Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...