Homeಮುಖಪುಟಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ...

ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

- Advertisement -
- Advertisement -

ಭಾರತದ ಬಹುನಿರೀಕ್ಷೆಯ ಚಂದ್ರಯಾನ 2 ರ ಲ್ಯಾಂಡರ್ ವಿಕ್ರಮ್ ಚಂದ್ರನ ನೆಲ ಸ್ಪರ್ಶ ಮಾಡುವ ಕೆಲವೇ ಕ್ಷಣದ ಮೊದಲು ಸಂಪರ್ಕ ಕಡಿತಗೊಂಡಿದೆ. ಇದರಿಂದ ಚಂದ್ರಯಾನ ಯಶಸ್ವಿಯಾಯಿತೆ, ಇಲ್ಲವೇ ಎಂಬುದರ ಕುರಿತು ಮಾಹಿತಿಯ ಕೊರತೆವುಂಟಾಗಿದೆ. ಇಂದು ಬೆಳಗಿನ ಜಾವ 1.50ಕ್ಕೆ ಇನ್ನು ಕೇವಲ 2.1ಕಿ.ಮೀ ಇರುವಂತೆ ಈ ಘಟನೆ ಜರುಗಿದೆ.

ಲ್ಯಾಂಡರ್ ವಿಕ್ರಮ್ ಸಂಪರ್ಕ ಕಡಿತಗೊಂಡ ತಕ್ಷಣವೇ ಆಘಾತಗೊಂಡ ಇಸ್ರೋ ಅಧ್ಯಕ್ಷ ಕೆ.ಶಿವನ್ ಬೆಳಗಿನ ಜಾವ 2.17ರ ಸಮಯಕ್ಕೆ ಇದನ್ನು ಘೋಷಿಸಿದರು. ಚಂದ್ರಯಾನದ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದರ ವೀಕ್ಷಣೆಗಾಗಿ ಬೆಂಗಳೂರಿನ ಇಸ್ರೋ ಕಚೇರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಎದೆಗುಂದಬೇಡಿ ಧೈರ್ಯದಿಂದಿರಿ ಎಂದರು.

ನಂತರ ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ಸಣ್ಣ ವೈಫಲ್ಯದಿಂದಾಗಿ ದುಃಖಿತರಾದಗ ಪ್ರಧಾನಿ ನರೇಂದ್ರ ಮೋದಿಯವರು ಅವರನ್ನು ಅಪ್ಪಿಕೊಂಡು ಸಂತೈಸಿದರು. ಭಾರತದ ವಿಜ್ಞಾನಿಗಳ ಸಾಧನೆ ಅನನ್ಯವಾದುದು. ನೀವು ಇಡೀ ಭಾರತ ಹೆಮ್ಮೆಪಡುವಂತೆ ಮಾಡಿದ್ದೀರಿ. ಸಣ್ಣ ಪುಟ್ಟ ತಪ್ಪುಗಳಾದಾಗ ನಾವು ಧೃತಿಗೆಡಬಾರದು. ಎಲ್ಲವನ್ನು ಕಲಿಯೋಣ ಮತ್ತು ಆಶಾವಾದದಿಂದ ಮುನ್ನುಗ್ಗೋಣ, ಕಠಿಣ ಶ್ರಮ ಹಾಕೋಣ. ನಿಮ್ಮೊಡನೆ ನಾನಿದ್ದೇನೆ, ಧೈರ್ಯದಿಂದಿರಿ ಎಂದು ಪ್ರಧಾನಿ ಮಾತನಾಡಿದ್ದಾರೆ.

ಚಂದ್ರಯಾನ 2ರ ಅದ್ಭುತ ಕಾರ್ಯಕ್ಕಾಗಿ ISRO ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ. ನಿಮ್ಮ ಕೆಲಸ ವ್ಯರ್ಥವಾಗಿಲ್ಲ. ಇದು ಇನ್ನೂ ಅನೇಕ ಸವಾಲುಗಳನ್ನು ಮೀರಲು ಮತ್ತು ಭಾರತೀಯ ಬಾಹ್ಯಾಕಾಶದ ಮಹತ್ವಾಕಾಂಕ್ಷೆಯ ಯಾತ್ರೆಗಳಿಗೆ ಅಡಿಪಾಯ ಹಾಕಿದೆ ಎಂದು ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರೀತಿಯ isro, ಈ ವೈಫಲ್ಯವು ನಿಮ್ಮನ್ನು ಹಿಂದಕ್ಕೆ ತಳ್ಳುವುದಿಲ್ಲ. ನಿಮ್ಮ 50 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿದ ಯಾರಿಗಾದರೂ ನೀವು ಪ್ರತಿಯೊಂದು ಹಂತದಲ್ಲೂ ವೈಫಲ್ಯವನ್ನು ನೋಡಿದ್ದೀರಿ ಎಂದು ತಿಳಿದಿದೆ … ಮತ್ತು ಪ್ರತಿ ಸಮಯದಲ್ಲೂ ನೀವು ಬಲವಾಗಿ ಪುಟಿದೆದ್ದೀರಿ ಕೂಡ.. ಎಂದು ಖ್ಯಾತ ಯೂಟ್ಯೂಬರ್ ಆಕಾಶ್ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.

ನಮ್ಮ ವಿಜ್ಞಾನಿಗಳ ಜೊತೆ ಬಲವಾಗಿ ನಿಂತಿದ್ದಕ್ಕಾಗಿ ಪ್ರಧಾನಿಯವರಿಗೆ ಧನ್ಯವಾದಗಳು. ನೀವು ಎಲ್ಲಾ ಭಾರತೀಯರ ಭಾವನೆಗಳನ್ನು ವ್ಯಕ್ತಪಡಿಸಿದ್ದೀರಿ. ನಾವೆಲ್ಲರೂ ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಪಡುತ್ತೇವೆ. ನಾವು ಜಯಿಸುತ್ತೇವೆ! ಎಂದು ಯೋಗೆಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾವಿದರು, ವಿಜ್ಞಾನಿಗಳು ದೇಶವೊಂದರ ಒಳಗಣ್ಣುಗಳು. ರೈತ , ಸೈನಿಕ ಹೊರಗಣ್ಣುಗಳು. ಇವರು ಬಿದ್ದಾಗ ದೇಶ ಕೈ ಹಿಡಿಯದೆ ಇನ್ನಾರು ಆತುಗೊಳ್ಳಬೇಕು ? ದೇಶ ಎಂದರೆ ಪ್ರಧಾನಿಯೂ ಸೇರಿ ದೇಶದ ಸಮಸ್ತ ಪ್ರಜೆ. ನಮ್ಮ ವಿಜ್ಞಾನಿಗಳು ಎಡವಿದ್ದಾರೆ ಸೋತಿಲ್ಲ.

    ಶಿವನ್ ಅವರೂ ಕಣ್ಣೀರು ಹಾಕಿದರು. ಈ ವಾರದಿಂದ ಅನೇಕರೂ ಕಣ್ಣೀರಿಟ್ಟರು, ವ್ಯತ್ಯಾಸ ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...