Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ,...

ಭೀಮಾ ಕೋರೆಗಾಂವ್ ಪ್ರಕರಣ: ನಾಲ್ಕು ವರ್ಷಗಳ ನಂತರ ಇಬ್ಬರಿಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

ಎಲ್ಗರ್ ಪರಿಷತ್ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಾಲ್ಕು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತರಾದ ಸಾಗರ್ ಗೋರ್ಖೆ ಮತ್ತು ರಮೇಶ್ ಗೈಚೋರ್ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈಗಾಗಲೇ ಬಿಡುಗಡೆಯಾದ...

‘ಗುಜರಾತ್‌ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ’: ಪ್ರಧಾನಿ ನರೇಂದ್ರ ಮೋದಿ 

ತಿರುವನಂತಪುರಂ: ಕೇರಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ವಿಜಯವನ್ನು "ಬದಲಾವಣೆಗೆ ಮಹತ್ವದ ಜನಾದೇಶ" ಎಂದು ಶ್ಲಾಘಿಸಿದ್ದಾರೆ.  ಇದೇ ವೇಳೆ "ಜನಪರ ಮತ್ತು...

ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು

ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ...

‘ಅತ್ಯಾಚಾರ-ಕೊಲೆ ಸಣ್ಣ ಘಟನೆ’: ಸಂಸದ ರಾಜಶೇಖರ್ ಹಿಟ್ನಾಳ್ ವಿವಾದಾತ್ಮಕ ಹೇಳಿಕೆ: ಸಂಸದರ ಹೇಳಿಕೆಗೆ ವ್ಯಾಪಕ ಖಂಡನೆ 

ಕೊಪ್ಪಳ: ಒಂದು ವರ್ಷದ ಹಿಂದೆ ಸಾಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ವ್ಯಕ್ತಿಯ ಕೊಲೆ ಪ್ರಕರಣ ಸಣ್ಣದಾಗಿದ್ದರೂ ಮಾಧ್ಯಮಗಳು ವೈಭವೀಕರಿಸಿದ್ದರಿಂದ ಪ್ರವಾಸೋದ್ಯಮಕ್ಕೆ ವ್ಯಾಪಕ ಪೆಟ್ಟು ಬಿದ್ದಿದೆ ಎಂದು ಸಂಸದ ರಾಜಶೇಖರ...

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...