Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...