Homeಮುಖಪುಟಕೇರಳದಲ್ಲಿ ಭೂಕುಸಿತ; 12 ಮಂದಿ ಸಾವು, ಸಂಕಷ್ಟದಲ್ಲಿ 60 ಮಂದಿ

ಕೇರಳದಲ್ಲಿ ಭೂಕುಸಿತ; 12 ಮಂದಿ ಸಾವು, ಸಂಕಷ್ಟದಲ್ಲಿ 60 ಮಂದಿ

- Advertisement -
- Advertisement -

ಕೇರಳದ ಇಡುಕ್ಕಿ ಜಿಲ್ಲೆಯ ರಾಜಕ್ಕಾಡ್‌ನಲ್ಲಿ ಶುಕ್ರವಾರ ಮುಂಜಾನೆ ಭಾರಿ ಭೂಕುಸಿತ ಉಂಟಾಗಿ ಚಹಾ ತೋಟ ಕಾರ್ಮಿಕರ ವಾಸಸ್ಥಳವನ್ನು ಧ್ವಂಸಗೊಳಿಸಿದ ನಂತರ 12 ಜನರು ಸಾವನ್ನಪ್ಪಿದ್ದಾರೆ. ಮತ್ತು 60 ಮಂದಿ ಕೊಳೆತ ಮತ್ತು ಬಂಡೆಗಳ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕನಿಷ್ಠ 10 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಇಡುಕ್ಕಿ ಜಿಲ್ಲಾಧಿಕಾರಿ ಎಚ್ ದಿನೇಶನ್ ಹೇಳಿದ್ದಾರೆ. ಈ ಪ್ರದೇಶದಲ್ಲಿ ಭಾರಿ ಮಳೆಯ ಮತ್ತು ಮಂಜಿನ ವಾತಾವರಣವು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ತಪ್ಪಿಸಿಕೊಂಡ ಕಾರ್ಮಿಕರೊಬ್ಬರು ಎರಾವಿಕುಲಂ ರಾಷ್ಟ್ರೀಯ ಉದ್ಯಾನವನದಲ್ಲಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಇಂದು ಬೆಳಿಗ್ಗೆ ಈ ದುರಂತ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

ಇದು ಒಂದು ದೊಡ್ಡ ದುರಂತ. ಇದು ಗುಡ್ಡಗಾಡು ಪ್ರದೇಶವಾಗಿದ್ದು, ಕುಸಿದ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಕೆಲವು ರಸ್ತೆಗಳು ಧಾರಾಕಾರ ಮಳೆಯಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗಿದೆ.

ಗಾಯಾಳುಗಳನ್ನು ಪತ್ತೆಹಚ್ಚಲು ವಿಮಾನ ಹಾರಾಟಕ್ಕಾಗಿ ನಾವು ವಾಯುಪಡೆಯ ಸಹಾಯವನ್ನು ಕೋರಿದ್ದೇವೆ. ಆದರೆ ಪ್ರತಿಕೂಲ ವಾತಾವರಣದಲ್ಲಿ ಇದು ಕಷ್ಟಕರವಾಗಿರುತ್ತದೆ ಎಂದು ನಮಗೆ ತಿಳಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಇ ಚಂದ್ರಶೇಖರನ್ ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ವಿದ್ಯುತ್ ಮತ್ತು ಸಂವಹನ ಜಾಲಗಳು ಅಸ್ತವ್ಯಸ್ತಗೊಂಡಿವೆ ಎಂದು ಸ್ಥಳೀಯ ಜನರು ತಿಳಿಸಿದ್ದಾರೆ. ಇದು ರಕ್ಷಣಾ ಕಾರ್ಯವನ್ನು ವಿಳಂಬಗೊಳಿಸಿತು.

ಮುಂಜಾನೆ ಅಪಘಾತ ಸಂಭವಿಸಿದ ಕಾರಣ, ಬಾಧಿತರಾದವರಲ್ಲಿ ಅನೇಕರು ನಿದ್ರೆಯಲ್ಲಿದ್ದರು. ಇದರಿಂದಾಗಿ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಈ ಪ್ರದೇಶದಲ್ಲಿ ಕನಿಷ್ಠ 84 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿ ನಮ್ಮಲ್ಲಿದೆ. ಅವರಲ್ಲಿ ಹೆಚ್ಚಿನವರು ನೆರೆಯ ತಮಿಳುನಾಡಿನವರು. ಅವರ ಅಗತ್ಯಗಳನ್ನು ಪೂರೈಸಲು ಒಂದು ಕ್ಯಾಂಟೀನ್ ಸಹ ಇತ್ತು ಎಂದು ಸ್ಥಳೀಯರಾದ ಪಾರ್ಥಸಾರಥಿ ಹೇಳಿದ್ದಾರೆ.

ಈ ಘಟನೆ ನಡೆದ ಸ್ಥಳವು 2018 ರ ಪ್ರವಾಹದಿಂದ ಹಾನಿಗೊಳಗಾದ ಹಿಲ್ ರೆಸಾರ್ಟ್ ಮುನ್ನಾರ್‌ನಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿದೆ.

ಭಾರತ ಮೆಟ್ರೊಲಾಜಿಕಲ್ ಡಿಪಾರ್ಟ್ಮೆಂಟ್ (ಐಎಂಡಿ) ಕೋಝಿಕೋಡ್, ವಯನಾಡ್ ಮತ್ತು ಇಡುಕ್ಕಿ ಸೇರಿದಂತೆ ಇತರ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆಯ ನಂತರ ಅನೇಕ ನದಿಗಳು ತುಂಬಿ ಹರಿಯುತ್ತಿವೆ. ಇದೇ ಸ್ಥಿತಿ ಮುಂದುವರಿದರೆ ಇಡುಕಿ ಸೇರಿದಂತೆ ಕೆಲವು ಅಣೆಕಟ್ಟುಗಳ ಕವಾಟುಗಳನ್ನು ತೆರೆಯಲಾಗುವುದು ಎಂದು ನೀರಾವರಿ ಇಲಾಖೆ ತಿಳಿಸಿದೆ.

ಶನಿವಾರದ ವೇಳೆಗೆ ಭಾರೀ ಮಳೆಯಾಗಲಿದ್ದು, ಇದು ಭಾನುವಾರದವರೆಗೆ ಇರುತ್ತದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಎನ್‌ಡಿಆರ್‌ಎಫ್ ಆರು ತಂಡಗಳನ್ನು ವಯನಾಡ್ ಮತ್ತು ಇಡುಕ್ಕಿಗೆ ಕರೆದೊಯ್ದಿದೆ.

ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತಕ್ಕೆ ಹೆದರಿ ಅನೇಕ ಕುಟುಂಬಗಳನ್ನು ಸ್ಥಳಾಂತರಿಸಲಾಯಿತು ಮತ್ತು ಎಲ್ಲಾ ಪರಿಹಾರ ಶಿಬಿರಗಳಲ್ಲಿ ಕೊರೊನಾ ಪ್ರೋಟೋಕಾಲ್ ಜಾರಿಯಲ್ಲಿರುತ್ತದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನ ಮತ್ತು ಕೊರೊನಾದ ಅವಳಿ ಬೆದರಿಕೆಗಳನ್ನು ಗಮನದಲ್ಲಿಟ್ಟುಕೊಂಡು ಜನರು ಹೆಚ್ಚು ಜಾಗರೂಕರಾಗಿರಿ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಳಿಕೊಂಡಿದ್ದಾರೆ.


ಇದನ್ನೂ ಓದಿ: ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...