Homeಚಳವಳಿಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

ಗುರು ರವಿದಾಸ್ ಜಯಂತಿ: ಯುಪಿಯಲ್ಲಿ ಹುಟ್ಟಿದ ಸಂತನ ಜನ್ಮದಿನಕ್ಕೆ ಸಿಖ್ಖರ ನಾಡು ಪಂಜಾಬ್‌ನಲ್ಲಿ ಹಬ್ಬ

’ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ’- ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

- Advertisement -
- Advertisement -

ಗುರು ರವಿದಾಸ್ 15 ರಿಂದ 16 ನೇ ಶತಮಾನದ ಭಕ್ತಿ ಚಳವಳಿಯ ಪ್ರಮುಖ ಕವಿ-ಸಂತ. ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳಲ್ಲಿ ಗುರುವಾಗಿ ಪೂಜಿಸಲ್ಪಡುವ ಅವರು ಕವಿ, ಸಮಾಜ ಸುಧಾರಕ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರು.

ಗುರು ರವಿದಾಸ್ ಅವರ ಜನ್ಮದಿನದ ನಿಖರವಾದ ದಿನಾಂಕ ತಿಳಿದಿಲ್ಲ. ಆದರೆ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ 1377 C.E ನಲ್ಲಿ ಜನಿಸಿದರು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಹುಟ್ಟಿದ್ದಾರೆ ಎಂದು ನಂಬಲಾಗಿದ್ದರೂ ಕೂಡ ತಮ್ಮ ಜೀವನವನ್ನು ಪಂಜಾಬ್‌ನಲ್ಲಿ ಕಳೆದ ಕಾರಣ ಇವರಿಗೆ ಹೆಚ್ಚು ಅನುಯಾಯಿಗಳಿರುವುದು ಪಂಜಾಬ್‌ನಲ್ಲಿ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹೇಬದಲ್ಲಿಯೂ ಗುರು ರವಿದಾಸರ ದೋಹೆ/ವಚನಗಳನ್ನು ಸೇರಿಸಲಾಗಿದೆ. ಅವರ ಬೋಧನೆಗಳನ್ನು ಪಂಜಾಬಿನಲ್ಲಿ ಅನುಸರಿಸಲಾಗುತ್ತದೆ.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು 

ಬಲ್ಜಿತ್ ಸಿಂಗ್, ಪಂಜಾಬ್

ಪಂಜಾಬ್‌ನಲ್ಲಿ ನಡೆಯುವ ಗುರು ರವಿದಾಸ್ ಜಯಂತಿ ಆಚರಣೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಪಂಜಾಬಿನ ಸಂಗ್ರೂರ್ ಜಿಲ್ಲೆಯ ರೋಜಾವ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಮಾತನಾಡಿದ್ದಾರೆ. “ಈ ದಿನಕ್ಕಾಗಿ ಪಂಜಾಬ್‌ನಲ್ಲಿ ಕೆಲವು ತಿಂಗಳುಗಳ ಮೊದಲೆ ತಯಾರಿಗಳು ಆರಂಭವಾಗುತ್ತವೆ. ಜಯಂತಿ ಆಚರಣೆಗೆ ಹಣ ಸಂಗ್ರಹಿಸಲಾಗುತ್ತದೆ. ಪಂಜಾಬ್‌ನ ಬೀದಿ ಬೀದಿಗಳಲ್ಲಿ ಲಂಗರ್‌ (ನಮ್ಮಲ್ಲಿನ ದಾಸೋಹ ರೀತಿ) ಆಯೋಜಿಸಲಾಗುತ್ತದೆ. ಈಗ ತಾನೇ ನಾನು ಗುರುದ್ವಾರಕ್ಕೆ ಹೋಗಿ ನಮನ ಸಲ್ಲಿಸಿ ಬಂದೆ. ಈಗಾಗಲೇ ಊರಿನ ಎಲ್ಲರೂ ಸೇರಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಊರಿನ ಎಲ್ಲರಿಗೂ ಲಂಗರ್‌ ಆಯೋಜನೆಯಾಗುತ್ತದೆ. ಎಲ್ಲರು ಜೊತೆಯಲ್ಲಿ ಕುಳಿತು ಊಟ ಮಾಡುತ್ತಾರೆ. ಹಬ್ಬದ ವಾತಾವರಣ ಇಡೀ ಪಂಜಾಬ್‌ನಲ್ಲಿರುತ್ತದೆ” ಎಂದರು.

“ಇವರ ಹೆಸರಿನಲ್ಲಿ ಎಲ್ಲಾ ಗ್ರಾಮಗಳಲ್ಲಿ ಟ್ರಸ್ಟ್ ಇವೆ. ಅಲ್ಲಿ ಸಂಗ್ರಹಿಸಿದ ಹಣದಲ್ಲಿ ಬಡವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲಾಗುತ್ತದೆ. ಅನಾಥಾಶ್ರಮ ಮತ್ತು ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಮಕ್ಕಳಿಗೆ ಅವರ ಬಗ್ಗೆ ತಿಳಿಸಲು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಅವರ ಬಗ್ಗೆ ಪಾಠವಿದೆ. ನಮ್ಮ ಪವಿತ್ರ ಗ್ರಂಥ ಗುರು ಗ್ರಂಥ ಸಾಹೇಬದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗಿದೆ” ಎಂದರು.

“15, 16 ನೇ ಕಾಲದಲ್ಲಿಯೇ ಜಾತಿಯನ್ನು ಬಹಿಷ್ಕರಿಸಿದ್ದ, ಅದರ ವಿರುದ್ಧ ಹೋರಾಡಿದವರು ಅವರು. ಅವರು ಹುಟ್ಟಿನ ಸಂದರ್ಭದಲ್ಲಿ ಭೇದ ಭಾವ ಅತಿಯಾಗಿತ್ತು. ಇವುಗಳನ್ನು ತೊಲಗಿಸುವಲ್ಲಿ ಅವರ ಪಾತ್ರ ಅಪಾರ. ಅವರು ಉತ್ತರ ಪ್ರದೇಶದ ಬನಾರಸ್‌ನಲ್ಲಿ ಹುಟ್ಟಿದ್ದರೂ ಕೂಡ ಅವರ ಜೊತೆಗೆ ನಮಗೆ ಅವಿನಾಭಾವ ಸಂಭಂಧವಿದೆ. ಚಮ್ಮಾರ ಜಾತಿಯ ಅತ್ಯಧಿಕ ಜನಸಂಖ್ಯೆ ಪಂಜಾಬ್‌ನಲ್ಲಿದೆ. ಗುರು ರವಿದಾಸ್ ಬಳಿಕ ಗುರುನಾನಕ್‌ ಬಂದಿದ್ದಾರೆ ಎಂಬ ಉಲ್ಲೇಖವಿದೆ. ಹೀಗಾಗಿ ಇವರ ಬೊಧನೆಗಳನ್ನು ಗುರುಗ್ರಂಥ ಸಾಹೇಬದಲ್ಲಿ ಅಳವಡಿಸಲಾಗಿದೆ. ಮೇಲು ಕೀಳುಗಳ ವಿರುದ್ಧದ ಹೋರಾಟದಲ್ಲಿ ನಮ್ಮ ಸ್ಪೂರ್ತಿ ಇವರು” ಎನ್ನುತ್ತಾರೆ ಬಲ್ಜಿತ್.

ಇದನ್ನೂ ಓದಿ: ಅಂಬೇಡ್ಕರ್‌ರವರು ರವಿದಾಸರ ಮತ್ತೊಂದು ರೂಪ ಎಂದು ಭಾವಿಸಿರುವ ಈ ಚಮ್ಮಾರರ ಮಂದಿರದ ಕುರಿತು

ಇನ್ನು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ, ಪ್ರತಿಬಾರಿಯ  ಗುರು ರವಿದಾಸ್ ಜಯಂತಿಯನ್ನು ಕಣ್ತುಂಬಿಕೊಳ್ಳುವ ವಿದ್ಯಾರ್ಥಿ ಮಾರುತಿ ಮಾನವ್‌ ಕೂಡ ನಾನುಗೌರಿ.ಕಾಂ ಜೊತೆಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಾರುತಿ ಮಾನವ್, ಬನಾರಸ್

“ಪ್ರತಿ ವರ್ಷ ಪಂಜಾಬಿನಿಂದ ಒಂದು ವಾರದ ಮುಂಚೆಯಿಂದಲೇ ಜನರು ಇಲ್ಲಿಗೆ ಬರಲು ಆರಂಭಿಸುತ್ತಾರೆ. ಇಲ್ಲಿ ಅವರಿಗೆ ಲಂಗರ್‍ ವ್ಯವಸ್ಥೆ, ಉಳಿಯಲು ಸ್ಥಳ ಎಲ್ಲವನ್ನು ಅವರೇ ಮಾಡಿಕೊಳ್ಳುತ್ತಾರೆ. ಕನಿಷ್ಠ ಅಂದರೆ 5 ಲಕ್ಷಕ್ಕೂ ಹೆಚ್ಚು ಜನ ಬರುತ್ತಾರೆ. ಇಲ್ಲಿ ಇರುವ ಎಲ್ಲಾ ಟ್ರಸ್ಟ್‌ಗಳು ಪಂಜಾಬಿನವರದ್ದು. ದೇವಸ್ಥಾನವನ್ನು ನೋಡಿಕೊಳ್ಳುವವರು ಕೂಡ ಇದೆ ಟ್ರಸ್ಟ್‌ಗಳು. ಫೆ.10 ರಿಂದಲೇ ಜನರ ದಂಡು ಬರಲು ಶುರುವಾಗಿತ್ತು. ಇವತ್ತು ಇನ್ನು ಅಧಿಕ ಜನ ಸೇರಿದ್ದಾರೆ. ಇನ್ನು ಒಂದು ವಾರ ಇಲ್ಲಿ ಜನರ ದಂಡು ಇದ್ದೆ ಇರುತ್ತದೆ” ಎನ್ನುತ್ತಾರೆ.

“ಇಲ್ಲಿನ ಮೇಲ್ಜಾತಿಯ ಸಂತರು, ಗುರುಗಳು, ಸಾಮಂತರು ಗುರು ರವಿದಾಸರಿಗೆ ಮನ್ನಣೆ ಕೊಡಲಿಲ್ಲ. ಅವರು ಕೊನೆಯ ದಿನಗಳನ್ನು ಹೆಚ್ಚು ಪಂಜಾಬ್‌ನಲ್ಲಿ ಕಳೆದಿದ್ದಾರೆ. ಅಲ್ಲಿ ಅವರ ಬೋಧನೆಗಳು ಹೆಚ್ಚು ಪ್ರಭಾವ ಬೀರಿವೆ. ಹೀಗಾಗಿ ಅಲ್ಲಿನ ಜನ ಅವರನ್ನು ಹೆಚ್ಚು ಆರಾಧಿಸುತ್ತಾರೆ. ಇದು ಅವರ ಜನ್ಮಸ್ಥಳವಾದ್ದರಿಂದ ಇಲ್ಲಿ ಬರುತ್ತಾರೆ. ಅವರಿಗೆ ಗೌರವ ಸಲ್ಲಿಸುತ್ತಾರೆ” ಎಂದು ಮಾರುತಿ ಮಾನವ್ ತಿಳಿಸಿದರು.

ಇನ್ನು ವಾರಣಾಸಿಗೆ ತೆರಳಿರುವ ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ, ಸಂತ ಶಿರೋಮಣಿ ಗುರು ರವಿದಾಸ್ ಜನಮ್ ಆಸ್ಥಾನ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರೀತಿ, ಸಹಾನುಭೂತಿ, ಪರಸ್ಪರ ಸಹಿಷ್ಣುತೆ ಮತ್ತು ಮನುಕುಲದ ಏಕತೆಯ ಅವರ ಬೋಧನೆಗಳನ್ನು ನಾವು ಅಳವಡಿಸಿಕೊಳ್ಳೋಣ ಎಂದಿದ್ದಾರೆ.

ಗುರು ರವಿದಾಸ್ ಜಯಂತಿಯನ್ನು ಪಂಜಾಬ್‌ನಲ್ಲಿ ವೈಭವಯುತವಾಗಿ ಆಚರಿಸಲಾಗುತ್ತದೆ. ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ಫೆ.14ರ ಬದಲು ಫೆ.20 ರಂದು ಚುನಾವಣೆ ನಡೆಸಲಾಗುತ್ತಿದೆ.


ಇದನ್ನೂ ಓದಿ: ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಗುರು ರವಿದಾಸ್ ಜಯಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...