Homeಮುಖಪುಟಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

ಬೆಂಗಳೂರು ಲ್ಯಾಂಡ್‌ಮಾರ್ಕ್ಸ್; ಓರೆಕೋರೆಗಳ ಕಲರವಕ್ಕೆ ವ್ಯಂಗ್ಯ ಚಿತ್ರಗಳ ಚಾವಡಿ

- Advertisement -
- Advertisement -

“ಚಿತ್ರ ಕಲಾವಿದರಿಗೆ ಲಲಿತಕಲಾ ಅಕಾಡೆಮಿಯಿದೆ, ಬರಹಗಾರ-ಲೇಖಕರಿಗೆ ಸಾಹಿತ್ಯ ಅಕಾಡೆಮಿ ಇದೆ, ಹಾಗಾದರೆ, ಕಾರ್ಟೂನಿಸ್ಟ್‌ಗಳಿಗೆ ಯಾಕೆ ಅಂತದ್ದೇ ಒಂದು ಸಂಸ್ಥೆ ಇರಬಾರದು” ಎನ್ನುತ್ತಾರೆ ಖ್ಯಾತ ವ್ಯಂಗ್ಯಚಿತ್ರಕಾರರಾದ ವಿ.ಜಿ. ನರೇಂದ್ರ ಅವರು. ತಮ್ಮ ಈ ಕನಸನ್ನು ಬೆನ್ನುಬಿಡದೆ, ’ಇಂಡಿಯನ್
ಇನ್‌ಸ್ವಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್’ ಎಂಬ ಸಂಸ್ಥೆಯ ಮೂಲಕ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಯನ್ನು ಪ್ರಾರಂಭಿಸಿ ಅದರ ಮೇಲ್ವಿಚಾರಕರಾಗಿ ಮುನ್ನಡೆಸುತ್ತಿದ್ದಾರೆ.

ಬೆಂಗಳೂರಿನ ಎಂ.ಜಿ.ರೋಡ್‌ನ ಟ್ರಿನಿಟಿ ಸರ್ಕಲ್‌ಗೆ ಲಂಬದಲ್ಲಿರುವ ಮಿಡ್‌ಫೋರ್ಡ್ ಗಾರ್ಡನ್ ರಸ್ತೆಯಲ್ಲಿರುವ ಮಿಡ್‌ಫೋರ್ಡ್ ಹೌಸ್‌ನ ನೆಲಮಾಳಿಗೆಯಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ದೇಶದ ಮೊದಲ ಕಾರ್ಟೂನ್ ಗ್ಯಾಲರಿ. ಇದೀಗ ಈ ಕಾರ್ಟೂನ್ ಗ್ಯಾಲರಿಗೆ 15ನೇ ವರ್ಷದ ಸಂಭ್ರಮ. 2007ರ ಆಗಸ್ಟ್ 16ರಂದು ಇದನ್ನು ರಾಜ್ಯದ ರಾಜ್ಯಪಾಲರಾಗಿದ್ದ ಟಿ.ಎನ್ ಚತುರ್ವೇದಿ ಅವರು ಉದ್ಘಾಟಿಸಿದ್ದರು. ಆ ವೇಳೆ ರಾಜ್ಯದ ಖ್ಯಾತ ವ್ಯಂಗ್ಯಚಿತ್ರಕಾರರಾದ ಬಿ.ವಿ. ರಾಮಮೂರ್ತಿ, ವಿ.ಜಿ. ನರೇಂದ್ರ ಮತ್ತು ಬಿ.ಜಿ. ಗುಜ್ಜಾರಪ್ಪ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗಿತ್ತು.

ಅದರ ನಂತರವೂ ಗ್ಯಾಲರಿಯಲ್ಲಿ ನಿರಂತರವಾಗಿ ಪ್ರದರ್ಶನಗಳನ್ನು ನಡೆಸುತ್ತಲೇ ಬರಲಾಗುತ್ತಿದೆ. ತಿಂಗಳಿಗೆ ಒಂದು ಪ್ರದರ್ಶನದಂತೆ ಇದುವರೆಗೂ ಸುಮಾರು 180ಕ್ಕಿಂತಲೂ ಹೆಚ್ಚಿನ ವ್ಯಂಗ್ಯ ಪ್ರದರ್ಶನಗಳನ್ನು ನಡೆಸಲಾಗಿದೆ. “ಇದೀಗ 181ನೇ ವ್ಯಂಗ್ಯಚಿತ್ರ ಪ್ರದರ್ಶನ ಪ್ರಾರಂಭವಾಗಿದ್ದು, ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪ್ರಧಾನ ವ್ಯಂಗ್ಯಚಿತ್ರಕಾರ ಇ.ಪಿ. ಉನ್ನಿ ಅವರ ವ್ಯಂಗ್ಯಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ” ಎಂದು ವಿ.ಜಿ. ನರೇಂದ್ರ ಅವರು ಹೇಳುತ್ತಾರೆ. “ಉನ್ನಿ ಅವರು ಈ ಪ್ರದರ್ಶನಕ್ಕೆಂದೇ ಬೆಂಗಳೂರಿನ ವಿಶೇಷ ಸ್ಥಳಗಳ ಸುಮಾರು 12 ಚಿತ್ರಗಳನ್ನು ರಚಿಸಿದ್ದು, ಆ ಚಿತ್ರಗಳನ್ನೂ ಈ ಪ್ರದರ್ಶನಕ್ಕೆ ಇಟ್ಟಿದ್ದೇವೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬರುವ ಆಗಸ್ಟ್ ತಿಂಗಳಲ್ಲಿ ’ಇಂಡಿಯನ್ ಕಾರ್ಟೂನ್’ ಗ್ಯಾಲರಿ ತನ್ನ ಯಶಸ್ವಿ ಹದಿನೈದನೇ ವಾರ್ಷಿಕೋತ್ಸವವನ್ನು ಆಚರಿಸಲಿದೆ. ಈ ವೇಳೆ ಭಾರತದ ಎಲ್ಲಾ ವ್ಯಂಗ್ಯಚಿತ್ರಕಾರರ ವ್ಯಂಗ್ಯಚಿತ್ರಗಳ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತದೆ.

ತನ್ನ ಹೆಸರು ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ ಎಂದಿದ್ದರೂ ಇದು ಕೇವಲ ಭಾರತೀಯ ವ್ಯಂಗ್ಯ ಚಿತ್ರಕಾರರಿಗೆ ಮಾತ್ರ ಸೀಮಿತವಾಗಿಲ್ಲ. ಅಮೆರಿಕ, ಇಂಗ್ಲೆಂಡ್, ಚೀನಾ ಸೇರಿದಂತೆ ವಿದೇಶಿ ವ್ಯಂಗ್ಯಚಿತ್ರಕಾರರ ಪ್ರದರ್ಶನಗಳನ್ನೂ ನಡೆಸುತ್ತಿದೆ. ಗ್ಯಾಲರಿಗೆ ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಗಳಿಂದಲೂ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಾರೆ ಎನ್ನುತ್ತಾರೆ ವಿ.ಜಿ. ನರೇಂದ್ರ.

ಗ್ಯಾಲರಿಯಲ್ಲಿ ಕೇವಲ ವ್ಯಂಗ್ಯಚಿತ್ರ ಪ್ರದರ್ಶನ ಮಾಡುವುದಲ್ಲದೆ ವ್ಯಂಗ್ಯಚಿತ್ರಕಾರ್ತಿ ಮಾಯಾ ಕಾಮತ್ ಅವರ ನೆನಪಿನಲ್ಲಿ ಪ್ರತಿವರ್ಷ ’ಅಂತಾರಾಷ್ಟ್ರೀಯ ಕಾರ್ಟೂನ್ ಸ್ಪರ್ಧೆ’ಯನ್ನೂ ನಡೆಸಲಾಗುತ್ತಿದೆ. ಈ ಸ್ಪರ್ಧಾರ್ಥಿಗಳಿಗೆ ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನಗಳನ್ನು ವಿತರಿಸಲಾಗುತ್ತದೆ. ಇದನ್ನು ಕಳೆದ 14 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ. ಈ ವೇಳೆ ಆಯಾ ವರ್ಷದ ಉದಯೋನ್ಮುಖ ವ್ಯಂಗ್ಯಚಿತ್ರಕಾರರನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ವಿ.ಜಿ. ನರೇಂದ್ರ ಹೇಳುತ್ತಾರೆ.

ಇಷ್ಟೇ ಅಲ್ಲದೆ ಗ್ಯಾಲರಿಯಲ್ಲಿ ಕಾರ್ಟೂನ್ ರಚಿಸುವ ಕಾರ್ಯಾಗಾರಗಳನ್ನು ಕೂಡಾ ನಡೆಸಲಾಗುತ್ತದೆ. ಈವರೆಗೆ ಇಲ್ಲಿ ಸುಮಾರು 30 ಯಶಸ್ವಿ ಕಾರ್ಯಾಗಾರಗಳು ನಡೆದಿದ್ದು, ಅದರಲ್ಲಿ ದೇಶದ ಎಲ್ಲಾ ರಾಜ್ಯಗಳ ಜನರು ಭಾಗವಹಿಸಿದ್ದಾರೆ. ಕಾರ್ಯಾಗಾರಗಳ ಬಗ್ಗೆ ಮಾತನಾಡುವ ವಿ.ಜಿ.ನರೇಂದ್ರ, “ವ್ಯಂಗ್ಯಚಿತ್ರ ಜಗತ್ತಿನಲ್ಲಿ ಮಹಿಳಾ ಕಾರ್ಟೂನಿಸ್ಟ್‌ಗಳು ಕಡಿಮೆ ಇದ್ದಾರೆ ಎಂಬ ಅಪವಾದವಿದೆ. ಇದು ನಿಜ ಕೂಡಾ ಆಗಿದೆ. ಆದರೆ ನಮ್ಮ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಲ್ಲಿ ಅರ್ಧಕ್ಕರ್ಧ ಜನರು ಮಹಿಳೆಯರಾಗಿದ್ದರು. ಇದು ತುಂಬಾ ಆಶಾದಾಯಕ ಬೆಳವಣಿಗೆಯಾಗಿದೆ” ಎಂದು ಸಂತಸ ವ್ಯಕ್ತಪಡಿಸುತ್ತಾರೆ.

ಇಂಡಿಯನ್ ಕಾರ್ಟೂನ್ ಗ್ಯಾಲರಿ ಕೇವಲ ವ್ಯಂಗ್ಯಚಿತ್ರಗಳ ಪ್ರದರ್ಶನ ಮಾತ್ರ ಮಾಡುವುದಲ್ಲದೆ, ವ್ಯಂಗ್ಯಚಿತ್ರಗಳ ಬಗೆಗಿನ ಸುಮಾರು 3 ಸಾವಿರ ಅತೀ ಅಪರೂಪದ ಪುಸ್ತಕಗಳ ಗ್ರಂಥಾಲಯವನ್ನೂ ಹೊಂದಿದೆ. “ಇಲ್ಲಿರುವ ಪುಸ್ತಕಗಳು ಭಾರತದ ಬೇರೆಲ್ಲೂ ಸಿಗದಿರುವಷ್ಟು ಅಪರೂಪದ್ದಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ದೇಶದ ಅನೇಕ ವಿಶ್ವವಿದ್ಯಾಲಯಗಳಿಂದ ವ್ಯಂಗ್ಯಚಿತ್ರಗಳ ಬಗ್ಗೆ ಅಧ್ಯಯನ ನಡೆಸುವ ವಿದ್ಯಾರ್ಥಿಗಳು ಗ್ಯಾಲರಿಗೆ ಭೇಟಿ ನೀಡುತ್ತಾರೆ” ಎಂದು ನರೇಂದ್ರ ಹೇಳುತ್ತಾರೆ. ಗ್ರಂಥಾಲಯಗಳ ಜೊತೆಗೆ ವ್ಯಂಗ್ಯಚಿತ್ರ ಪುಸ್ತಕಗಳ ಮಾರಾಟವನ್ನೂ ಗ್ಯಾಲರಿ ಮಾಡುತ್ತಿದೆ.

“ಗ್ಯಾಲರಿಗೆ ಎಲ್ಲರಿಗೂ ಉಚಿತ ಪ್ರವೇಶವಿದ್ದು, ಗ್ಯಾಲರಿಯ ಸದಸ್ಯತನವನ್ನೂ ಪಡೆದುಕೊಳ್ಳಬಹುದಾಗಿದೆ. ತಿಂಗಳಿಗೆ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಜನರು ಗ್ಯಾಲರಿಗೆ ಭೇಟಿ ನೀಡುತ್ತಿದ್ದು ಅದರಲ್ಲೂ ವಿದೇಶಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದುಹೋಗುತ್ತಾರೆ” ಎನ್ನುತ್ತಾರೆ ನರೇಂದ್ರ ಅವರು. “ಕೊರೊನಾ ಸಮಯದಲ್ಲಿ ಗ್ಯಾಲರಿಯಲ್ಲಿ ಜನರ ಓಡಾಟ ಇದ್ದಿರಲಿಲ್ಲ ಎನ್ನುವುದನ್ನು ಬಿಟ್ಟರೆ, ಉಳಿದ ಎಲ್ಲಾ ಸಮಯದಲ್ಲೂ ಗ್ಯಾಲರಿಗೆ ವ್ಯಂಗ್ಯಚಿತ್ರ ಪ್ರಿಯರು ಭೇಟಿ ನೀಡುತ್ತಲೇ ಇದ್ದಾರೆ” ಎಂದು ಖುಷಿ ವ್ಯಕ್ತಪಡಿಸುತ್ತಾರೆ ಅವರು.

ನೈಸ್ ಕಂಪೆನಿಯ ಮುಖ್ಯಸ್ಥರಾದ ಅಶೋಕ್ ಖೇಣಿ ಇಂಡಿಯನ್ ಕಾರ್ಟೂನ್ ಗ್ಯಾಲರಿಗೆ ಜಾಗವನ್ನು ನೀಡಿ ನೆರವಾಗಿದ್ದಾರೆ ಎಂದು ನರೇಂದ್ರ ಅವರು ನೆನಪಿಸಿಕೊಳ್ಳತ್ತಾರೆ. ”ಅಶೋಕ್ ಅವರಿಗೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಕಾರ್ಟೂನಿಸ್ಟ್ ತುಂಬಾ ಋಣಿಯಾಗಿದೆ. ಈ ಕಲೆಯನ್ನು ಬೆಳೆಸಲು ಅವರು ನೀಡಿರುವ ಕೊಡುಗೆ ಶ್ಲಾಘನೀಯ” ಎಂದು ಅವರು ಹೇಳುತ್ತಾರೆ.

ಪ್ರಸ್ತುತ ಬೆಳವಣಿಗೆಗಳ ಬಗ್ಗೆ ಮಾತನಾಡುವ ನರೇಂದ್ರ ಅವರು, “ವ್ಯಂಗ್ಯಚಿತ್ರ ಕಲೆ ಎನ್ನುವುದು ಆಂಟಿ ಎಸ್ಟಾಬ್ಲಿಷ್‌ಮೆಂಟ್ ಆದದ್ದು. ವ್ಯಂಗ್ಯಚಿತ್ರಕಾರರ ಪ್ರಮುಖ ಕೆಲಸವೇ ಅಧಿಕಾರದಲ್ಲಿ ಇರುವವರನ್ನು ಪ್ರಶ್ನೆ ಮಾಡುವುದು. ಆಡಳಿತಕ್ಕೆ ಚಾಟಿ ಬೀಸಿ ಅವರನ್ನು ಮತ್ತು ಜನರನ್ನು ಎಚ್ಚರಿಸುವುದು. ಇದೇ ಕಾರ್ಟೂನಿಸ್ಟ್‌ಗಳ ಕರ್ತವ್ಯ. ಕೇವಲ ಅಧಿಕಾರದಲ್ಲಿ ಇರುವವರು ಮಾತ್ರವಲ್ಲ, ವಿರೋಧ ಪಕ್ಷಗಳನ್ನೂ ನಾವು ಟೀಕಿಸುತ್ತೇವೆ. ಹಿಂದಿನಿಂದಲೂ ಅದು ನಡೆದುಕೊಂಡು ಬಂದಿದೆ” ಎಂದು ಹೇಳುತ್ತಾರೆ.

“ಸರ್ಕಾರದ ವಿರುದ್ಧ ಕಾರ್ಟೂನ್ ಬರೆದಾಗ ಅದರ ಅಭಿಮಾನಿಗಳು ಕಾರ್ಟೂನಿಸ್ಟ್‌ಗಳ ಮೇಲೆ ಮುಗಿಬೀಳುತ್ತಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಾಗಿದೆ. ಅದಾಗಿಯೂ ಕಾರ್ಟೂನಿಸ್ಟ್‌ಗಳು ತಮ್ಮ ಕೆಲಸವನ್ನು ಮಾಡುತ್ತಾ, ಕಾರ್ಟೂನ್‌ಗಳನ್ನು ಬರೆಯುತ್ತಾ, ಚಾಟಿ ಬೀಸುತ್ತಲೇ ಇದ್ದಾರೆ. ಪತ್ರಿಕೆಗಳನ್ನು ಬೇಕಾದರೆ ಪ್ರಭುತ್ವಕ್ಕೆ ಬಗ್ಗು ಬಡಿಯಬಹುದು, ಆದರೆ ವ್ಯಂಗ್ಯಚಿತ್ರಕಾರರನ್ನು ಬಗ್ಗುಬಡಿಯಲು ಆಗುವುದಿಲ್ಲ, ವ್ಯಂಗ್ಯಚಿತ್ರಗಳ ಹಿರಿಮೆ ಇದು” ಎಂದು ವಿ.ಜಿ. ನರೇಂದ್ರ ಅವರು ಹೆಮ್ಮೆಯಿಂದ ಹೇಳುತ್ತಾರೆ.

ನಗರದ ಮಧ್ಯಭಾಗದಲ್ಲಿರುವ ’ಇಂಡಿಯನ್ ಕಾರ್ಟೂನ್ ಗ್ಯಾಲರಿ’ಗೆ ನೀವೂ ಬೇಟಿ ಕೊಡಿ.


ಇದನ್ನೂ ಓದಿ: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...