Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...