಟ್ಟಡದ ಭೂಮಿ ಪೂಜೆಯನ್ನು ಕೇವಲ ಬ್ರಾಹ್ಮಣ ಪುರೋಹಿತರು ನೆರವೇರಿಸಿರುವುದು ಸಂವಿಧಾನ ವಿರೋಧಿಯೇ ಆಗಿದೆ.ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ಹಿಂದೂ ಧರ್ಮದಲ್ಲಿ ಬಹುತ್ವ ಪೂಜಾರಾಧನೆ ಇದೆ. ನೂರಾರು ಪಂಥದ ಪೂಜಾವಿಧಿಗಳಿವೆ. ಅಣ್ಣಮ್ಮ, ಮಾರಮ್ಮ, ಹುಲಿಗೆಮ್ಮ, ಉಕ್ಕಡದಮ್ಮ ಮುಂತಾದ ಮಾತೃಪ್ರಧಾನ ದೇವತೆಗಳಿಗೆ ಮಹಿಳಾ ಪೂಜಾರಿಗಳೂ ಇದ್ದಾರೆ. ಅದಲ್ಲದೆ ನಾಥ-ದತ್ತ ಪಂಥದಲ್ಲಿ ಶೂದ್ರ ಜಾತಿಗಳ ಪೂಜಾರಿಗಳಿದ್ದಾರೆ‌. ಲಿಂಗಾಯತ, ವೀರಶೈವ, ಬುಡಕಟ್ಟು, ದಲಿತ ಪೂಜಾರಿಗಳಿದ್ದಾರೆ. ದಕ್ಷಿಣ, ಈಶಾನ್ಯ, ಮಧ್ಯ ಭಾರತದಲ್ಲಿ ಹಲವು ರೀತಿಯ ಪೂಜಾರಿಕೆ ಇದ್ದು ಅದೆಲ್ಲವೂ ಅಬ್ರಾಹ್ಮಣ ಪೂಜಾ ಪದ್ಧತಿಗಳಾಗಿವೆ. ಹಿಂದೂ ಪೂಜಾವಿಧಿ ಬಹುತ್ವ ಪೂಜಾವಿಧಿಯಾಗಿದ್ದು ಬ್ರಾಹ್ಮಣರ ಪೂಜಾವಿಧಿ ಅದರ ಒಂದು ಸಣ್ಣ ಭಾಗವಷ್ಟೆ. ಅಂತಹದ್ದರಲ್ಲಿ ಕೇವಲ ಬ್ರಾಹ್ಮಣ ವಿಧಿವಿಧಾನಗಳ ಮೂಲಕ ಸಂವಿಧಾನಾತ್ಮಕ ಶಾಸಕಾಂಗದ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿಸಿದ್ದು ಎಷ್ಟು ಸರಿ?

ಭಾರತದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಇದ್ದಾರೆಯೇ? ಹಿಂದೂಗಳಲ್ಲಿಯೇ ಸಾವಿರಾರು ಜಾತಿಗಳಿವೆ. ಇವರೆಲ್ಲರನ್ನು ಬ್ರಾಹ್ಮಣರು ಹೇಗೆ ಪ್ರತಿನಿಧಿಸುತ್ತಾರೆ. ಭಾರತೀಯರೆಂದರೆ ಬೌದ್ಧ, ಜೈನ, ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಮುಂತಾದವರು. ಅಷ್ಟೇ ಅಲ್ಲ ಧರ್ಮವನ್ನು ನಂಬದವರೂ ಸಹ ಭಾರತೀಯರೆ. ಭಾರತ ಯಾವೊಂದು ಧರ್ಮದವರ ಸ್ವತ್ತಲ್ಲ. ಭಾರತದಲ್ಲಿರುವ ಸಮಸ್ತ ಜನರೂ ಭಾರತೀಯರೇ. ಎಲ್ಲರಿಗೂ ಇರುವುದು ಒಂದೇ ಸಂವಿಧಾನ. ಇಲ್ಲಿ ಯಾವುದೋ ಒಂದು ಧರ್ಮದವರು ಮಾತ್ರ ತೆರಿಗೆ ಕಟ್ಟುವುದಿಲ್ಲ. ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದ್ದರಿಂದ ಪಾರ್ಲಿಮೆಂಟ್ ಭೂಮಿ ಪೂಜೆಗೆ ಬ್ರಾಹ್ಮಣರೊಟ್ಟಿಗೆ, ಬೌದ್ಧ ಭಿಕ್ಕುಗಳು, ಜೈನ ಶ್ರಮಣರು, ಸಿಖ್ ಗುರುಗಳು, ಮೌಲ್ವಿ, ಪಾದ್ರಿ ಹಾಗೂ ನೂರಾರು ಹಿಂದೂ ಜಾತಿಗಳ ಪೂಜಾರಿಗಳು, ಮಹಿಳಾ ಪೂಜಾರಿಗಳು ಅಲ್ಲಿದ್ದು ಭೂಮಿ ಪೂಜೆ ನೆರವೇರಿಸಬೇಕಿತ್ತಲ್ಲವೇ?

ಇದನ್ನೂ ಓದಿ: ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದೇನು ಹೊಸತಲ್ಲ. ಕಾಂಗ್ರೆಸ್ ಪಕ್ಷ ಬಾಬು ರಾಜೇಂದ್ರ ಪ್ರಸಾದರು ರಾಷ್ಟ್ರಪತಿಯಾಗಿದ್ದಾಗ 200 ಜನ ಬ್ರಾಹ್ಮಣರ ಪಾದ ಪೂಜೆ ಮಾಡಿದ್ದರು. ನೆಹರೂರವರು ಸ್ವತಂತ್ರ ಭಾಷಣ ಮಾಡಲು ಶಾಸ್ತ್ರ ಕೇಳಿ ಸಮಯ ನಿಗಧಿಗೊಳಿಸಿದ್ದರು. ಈಗಿನ ಛತ್ತೀಸ್ಗಡದ ಕಾಂಗ್ರೆಸ್ ಮುಖ್ಯಮಂತ್ರಿ ಎರಡು ವರ್ಷದ ಸಾಧನೆ ನೆನಪಿಗೆ ರಾಮ ರಥ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರೆಸಿದ್ದಾರೆ. ಹೊಸದೇನನ್ನೂ ಮಾಡಿಲ್ಲ.

ಅವರನ್ನು ಕೇಳಿದರೆ ಕಾಂಗ್ರೆಸ್ ಮಾಡಿದಾಗ ನೀವು ಕೇಳಿದಿರಾ ಎನ್ನುತ್ತಾರೆ ಅಷ್ಟೆ. ಮೋದಿಯವರು ಕಾಂಗ್ರೆಸ್‌ನವರನ್ನು ಆಪ್ತರಕ್ಷಕ ದಳದಂತೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಭಾರತೀಯರಿಗೆ ಉತ್ತರಿಸಲೇಬೇಕಲ್ಲ? ಭಾರತೀಯರೆಂದರೆ ಕಾಂಗ್ರೆಸ್-ಬಿಜೆಪಿ‌ ಮಾತ್ರವಲ್ಲ. ಧರ್ಮನಿರಪೇಕ್ಷವಾಗಿ ಯಾರೂ ಇಲ್ಲದೆ ಪ್ರಧಾನಿಗಳೇ ಒಂದು ಇಟ್ಟಿಗೆ ಇಟ್ಟಿದ್ದರೆ ನಾವೆಲ್ಲ ಚಪ್ಪಾಳೆ ತಟ್ಟಿ ಅನಂಧಿಸಬಹುದಿತ್ತಲ್ಲವೇ? ಅದು ಬಿಟ್ಟು 60 ವರ್ಷ ಕಾಂಗ್ರೆಸ್ ಮಾಡಿದ್ದನ್ನೇ ಮಾಡಿದ್ದಾರೆ.

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

ಇದನ್ನೂ ಓದಿ: ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...