Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....