Homeಮುಖಪುಟಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ...

ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

- Advertisement -
- Advertisement -

ಭಾರತದ ಬಹುನಿರೀಕ್ಷೆಯ ಚಂದ್ರಯಾನ 2 ರ ಲ್ಯಾಂಡರ್ ವಿಕ್ರಮ್ ಚಂದ್ರನ ನೆಲ ಸ್ಪರ್ಶ ಮಾಡುವ ಕೆಲವೇ ಕ್ಷಣದ ಮೊದಲು ಸಂಪರ್ಕ ಕಡಿತಗೊಂಡಿದೆ. ಇದರಿಂದ ಚಂದ್ರಯಾನ ಯಶಸ್ವಿಯಾಯಿತೆ, ಇಲ್ಲವೇ ಎಂಬುದರ ಕುರಿತು ಮಾಹಿತಿಯ ಕೊರತೆವುಂಟಾಗಿದೆ. ಇಂದು ಬೆಳಗಿನ ಜಾವ 1.50ಕ್ಕೆ ಇನ್ನು ಕೇವಲ 2.1ಕಿ.ಮೀ ಇರುವಂತೆ ಈ ಘಟನೆ ಜರುಗಿದೆ.

ಲ್ಯಾಂಡರ್ ವಿಕ್ರಮ್ ಸಂಪರ್ಕ ಕಡಿತಗೊಂಡ ತಕ್ಷಣವೇ ಆಘಾತಗೊಂಡ ಇಸ್ರೋ ಅಧ್ಯಕ್ಷ ಕೆ.ಶಿವನ್ ಬೆಳಗಿನ ಜಾವ 2.17ರ ಸಮಯಕ್ಕೆ ಇದನ್ನು ಘೋಷಿಸಿದರು. ಚಂದ್ರಯಾನದ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದರ ವೀಕ್ಷಣೆಗಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಎದೆಗುಂದಬೇಡಿ ಧೈರ್ಯದಿಂದಿರಿ ಎಂದರು.

ನಂತರ ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ಸಣ್ಣ ವೈಫಲ್ಯದಿಂದಾಗಿ ದುಃಖಿತರಾದಗ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಅಪ್ಪಿಕೊಂಡು ಸಂತೈಸಿದರು. ಭಾರತದ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ನೀವು ಇಡೀ ಭಾರತ ಹೆಮ್ಮೆಪಡುವಂತೆ ಮಾಡಿದ್ದೀರಿ. ಸಣ್ಣ ಪುಟ್ಟ ತಪ್ಪುಗಳಾದಾಗ ನಾವು ಧೃತಿಗೆಡಬಾರದು. ಎಲ್ಲವನ್ನು ಕಲಿಯೋಣ ಮತ್ತು ಆಶಾವಾದದಿಂದ ಮುನ್ನುಗ್ಗೋಣ, ಕಠಿಣ ಶ್ರಮ ಹಾಕೋಣ. ನಿಮ್ಮೊಡನೆ ನಾನಿದ್ದೇನೆ, ಧೈರ್ಯದಿಂದಿರಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಚಂದ್ರಯಾನ 2ರ ಅದ್ಭುತ ಕಾರ್ಯಕ್ಕಾಗಿ ISRO ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಸವಾಲುಗಳನ್ನು ಮೀರಲು ಮತ್ತು ಭಾರತೀಯ ಬಾಹ್ಯಾಕಾಶದ ಮಹತ್ವಾಕಾಂಕ್ಷೆಯ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರೀತಿಯ isro, ಈ ವೈಫಲ್ಯವು ನಿಮ್ಮನ್ನು ಹಿಂದಕ್ಕೆ ತಳ್ಳುವುದಿಲ್ಲ. ನಿಮ್ಮ 50 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿದ ಯಾರಿಗಾದರೂ ನೀವು ಪ್ರತಿಯೊಂದು ಹಂತದಲ್ಲೂ ವೈಫಲ್ಯವನ್ನು ನೋಡಿದ್ದೀರಿ ಎಂದು ತಿಳಿದಿದೆ … ಮತ್ತು ಪ್ರತಿ ಸಮಯದಲ್ಲೂ ನೀವು ಬಲವಾಗಿ ಪುಟಿದೆದ್ದೀರಿ ಕೂಡ.. ಎಂದು ಖ್ಯಾತ ಯೂಟ್ಯೂಬರ್ ಆಕಾಶ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ನಮ್ಮ ವಿಜ್ಞಾನಿಗಳ ಜೊತೆ ಬಲವಾಗಿ ನಿಂತಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದಗಳು. ನೀವು ಎಲ್ಲಾ ಭಾರತೀಯರ ಭಾವನೆಗಳನ್ನು ವ್ಯಕ್ತಪಡಿಸಿದ್ದೀರಿ. ನಾವೆಲ್ಲರೂ ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತೇವೆ. ನಾವು ಜಯಿಸುತ್ತೇವೆ! ಎಂದು ಯೋಗೆಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾವಿದರು, ವಿಜ್ಞಾನಿಗಳು ದೇಶವೊಂದರ ಒಳಗಣ್ಣುಗಳು. ರೈತ , ಸೈನಿಕ ಹೊರಗಣ್ಣುಗಳು. ಇವರು ಬಿದ್ದಾಗ ದೇಶ ಕೈ ಹಿಡಿಯದೆ ಇನ್ನಾರು ಆತುಗೊಳ್ಳಬೇಕು ? ದೇಶ ಎಂದರೆ ಪ್ರಧಾನಿಯೂ ಸೇರಿ ದೇಶದ ಸಮಸ್ತ ಪ್ರಜೆ. ನಮ್ಮ ವಿಜ್ಞಾನಿಗಳು ಎಡವಿದ್ದಾರೆ ಸೋತಿಲ್ಲ.

    ಶಿವನ್ ಅವರೂ ಕಣ್ಣೀರು ಹಾಕಿದರು. ಈ ವಾರದಿಂದ ಅನೇಕರೂ ಕಣ್ಣೀರಿಟ್ಟರು, ವ್ಯತ್ಯಾಸ ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....