Homeಮುಖಪುಟಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

- Advertisement -
- Advertisement -

ನೂತನ ಪಾರ್ಲಿಮೆಂಟ್ ಭೂಮಿ ಪೂಜೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲವೆಂಬ ಚರ್ಚೆ ಆರಂಭವಾಗಿದೆ. ನಿಜಕ್ಕೂ ಇಂತಹ ಸಂವಿಧಾನ ವಿರೋಧಿ ನಡೆ ಸಹ್ಯವಲ್ಲ. ರಾಷ್ಟ್ರಪತಿಗಳು ದಲಿತರೆಂಬ ಕಾರಣಕ್ಕೆ ಇಂತಹ ಅಮಾನವೀಯ ಕೃತ್ಯದಲ್ಲಿ ಕೇಂದ್ರ ಸರ್ಕಾರವೇ ಭಾಗಿಯಾಗಿದ್ದು ಖುದ್ದು ಪ್ರಧಾನ ಮಂತ್ರಿಗಳೇ ಇದರ ಸಹಭಾಗಿಯಾಗಿರುವುದು ವಿಷಾದನೀಯ ಸಂಗತಿ.

ಇದರ ಜೊತೆಗೆ ಮತ್ತೊಂದು ಸಂವಿಧಾನ ವಿರೋಧಿ ಕೃತ್ಯವೂ ಅಂದು ನಡೆದು ಹೋಗಿದೆ. ಭಾರತದ ಸಂವಿಧಾನವು ಧರ್ಮ, ಲಿಂಗ, ಜಾತಿ, ಜನಾಂಗ, ಪ್ರದೇಶಗಳ ಅಧಾರದಲ್ಲಿ ತಾರತಮ್ಯ ಸಲ್ಲದು ಎಂದು ಹೇಳಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಆದರೆ ನೂತನ ಪಾರ್ಲಿಮೆಂಟ್ ಕಟ್ಟಡದ ಭೂಮಿ ಪೂಜೆಯನ್ನು ಕೇವಲ ಬ್ರಾಹ್ಮಣ ಪುರೋಹಿತರು ನೆರವೇರಿಸಿರುವುದು ಸಂವಿಧಾನ ವಿರೋಧಿಯೇ ಆಗಿದೆ.ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ಹಿಂದೂ ಧರ್ಮದಲ್ಲಿ ಬಹುತ್ವ ಪೂಜಾರಾಧನೆ ಇದೆ. ನೂರಾರು ಪಂಥದ ಪೂಜಾವಿಧಿಗಳಿವೆ. ಅಣ್ಣಮ್ಮ, ಮಾರಮ್ಮ, ಹುಲಿಗೆಮ್ಮ, ಉಕ್ಕಡದಮ್ಮ ಮುಂತಾದ ಮಾತೃಪ್ರಧಾನ ದೇವತೆಗಳಿಗೆ ಮಹಿಳಾ ಪೂಜಾರಿಗಳೂ ಇದ್ದಾರೆ. ಅದಲ್ಲದೆ ನಾಥ-ದತ್ತ ಪಂಥದಲ್ಲಿ ಶೂದ್ರ ಜಾತಿಗಳ ಪೂಜಾರಿಗಳಿದ್ದಾರೆ‌. ಲಿಂಗಾಯತ, ವೀರಶೈವ, ಬುಡಕಟ್ಟು, ದಲಿತ ಪೂಜಾರಿಗಳಿದ್ದಾರೆ. ದಕ್ಷಿಣ, ಈಶಾನ್ಯ, ಮಧ್ಯ ಭಾರತದಲ್ಲಿ ಹಲವು ರೀತಿಯ ಪೂಜಾರಿಕೆ ಇದ್ದು ಅದೆಲ್ಲವೂ ಅಬ್ರಾಹ್ಮಣ ಪೂಜಾ ಪದ್ಧತಿಗಳಾಗಿವೆ. ಹಿಂದೂ ಪೂಜಾವಿಧಿ ಬಹುತ್ವ ಪೂಜಾವಿಧಿಯಾಗಿದ್ದು ಬ್ರಾಹ್ಮಣರ ಪೂಜಾವಿಧಿ ಅದರ ಒಂದು ಸಣ್ಣ ಭಾಗವಷ್ಟೆ. ಅಂತಹದ್ದರಲ್ಲಿ ಕೇವಲ ಬ್ರಾಹ್ಮಣ ವಿಧಿವಿಧಾನಗಳ ಮೂಲಕ ಸಂವಿಧಾನಾತ್ಮಕ ಶಾಸಕಾಂಗದ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿಸಿದ್ದು ಎಷ್ಟು ಸರಿ?

ಭಾರತದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಇದ್ದಾರೆಯೇ? ಹಿಂದೂಗಳಲ್ಲಿಯೇ ಸಾವಿರಾರು ಜಾತಿಗಳಿವೆ. ಇವರೆಲ್ಲರನ್ನು ಬ್ರಾಹ್ಮಣರು ಹೇಗೆ ಪ್ರತಿನಿಧಿಸುತ್ತಾರೆ. ಭಾರತೀಯರೆಂದರೆ ಬೌದ್ಧ, ಜೈನ, ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಮುಂತಾದವರು. ಅಷ್ಟೇ ಅಲ್ಲ ಧರ್ಮವನ್ನು ನಂಬದವರೂ ಸಹ ಭಾರತೀಯರೆ. ಭಾರತ ಯಾವೊಂದು ಧರ್ಮದವರ ಸ್ವತ್ತಲ್ಲ. ಭಾರತದಲ್ಲಿರುವ ಸಮಸ್ತ ಜನರೂ ಭಾರತೀಯರೇ. ಎಲ್ಲರಿಗೂ ಇರುವುದು ಒಂದೇ ಸಂವಿಧಾನ. ಇಲ್ಲಿ ಯಾವುದೋ ಒಂದು ಧರ್ಮದವರು ಮಾತ್ರ ತೆರಿಗೆ ಕಟ್ಟುವುದಿಲ್ಲ. ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದ್ದರಿಂದ ಪಾರ್ಲಿಮೆಂಟ್ ಭೂಮಿ ಪೂಜೆಗೆ ಬ್ರಾಹ್ಮಣರೊಟ್ಟಿಗೆ, ಬೌದ್ಧ ಭಿಕ್ಕುಗಳು, ಜೈನ ಶ್ರಮಣರು, ಸಿಖ್ ಗುರುಗಳು, ಮೌಲ್ವಿ, ಪಾದ್ರಿ ಹಾಗೂ ನೂರಾರು ಹಿಂದೂ ಜಾತಿಗಳ ಪೂಜಾರಿಗಳು, ಮಹಿಳಾ ಪೂಜಾರಿಗಳು ಅಲ್ಲಿದ್ದು ಭೂಮಿ ಪೂಜೆ ನೆರವೇರಿಸಬೇಕಿತ್ತಲ್ಲವೇ?

ಇದನ್ನೂ ಓದಿ: ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದೇನು ಹೊಸತಲ್ಲ. ಕಾಂಗ್ರೆಸ್ ಪಕ್ಷ ಬಾಬು ರಾಜೇಂದ್ರ ಪ್ರಸಾದರು ರಾಷ್ಟ್ರಪತಿಯಾಗಿದ್ದಾಗ 200 ಜನ ಬ್ರಾಹ್ಮಣರ ಪಾದ ಪೂಜೆ ಮಾಡಿದ್ದರು. ನೆಹರೂರವರು ಸ್ವತಂತ್ರ ಭಾಷಣ ಮಾಡಲು ಶಾಸ್ತ್ರ ಕೇಳಿ ಸಮಯ ನಿಗಧಿಗೊಳಿಸಿದ್ದರು. ಈಗಿನ ಛತ್ತೀಸ್ಗಡದ ಕಾಂಗ್ರೆಸ್ ಮುಖ್ಯಮಂತ್ರಿ ಎರಡು ವರ್ಷದ ಸಾಧನೆ ನೆನಪಿಗೆ ರಾಮ ರಥ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರೆಸಿದ್ದಾರೆ. ಹೊಸದೇನನ್ನೂ ಮಾಡಿಲ್ಲ.

ಅವರನ್ನು ಕೇಳಿದರೆ ಕಾಂಗ್ರೆಸ್ ಮಾಡಿದಾಗ ನೀವು ಕೇಳಿದಿರಾ ಎನ್ನುತ್ತಾರೆ ಅಷ್ಟೆ. ಮೋದಿಯವರು ಕಾಂಗ್ರೆಸ್‌ನವರನ್ನು ಆಪ್ತರಕ್ಷಕ ದಳದಂತೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಭಾರತೀಯರಿಗೆ ಉತ್ತರಿಸಲೇಬೇಕಲ್ಲ? ಭಾರತೀಯರೆಂದರೆ ಕಾಂಗ್ರೆಸ್-ಬಿಜೆಪಿ‌ ಮಾತ್ರವಲ್ಲ. ಧರ್ಮನಿರಪೇಕ್ಷವಾಗಿ ಯಾರೂ ಇಲ್ಲದೆ ಪ್ರಧಾನಿಗಳೇ ಒಂದು ಇಟ್ಟಿಗೆ ಇಟ್ಟಿದ್ದರೆ ನಾವೆಲ್ಲ ಚಪ್ಪಾಳೆ ತಟ್ಟಿ ಅನಂಧಿಸಬಹುದಿತ್ತಲ್ಲವೇ? ಅದು ಬಿಟ್ಟು 60 ವರ್ಷ ಕಾಂಗ್ರೆಸ್ ಮಾಡಿದ್ದನ್ನೇ ಮಾಡಿದ್ದಾರೆ.

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

ಇದನ್ನೂ ಓದಿ: ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...