Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...