Homeಮುಖಪುಟಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ...

ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

- Advertisement -
- Advertisement -

ಭಾರತದ ಬಹುನಿರೀಕ್ಷೆಯ ಚಂದ್ರಯಾನ 2 ರ ಲ್ಯಾಂಡರ್ ವಿಕ್ರಮ್ ಚಂದ್ರನ ನೆಲ ಸ್ಪರ್ಶ ಮಾಡುವ ಕೆಲವೇ ಕ್ಷಣದ ಮೊದಲು ಸಂಪರ್ಕ ಕಡಿತಗೊಂಡಿದೆ. ಇದರಿಂದ ಚಂದ್ರಯಾನ ಯಶಸ್ವಿಯಾಯಿತೆ, ಇಲ್ಲವೇ ಎಂಬುದರ ಕುರಿತು ಮಾಹಿತಿಯ ಕೊರತೆವುಂಟಾಗಿದೆ. ಇಂದು ಬೆಳಗಿನ ಜಾವ 1.50ಕ್ಕೆ ಇನ್ನು ಕೇವಲ 2.1ಕಿ.ಮೀ ಇರುವಂತೆ ಈ ಘಟನೆ ಜರುಗಿದೆ.

ಲ್ಯಾಂಡರ್ ವಿಕ್ರಮ್ ಸಂಪರ್ಕ ಕಡಿತಗೊಂಡ ತಕ್ಷಣವೇ ಆಘಾತಗೊಂಡ ಇಸ್ರೋ ಅಧ್ಯಕ್ಷ ಕೆ.ಶಿವನ್ ಬೆಳಗಿನ ಜಾವ 2.17ರ ಸಮಯಕ್ಕೆ ಇದನ್ನು ಘೋಷಿಸಿದರು. ಚಂದ್ರಯಾನದ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದರ ವೀಕ್ಷಣೆಗಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಎದೆಗುಂದಬೇಡಿ ಧೈರ್ಯದಿಂದಿರಿ ಎಂದರು.

ನಂತರ ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ಸಣ್ಣ ವೈಫಲ್ಯದಿಂದಾಗಿ ದುಃಖಿತರಾದಗ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಅಪ್ಪಿಕೊಂಡು ಸಂತೈಸಿದರು. ಭಾರತದ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ನೀವು ಇಡೀ ಭಾರತ ಹೆಮ್ಮೆಪಡುವಂತೆ ಮಾಡಿದ್ದೀರಿ. ಸಣ್ಣ ಪುಟ್ಟ ತಪ್ಪುಗಳಾದಾಗ ನಾವು ಧೃತಿಗೆಡಬಾರದು. ಎಲ್ಲವನ್ನು ಕಲಿಯೋಣ ಮತ್ತು ಆಶಾವಾದದಿಂದ ಮುನ್ನುಗ್ಗೋಣ, ಕಠಿಣ ಶ್ರಮ ಹಾಕೋಣ. ನಿಮ್ಮೊಡನೆ ನಾನಿದ್ದೇನೆ, ಧೈರ್ಯದಿಂದಿರಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಚಂದ್ರಯಾನ 2ರ ಅದ್ಭುತ ಕಾರ್ಯಕ್ಕಾಗಿ ISRO ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಸವಾಲುಗಳನ್ನು ಮೀರಲು ಮತ್ತು ಭಾರತೀಯ ಬಾಹ್ಯಾಕಾಶದ ಮಹತ್ವಾಕಾಂಕ್ಷೆಯ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರೀತಿಯ isro, ಈ ವೈಫಲ್ಯವು ನಿಮ್ಮನ್ನು ಹಿಂದಕ್ಕೆ ತಳ್ಳುವುದಿಲ್ಲ. ನಿಮ್ಮ 50 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿದ ಯಾರಿಗಾದರೂ ನೀವು ಪ್ರತಿಯೊಂದು ಹಂತದಲ್ಲೂ ವೈಫಲ್ಯವನ್ನು ನೋಡಿದ್ದೀರಿ ಎಂದು ತಿಳಿದಿದೆ … ಮತ್ತು ಪ್ರತಿ ಸಮಯದಲ್ಲೂ ನೀವು ಬಲವಾಗಿ ಪುಟಿದೆದ್ದೀರಿ ಕೂಡ.. ಎಂದು ಖ್ಯಾತ ಯೂಟ್ಯೂಬರ್ ಆಕಾಶ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ನಮ್ಮ ವಿಜ್ಞಾನಿಗಳ ಜೊತೆ ಬಲವಾಗಿ ನಿಂತಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದಗಳು. ನೀವು ಎಲ್ಲಾ ಭಾರತೀಯರ ಭಾವನೆಗಳನ್ನು ವ್ಯಕ್ತಪಡಿಸಿದ್ದೀರಿ. ನಾವೆಲ್ಲರೂ ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತೇವೆ. ನಾವು ಜಯಿಸುತ್ತೇವೆ! ಎಂದು ಯೋಗೆಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾವಿದರು, ವಿಜ್ಞಾನಿಗಳು ದೇಶವೊಂದರ ಒಳಗಣ್ಣುಗಳು. ರೈತ , ಸೈನಿಕ ಹೊರಗಣ್ಣುಗಳು. ಇವರು ಬಿದ್ದಾಗ ದೇಶ ಕೈ ಹಿಡಿಯದೆ ಇನ್ನಾರು ಆತುಗೊಳ್ಳಬೇಕು ? ದೇಶ ಎಂದರೆ ಪ್ರಧಾನಿಯೂ ಸೇರಿ ದೇಶದ ಸಮಸ್ತ ಪ್ರಜೆ. ನಮ್ಮ ವಿಜ್ಞಾನಿಗಳು ಎಡವಿದ್ದಾರೆ ಸೋತಿಲ್ಲ.

    ಶಿವನ್ ಅವರೂ ಕಣ್ಣೀರು ಹಾಕಿದರು. ಈ ವಾರದಿಂದ ಅನೇಕರೂ ಕಣ್ಣೀರಿಟ್ಟರು, ವ್ಯತ್ಯಾಸ ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...