Homeಮುಖಪುಟಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ...

ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

- Advertisement -
- Advertisement -

ಭಾರತದ ಬಹುನಿರೀಕ್ಷೆಯ ಚಂದ್ರಯಾನ 2 ರ ಲ್ಯಾಂಡರ್ ವಿಕ್ರಮ್ ಚಂದ್ರನ ನೆಲ ಸ್ಪರ್ಶ ಮಾಡುವ ಕೆಲವೇ ಕ್ಷಣದ ಮೊದಲು ಸಂಪರ್ಕ ಕಡಿತಗೊಂಡಿದೆ. ಇದರಿಂದ ಚಂದ್ರಯಾನ ಯಶಸ್ವಿಯಾಯಿತೆ, ಇಲ್ಲವೇ ಎಂಬುದರ ಕುರಿತು ಮಾಹಿತಿಯ ಕೊರತೆವುಂಟಾಗಿದೆ. ಇಂದು ಬೆಳಗಿನ ಜಾವ 1.50ಕ್ಕೆ ಇನ್ನು ಕೇವಲ 2.1ಕಿ.ಮೀ ಇರುವಂತೆ ಈ ಘಟನೆ ಜರುಗಿದೆ.

ಲ್ಯಾಂಡರ್ ವಿಕ್ರಮ್ ಸಂಪರ್ಕ ಕಡಿತಗೊಂಡ ತಕ್ಷಣವೇ ಆಘಾತಗೊಂಡ ಇಸ್ರೋ ಅಧ್ಯಕ್ಷ ಕೆ.ಶಿವನ್ ಬೆಳಗಿನ ಜಾವ 2.17ರ ಸಮಯಕ್ಕೆ ಇದನ್ನು ಘೋಷಿಸಿದರು. ಚಂದ್ರಯಾನದ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದರ ವೀಕ್ಷಣೆಗಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಎದೆಗುಂದಬೇಡಿ ಧೈರ್ಯದಿಂದಿರಿ ಎಂದರು.

ನಂತರ ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ಸಣ್ಣ ವೈಫಲ್ಯದಿಂದಾಗಿ ದುಃಖಿತರಾದಗ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಅಪ್ಪಿಕೊಂಡು ಸಂತೈಸಿದರು. ಭಾರತದ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ನೀವು ಇಡೀ ಭಾರತ ಹೆಮ್ಮೆಪಡುವಂತೆ ಮಾಡಿದ್ದೀರಿ. ಸಣ್ಣ ಪುಟ್ಟ ತಪ್ಪುಗಳಾದಾಗ ನಾವು ಧೃತಿಗೆಡಬಾರದು. ಎಲ್ಲವನ್ನು ಕಲಿಯೋಣ ಮತ್ತು ಆಶಾವಾದದಿಂದ ಮುನ್ನುಗ್ಗೋಣ, ಕಠಿಣ ಶ್ರಮ ಹಾಕೋಣ. ನಿಮ್ಮೊಡನೆ ನಾನಿದ್ದೇನೆ, ಧೈರ್ಯದಿಂದಿರಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಚಂದ್ರಯಾನ 2ರ ಅದ್ಭುತ ಕಾರ್ಯಕ್ಕಾಗಿ ISRO ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಸವಾಲುಗಳನ್ನು ಮೀರಲು ಮತ್ತು ಭಾರತೀಯ ಬಾಹ್ಯಾಕಾಶದ ಮಹತ್ವಾಕಾಂಕ್ಷೆಯ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರೀತಿಯ isro, ಈ ವೈಫಲ್ಯವು ನಿಮ್ಮನ್ನು ಹಿಂದಕ್ಕೆ ತಳ್ಳುವುದಿಲ್ಲ. ನಿಮ್ಮ 50 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿದ ಯಾರಿಗಾದರೂ ನೀವು ಪ್ರತಿಯೊಂದು ಹಂತದಲ್ಲೂ ವೈಫಲ್ಯವನ್ನು ನೋಡಿದ್ದೀರಿ ಎಂದು ತಿಳಿದಿದೆ … ಮತ್ತು ಪ್ರತಿ ಸಮಯದಲ್ಲೂ ನೀವು ಬಲವಾಗಿ ಪುಟಿದೆದ್ದೀರಿ ಕೂಡ.. ಎಂದು ಖ್ಯಾತ ಯೂಟ್ಯೂಬರ್ ಆಕಾಶ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ನಮ್ಮ ವಿಜ್ಞಾನಿಗಳ ಜೊತೆ ಬಲವಾಗಿ ನಿಂತಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದಗಳು. ನೀವು ಎಲ್ಲಾ ಭಾರತೀಯರ ಭಾವನೆಗಳನ್ನು ವ್ಯಕ್ತಪಡಿಸಿದ್ದೀರಿ. ನಾವೆಲ್ಲರೂ ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತೇವೆ. ನಾವು ಜಯಿಸುತ್ತೇವೆ! ಎಂದು ಯೋಗೆಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾವಿದರು, ವಿಜ್ಞಾನಿಗಳು ದೇಶವೊಂದರ ಒಳಗಣ್ಣುಗಳು. ರೈತ , ಸೈನಿಕ ಹೊರಗಣ್ಣುಗಳು. ಇವರು ಬಿದ್ದಾಗ ದೇಶ ಕೈ ಹಿಡಿಯದೆ ಇನ್ನಾರು ಆತುಗೊಳ್ಳಬೇಕು ? ದೇಶ ಎಂದರೆ ಪ್ರಧಾನಿಯೂ ಸೇರಿ ದೇಶದ ಸಮಸ್ತ ಪ್ರಜೆ. ನಮ್ಮ ವಿಜ್ಞಾನಿಗಳು ಎಡವಿದ್ದಾರೆ ಸೋತಿಲ್ಲ.

    ಶಿವನ್ ಅವರೂ ಕಣ್ಣೀರು ಹಾಕಿದರು. ಈ ವಾರದಿಂದ ಅನೇಕರೂ ಕಣ್ಣೀರಿಟ್ಟರು, ವ್ಯತ್ಯಾಸ ?

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....