Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...