Homeಮುಖಪುಟಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

- Advertisement -
- Advertisement -

ನೂತನ ಪಾರ್ಲಿಮೆಂಟ್ ಭೂಮಿ ಪೂಜೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲವೆಂಬ ಚರ್ಚೆ ಆರಂಭವಾಗಿದೆ. ನಿಜಕ್ಕೂ ಇಂತಹ ಸಂವಿಧಾನ ವಿರೋಧಿ ನಡೆ ಸಹ್ಯವಲ್ಲ. ರಾಷ್ಟ್ರಪತಿಗಳು ದಲಿತರೆಂಬ ಕಾರಣಕ್ಕೆ ಇಂತಹ ಅಮಾನವೀಯ ಕೃತ್ಯದಲ್ಲಿ ಕೇಂದ್ರ ಸರ್ಕಾರವೇ ಭಾಗಿಯಾಗಿದ್ದು ಖುದ್ದು ಪ್ರಧಾನ ಮಂತ್ರಿಗಳೇ ಇದರ ಸಹಭಾಗಿಯಾಗಿರುವುದು ವಿಷಾದನೀಯ ಸಂಗತಿ.

ಇದರ ಜೊತೆಗೆ ಮತ್ತೊಂದು ಸಂವಿಧಾನ ವಿರೋಧಿ ಕೃತ್ಯವೂ ಅಂದು ನಡೆದು ಹೋಗಿದೆ. ಭಾರತದ ಸಂವಿಧಾನವು ಧರ್ಮ, ಲಿಂಗ, ಜಾತಿ, ಜನಾಂಗ, ಪ್ರದೇಶಗಳ ಅಧಾರದಲ್ಲಿ ತಾರತಮ್ಯ ಸಲ್ಲದು ಎಂದು ಹೇಳಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಆದರೆ ನೂತನ ಪಾರ್ಲಿಮೆಂಟ್ ಕಟ್ಟಡದ ಭೂಮಿ ಪೂಜೆಯನ್ನು ಕೇವಲ ಬ್ರಾಹ್ಮಣ ಪುರೋಹಿತರು ನೆರವೇರಿಸಿರುವುದು ಸಂವಿಧಾನ ವಿರೋಧಿಯೇ ಆಗಿದೆ.ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ಹಿಂದೂ ಧರ್ಮದಲ್ಲಿ ಬಹುತ್ವ ಪೂಜಾರಾಧನೆ ಇದೆ. ನೂರಾರು ಪಂಥದ ಪೂಜಾವಿಧಿಗಳಿವೆ. ಅಣ್ಣಮ್ಮ, ಮಾರಮ್ಮ, ಹುಲಿಗೆಮ್ಮ, ಉಕ್ಕಡದಮ್ಮ ಮುಂತಾದ ಮಾತೃಪ್ರಧಾನ ದೇವತೆಗಳಿಗೆ ಮಹಿಳಾ ಪೂಜಾರಿಗಳೂ ಇದ್ದಾರೆ. ಅದಲ್ಲದೆ ನಾಥ-ದತ್ತ ಪಂಥದಲ್ಲಿ ಶೂದ್ರ ಜಾತಿಗಳ ಪೂಜಾರಿಗಳಿದ್ದಾರೆ‌. ಲಿಂಗಾಯತ, ವೀರಶೈವ, ಬುಡಕಟ್ಟು, ದಲಿತ ಪೂಜಾರಿಗಳಿದ್ದಾರೆ. ದಕ್ಷಿಣ, ಈಶಾನ್ಯ, ಮಧ್ಯ ಭಾರತದಲ್ಲಿ ಹಲವು ರೀತಿಯ ಪೂಜಾರಿಕೆ ಇದ್ದು ಅದೆಲ್ಲವೂ ಅಬ್ರಾಹ್ಮಣ ಪೂಜಾ ಪದ್ಧತಿಗಳಾಗಿವೆ. ಹಿಂದೂ ಪೂಜಾವಿಧಿ ಬಹುತ್ವ ಪೂಜಾವಿಧಿಯಾಗಿದ್ದು ಬ್ರಾಹ್ಮಣರ ಪೂಜಾವಿಧಿ ಅದರ ಒಂದು ಸಣ್ಣ ಭಾಗವಷ್ಟೆ. ಅಂತಹದ್ದರಲ್ಲಿ ಕೇವಲ ಬ್ರಾಹ್ಮಣ ವಿಧಿವಿಧಾನಗಳ ಮೂಲಕ ಸಂವಿಧಾನಾತ್ಮಕ ಶಾಸಕಾಂಗದ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿಸಿದ್ದು ಎಷ್ಟು ಸರಿ?

ಭಾರತದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಇದ್ದಾರೆಯೇ? ಹಿಂದೂಗಳಲ್ಲಿಯೇ ಸಾವಿರಾರು ಜಾತಿಗಳಿವೆ. ಇವರೆಲ್ಲರನ್ನು ಬ್ರಾಹ್ಮಣರು ಹೇಗೆ ಪ್ರತಿನಿಧಿಸುತ್ತಾರೆ. ಭಾರತೀಯರೆಂದರೆ ಬೌದ್ಧ, ಜೈನ, ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಮುಂತಾದವರು. ಅಷ್ಟೇ ಅಲ್ಲ ಧರ್ಮವನ್ನು ನಂಬದವರೂ ಸಹ ಭಾರತೀಯರೆ. ಭಾರತ ಯಾವೊಂದು ಧರ್ಮದವರ ಸ್ವತ್ತಲ್ಲ. ಭಾರತದಲ್ಲಿರುವ ಸಮಸ್ತ ಜನರೂ ಭಾರತೀಯರೇ. ಎಲ್ಲರಿಗೂ ಇರುವುದು ಒಂದೇ ಸಂವಿಧಾನ. ಇಲ್ಲಿ ಯಾವುದೋ ಒಂದು ಧರ್ಮದವರು ಮಾತ್ರ ತೆರಿಗೆ ಕಟ್ಟುವುದಿಲ್ಲ. ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದ್ದರಿಂದ ಪಾರ್ಲಿಮೆಂಟ್ ಭೂಮಿ ಪೂಜೆಗೆ ಬ್ರಾಹ್ಮಣರೊಟ್ಟಿಗೆ, ಬೌದ್ಧ ಭಿಕ್ಕುಗಳು, ಜೈನ ಶ್ರಮಣರು, ಸಿಖ್ ಗುರುಗಳು, ಮೌಲ್ವಿ, ಪಾದ್ರಿ ಹಾಗೂ ನೂರಾರು ಹಿಂದೂ ಜಾತಿಗಳ ಪೂಜಾರಿಗಳು, ಮಹಿಳಾ ಪೂಜಾರಿಗಳು ಅಲ್ಲಿದ್ದು ಭೂಮಿ ಪೂಜೆ ನೆರವೇರಿಸಬೇಕಿತ್ತಲ್ಲವೇ?

ಇದನ್ನೂ ಓದಿ: ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದೇನು ಹೊಸತಲ್ಲ. ಕಾಂಗ್ರೆಸ್ ಪಕ್ಷ ಬಾಬು ರಾಜೇಂದ್ರ ಪ್ರಸಾದರು ರಾಷ್ಟ್ರಪತಿಯಾಗಿದ್ದಾಗ 200 ಜನ ಬ್ರಾಹ್ಮಣರ ಪಾದ ಪೂಜೆ ಮಾಡಿದ್ದರು. ನೆಹರೂರವರು ಸ್ವತಂತ್ರ ಭಾಷಣ ಮಾಡಲು ಶಾಸ್ತ್ರ ಕೇಳಿ ಸಮಯ ನಿಗಧಿಗೊಳಿಸಿದ್ದರು. ಈಗಿನ ಛತ್ತೀಸ್ಗಡದ ಕಾಂಗ್ರೆಸ್ ಮುಖ್ಯಮಂತ್ರಿ ಎರಡು ವರ್ಷದ ಸಾಧನೆ ನೆನಪಿಗೆ ರಾಮ ರಥ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರೆಸಿದ್ದಾರೆ. ಹೊಸದೇನನ್ನೂ ಮಾಡಿಲ್ಲ.

ಅವರನ್ನು ಕೇಳಿದರೆ ಕಾಂಗ್ರೆಸ್ ಮಾಡಿದಾಗ ನೀವು ಕೇಳಿದಿರಾ ಎನ್ನುತ್ತಾರೆ ಅಷ್ಟೆ. ಮೋದಿಯವರು ಕಾಂಗ್ರೆಸ್‌ನವರನ್ನು ಆಪ್ತರಕ್ಷಕ ದಳದಂತೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಭಾರತೀಯರಿಗೆ ಉತ್ತರಿಸಲೇಬೇಕಲ್ಲ? ಭಾರತೀಯರೆಂದರೆ ಕಾಂಗ್ರೆಸ್-ಬಿಜೆಪಿ‌ ಮಾತ್ರವಲ್ಲ. ಧರ್ಮನಿರಪೇಕ್ಷವಾಗಿ ಯಾರೂ ಇಲ್ಲದೆ ಪ್ರಧಾನಿಗಳೇ ಒಂದು ಇಟ್ಟಿಗೆ ಇಟ್ಟಿದ್ದರೆ ನಾವೆಲ್ಲ ಚಪ್ಪಾಳೆ ತಟ್ಟಿ ಅನಂಧಿಸಬಹುದಿತ್ತಲ್ಲವೇ? ಅದು ಬಿಟ್ಟು 60 ವರ್ಷ ಕಾಂಗ್ರೆಸ್ ಮಾಡಿದ್ದನ್ನೇ ಮಾಡಿದ್ದಾರೆ.

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

ಇದನ್ನೂ ಓದಿ: ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...