Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...