Homeಮುಖಪುಟಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ...

ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

- Advertisement -
- Advertisement -

ಭಾರತದ ಬಹುನಿರೀಕ್ಷೆಯ ಚಂದ್ರಯಾನ 2 ರ ಲ್ಯಾಂಡರ್ ವಿಕ್ರಮ್ ಚಂದ್ರನ ನೆಲ ಸ್ಪರ್ಶ ಮಾಡುವ ಕೆಲವೇ ಕ್ಷಣದ ಮೊದಲು ಸಂಪರ್ಕ ಕಡಿತಗೊಂಡಿದೆ. ಇದರಿಂದ ಚಂದ್ರಯಾನ ಯಶಸ್ವಿಯಾಯಿತೆ, ಇಲ್ಲವೇ ಎಂಬುದರ ಕುರಿತು ಮಾಹಿತಿಯ ಕೊರತೆವುಂಟಾಗಿದೆ. ಇಂದು ಬೆಳಗಿನ ಜಾವ 1.50ಕ್ಕೆ ಇನ್ನು ಕೇವಲ 2.1ಕಿ.ಮೀ ಇರುವಂತೆ ಈ ಘಟನೆ ಜರುಗಿದೆ.

ಲ್ಯಾಂಡರ್ ವಿಕ್ರಮ್ ಸಂಪರ್ಕ ಕಡಿತಗೊಂಡ ತಕ್ಷಣವೇ ಆಘಾತಗೊಂಡ ಇಸ್ರೋ ಅಧ್ಯಕ್ಷ ಕೆ.ಶಿವನ್ ಬೆಳಗಿನ ಜಾವ 2.17ರ ಸಮಯಕ್ಕೆ ಇದನ್ನು ಘೋಷಿಸಿದರು. ಚಂದ್ರಯಾನದ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದರ ವೀಕ್ಷಣೆಗಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಎದೆಗುಂದಬೇಡಿ ಧೈರ್ಯದಿಂದಿರಿ ಎಂದರು.

ನಂತರ ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ಸಣ್ಣ ವೈಫಲ್ಯದಿಂದಾಗಿ ದುಃಖಿತರಾದಗ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಅಪ್ಪಿಕೊಂಡು ಸಂತೈಸಿದರು. ಭಾರತದ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ನೀವು ಇಡೀ ಭಾರತ ಹೆಮ್ಮೆಪಡುವಂತೆ ಮಾಡಿದ್ದೀರಿ. ಸಣ್ಣ ಪುಟ್ಟ ತಪ್ಪುಗಳಾದಾಗ ನಾವು ಧೃತಿಗೆಡಬಾರದು. ಎಲ್ಲವನ್ನು ಕಲಿಯೋಣ ಮತ್ತು ಆಶಾವಾದದಿಂದ ಮುನ್ನುಗ್ಗೋಣ, ಕಠಿಣ ಶ್ರಮ ಹಾಕೋಣ. ನಿಮ್ಮೊಡನೆ ನಾನಿದ್ದೇನೆ, ಧೈರ್ಯದಿಂದಿರಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಚಂದ್ರಯಾನ 2ರ ಅದ್ಭುತ ಕಾರ್ಯಕ್ಕಾಗಿ ISRO ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಸವಾಲುಗಳನ್ನು ಮೀರಲು ಮತ್ತು ಭಾರತೀಯ ಬಾಹ್ಯಾಕಾಶದ ಮಹತ್ವಾಕಾಂಕ್ಷೆಯ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರೀತಿಯ isro, ಈ ವೈಫಲ್ಯವು ನಿಮ್ಮನ್ನು ಹಿಂದಕ್ಕೆ ತಳ್ಳುವುದಿಲ್ಲ. ನಿಮ್ಮ 50 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿದ ಯಾರಿಗಾದರೂ ನೀವು ಪ್ರತಿಯೊಂದು ಹಂತದಲ್ಲೂ ವೈಫಲ್ಯವನ್ನು ನೋಡಿದ್ದೀರಿ ಎಂದು ತಿಳಿದಿದೆ … ಮತ್ತು ಪ್ರತಿ ಸಮಯದಲ್ಲೂ ನೀವು ಬಲವಾಗಿ ಪುಟಿದೆದ್ದೀರಿ ಕೂಡ.. ಎಂದು ಖ್ಯಾತ ಯೂಟ್ಯೂಬರ್ ಆಕಾಶ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ನಮ್ಮ ವಿಜ್ಞಾನಿಗಳ ಜೊತೆ ಬಲವಾಗಿ ನಿಂತಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದಗಳು. ನೀವು ಎಲ್ಲಾ ಭಾರತೀಯರ ಭಾವನೆಗಳನ್ನು ವ್ಯಕ್ತಪಡಿಸಿದ್ದೀರಿ. ನಾವೆಲ್ಲರೂ ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತೇವೆ. ನಾವು ಜಯಿಸುತ್ತೇವೆ! ಎಂದು ಯೋಗೆಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾವಿದರು, ವಿಜ್ಞಾನಿಗಳು ದೇಶವೊಂದರ ಒಳಗಣ್ಣುಗಳು. ರೈತ , ಸೈನಿಕ ಹೊರಗಣ್ಣುಗಳು. ಇವರು ಬಿದ್ದಾಗ ದೇಶ ಕೈ ಹಿಡಿಯದೆ ಇನ್ನಾರು ಆತುಗೊಳ್ಳಬೇಕು ? ದೇಶ ಎಂದರೆ ಪ್ರಧಾನಿಯೂ ಸೇರಿ ದೇಶದ ಸಮಸ್ತ ಪ್ರಜೆ. ನಮ್ಮ ವಿಜ್ಞಾನಿಗಳು ಎಡವಿದ್ದಾರೆ ಸೋತಿಲ್ಲ.

    ಶಿವನ್ ಅವರೂ ಕಣ್ಣೀರು ಹಾಕಿದರು. ಈ ವಾರದಿಂದ ಅನೇಕರೂ ಕಣ್ಣೀರಿಟ್ಟರು, ವ್ಯತ್ಯಾಸ ?

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...