Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...