Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...