Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...