Homeಮುಖಪುಟಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಪಾರ್ಲಿಮೆಂಟ್ ಭೂಮಿ ಪೂಜೆ ಮತ್ತು ಭಾರತ ಸಂವಿಧಾನ

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

- Advertisement -
- Advertisement -

ನೂತನ ಪಾರ್ಲಿಮೆಂಟ್ ಭೂಮಿ ಪೂಜೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸಿಲ್ಲವೆಂಬ ಚರ್ಚೆ ಆರಂಭವಾಗಿದೆ. ನಿಜಕ್ಕೂ ಇಂತಹ ಸಂವಿಧಾನ ವಿರೋಧಿ ನಡೆ ಸಹ್ಯವಲ್ಲ. ರಾಷ್ಟ್ರಪತಿಗಳು ದಲಿತರೆಂಬ ಕಾರಣಕ್ಕೆ ಇಂತಹ ಅಮಾನವೀಯ ಕೃತ್ಯದಲ್ಲಿ ಕೇಂದ್ರ ಸರ್ಕಾರವೇ ಭಾಗಿಯಾಗಿದ್ದು ಖುದ್ದು ಪ್ರಧಾನ ಮಂತ್ರಿಗಳೇ ಇದರ ಸಹಭಾಗಿಯಾಗಿರುವುದು ವಿಷಾದನೀಯ ಸಂಗತಿ.

ಇದರ ಜೊತೆಗೆ ಮತ್ತೊಂದು ಸಂವಿಧಾನ ವಿರೋಧಿ ಕೃತ್ಯವೂ ಅಂದು ನಡೆದು ಹೋಗಿದೆ. ಭಾರತದ ಸಂವಿಧಾನವು ಧರ್ಮ, ಲಿಂಗ, ಜಾತಿ, ಜನಾಂಗ, ಪ್ರದೇಶಗಳ ಅಧಾರದಲ್ಲಿ ತಾರತಮ್ಯ ಸಲ್ಲದು ಎಂದು ಹೇಳಿರುವುದು ನಮಗೆಲ್ಲ ತಿಳಿದ ಸಂಗತಿಯಾಗಿದೆ. ಆದರೆ ನೂತನ ಪಾರ್ಲಿಮೆಂಟ್ ಕಟ್ಟಡದ ಭೂಮಿ ಪೂಜೆಯನ್ನು ಕೇವಲ ಬ್ರಾಹ್ಮಣ ಪುರೋಹಿತರು ನೆರವೇರಿಸಿರುವುದು ಸಂವಿಧಾನ ವಿರೋಧಿಯೇ ಆಗಿದೆ.ಇದನ್ನೂ ಓದಿ: ನೂತನ ಸಂಸತ್ ಭವನಕ್ಕೆ ಮೋದಿ ಭೂಮಿಪೂಜೆ: ಮುಂದುವರಿದ ಅನ್ನದಾತರ ಪ್ರತಿಭಟನೆ

ಹಿಂದೂ ಧರ್ಮದಲ್ಲಿ ಬಹುತ್ವ ಪೂಜಾರಾಧನೆ ಇದೆ. ನೂರಾರು ಪಂಥದ ಪೂಜಾವಿಧಿಗಳಿವೆ. ಅಣ್ಣಮ್ಮ, ಮಾರಮ್ಮ, ಹುಲಿಗೆಮ್ಮ, ಉಕ್ಕಡದಮ್ಮ ಮುಂತಾದ ಮಾತೃಪ್ರಧಾನ ದೇವತೆಗಳಿಗೆ ಮಹಿಳಾ ಪೂಜಾರಿಗಳೂ ಇದ್ದಾರೆ. ಅದಲ್ಲದೆ ನಾಥ-ದತ್ತ ಪಂಥದಲ್ಲಿ ಶೂದ್ರ ಜಾತಿಗಳ ಪೂಜಾರಿಗಳಿದ್ದಾರೆ‌. ಲಿಂಗಾಯತ, ವೀರಶೈವ, ಬುಡಕಟ್ಟು, ದಲಿತ ಪೂಜಾರಿಗಳಿದ್ದಾರೆ. ದಕ್ಷಿಣ, ಈಶಾನ್ಯ, ಮಧ್ಯ ಭಾರತದಲ್ಲಿ ಹಲವು ರೀತಿಯ ಪೂಜಾರಿಕೆ ಇದ್ದು ಅದೆಲ್ಲವೂ ಅಬ್ರಾಹ್ಮಣ ಪೂಜಾ ಪದ್ಧತಿಗಳಾಗಿವೆ. ಹಿಂದೂ ಪೂಜಾವಿಧಿ ಬಹುತ್ವ ಪೂಜಾವಿಧಿಯಾಗಿದ್ದು ಬ್ರಾಹ್ಮಣರ ಪೂಜಾವಿಧಿ ಅದರ ಒಂದು ಸಣ್ಣ ಭಾಗವಷ್ಟೆ. ಅಂತಹದ್ದರಲ್ಲಿ ಕೇವಲ ಬ್ರಾಹ್ಮಣ ವಿಧಿವಿಧಾನಗಳ ಮೂಲಕ ಸಂವಿಧಾನಾತ್ಮಕ ಶಾಸಕಾಂಗದ ಕಟ್ಟಡಕ್ಕೆ ಭೂಮಿ ಪೂಜೆ ಮಾಡಿಸಿದ್ದು ಎಷ್ಟು ಸರಿ?

ಭಾರತದಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಇದ್ದಾರೆಯೇ? ಹಿಂದೂಗಳಲ್ಲಿಯೇ ಸಾವಿರಾರು ಜಾತಿಗಳಿವೆ. ಇವರೆಲ್ಲರನ್ನು ಬ್ರಾಹ್ಮಣರು ಹೇಗೆ ಪ್ರತಿನಿಧಿಸುತ್ತಾರೆ. ಭಾರತೀಯರೆಂದರೆ ಬೌದ್ಧ, ಜೈನ, ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್, ಪಾರ್ಸಿ ಮುಂತಾದವರು. ಅಷ್ಟೇ ಅಲ್ಲ ಧರ್ಮವನ್ನು ನಂಬದವರೂ ಸಹ ಭಾರತೀಯರೆ. ಭಾರತ ಯಾವೊಂದು ಧರ್ಮದವರ ಸ್ವತ್ತಲ್ಲ. ಭಾರತದಲ್ಲಿರುವ ಸಮಸ್ತ ಜನರೂ ಭಾರತೀಯರೇ. ಎಲ್ಲರಿಗೂ ಇರುವುದು ಒಂದೇ ಸಂವಿಧಾನ. ಇಲ್ಲಿ ಯಾವುದೋ ಒಂದು ಧರ್ಮದವರು ಮಾತ್ರ ತೆರಿಗೆ ಕಟ್ಟುವುದಿಲ್ಲ. ಎಲ್ಲರೂ ತೆರಿಗೆ ಕಟ್ಟುತ್ತಾರೆ. ಆದ್ದರಿಂದ ಪಾರ್ಲಿಮೆಂಟ್ ಭೂಮಿ ಪೂಜೆಗೆ ಬ್ರಾಹ್ಮಣರೊಟ್ಟಿಗೆ, ಬೌದ್ಧ ಭಿಕ್ಕುಗಳು, ಜೈನ ಶ್ರಮಣರು, ಸಿಖ್ ಗುರುಗಳು, ಮೌಲ್ವಿ, ಪಾದ್ರಿ ಹಾಗೂ ನೂರಾರು ಹಿಂದೂ ಜಾತಿಗಳ ಪೂಜಾರಿಗಳು, ಮಹಿಳಾ ಪೂಜಾರಿಗಳು ಅಲ್ಲಿದ್ದು ಭೂಮಿ ಪೂಜೆ ನೆರವೇರಿಸಬೇಕಿತ್ತಲ್ಲವೇ?

ಇದನ್ನೂ ಓದಿ: ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದೇನು ಹೊಸತಲ್ಲ. ಕಾಂಗ್ರೆಸ್ ಪಕ್ಷ ಬಾಬು ರಾಜೇಂದ್ರ ಪ್ರಸಾದರು ರಾಷ್ಟ್ರಪತಿಯಾಗಿದ್ದಾಗ 200 ಜನ ಬ್ರಾಹ್ಮಣರ ಪಾದ ಪೂಜೆ ಮಾಡಿದ್ದರು. ನೆಹರೂರವರು ಸ್ವತಂತ್ರ ಭಾಷಣ ಮಾಡಲು ಶಾಸ್ತ್ರ ಕೇಳಿ ಸಮಯ ನಿಗಧಿಗೊಳಿಸಿದ್ದರು. ಈಗಿನ ಛತ್ತೀಸ್ಗಡದ ಕಾಂಗ್ರೆಸ್ ಮುಖ್ಯಮಂತ್ರಿ ಎರಡು ವರ್ಷದ ಸಾಧನೆ ನೆನಪಿಗೆ ರಾಮ ರಥ ಯಾತ್ರೆ ಮಾಡುತ್ತಿದ್ದಾರೆ. ಇವರೆಲ್ಲರೂ ಮಾಡಿದ್ದನ್ನೇ ಪ್ರಧಾನಿ ನರೇಂದ್ರ ಮೋದಿಯವರು ಮುಂದುವರೆಸಿದ್ದಾರೆ. ಹೊಸದೇನನ್ನೂ ಮಾಡಿಲ್ಲ.

ಅವರನ್ನು ಕೇಳಿದರೆ ಕಾಂಗ್ರೆಸ್ ಮಾಡಿದಾಗ ನೀವು ಕೇಳಿದಿರಾ ಎನ್ನುತ್ತಾರೆ ಅಷ್ಟೆ. ಮೋದಿಯವರು ಕಾಂಗ್ರೆಸ್‌ನವರನ್ನು ಆಪ್ತರಕ್ಷಕ ದಳದಂತೆ ಬಳಸಿಕೊಳ್ಳುತ್ತಿದ್ದಾರೆ. ಆದರೆ ಭಾರತೀಯರಿಗೆ ಉತ್ತರಿಸಲೇಬೇಕಲ್ಲ? ಭಾರತೀಯರೆಂದರೆ ಕಾಂಗ್ರೆಸ್-ಬಿಜೆಪಿ‌ ಮಾತ್ರವಲ್ಲ. ಧರ್ಮನಿರಪೇಕ್ಷವಾಗಿ ಯಾರೂ ಇಲ್ಲದೆ ಪ್ರಧಾನಿಗಳೇ ಒಂದು ಇಟ್ಟಿಗೆ ಇಟ್ಟಿದ್ದರೆ ನಾವೆಲ್ಲ ಚಪ್ಪಾಳೆ ತಟ್ಟಿ ಅನಂಧಿಸಬಹುದಿತ್ತಲ್ಲವೇ? ಅದು ಬಿಟ್ಟು 60 ವರ್ಷ ಕಾಂಗ್ರೆಸ್ ಮಾಡಿದ್ದನ್ನೇ ಮಾಡಿದ್ದಾರೆ.

ಬಹುತ್ವವೇ ತುಂಬಿರುವ ಭಾರತದಲ್ಲಿ ಕೇವಲ ಬ್ರಾಹ್ಮಣರಿಂದ ಭೂಮಿ ಪೂಜೆ ಮಾಡಿಸಿದ್ದು ನಿಜಕ್ಕೂ ಸಂವಿಧಾನ ವಿರೋಧಿಯಾಗಿದೆ. ಅಂದರೆ ಭಾರತೀಯತೆ ವಿರೋಧಿಯಾಗಿದೆ. ಅಂದರೆ ದೇಶವಿರೋಧಿಯಾಗಿದೆ.

ಇದನ್ನೂ ಓದಿ: ಏಕತ್ವವನ್ನು ನಿರಾಕರಿಸಿ ಬಹುತ್ವವನ್ನು ಕಟ್ಟಿಕೊಡುವ ‘ದಲಿತ ಸಾಹಿತ್ಯ ಮೀಮಾಂಸೆ’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...