Homeಮುಖಪುಟಭಾಷೆಯ ಬಗ್ಗೆ ಸಂಘರ್ಷದ ನಿಲುವು ಯಾಕೆ ಇರಬೇಕು: ಉಪ ರಾಷ್ಟ್ರಪತಿ ಪ್ರಶ್ನೆ

ಭಾಷೆಯ ಬಗ್ಗೆ ಸಂಘರ್ಷದ ನಿಲುವು ಯಾಕೆ ಇರಬೇಕು: ಉಪ ರಾಷ್ಟ್ರಪತಿ ಪ್ರಶ್ನೆ

- Advertisement -
- Advertisement -

ದೇಶದಾದ್ಯಂತ ಅದರಲ್ಲೂ ದಕ್ಷಿಣ ಭಾರತದಾದ್ಯಂತ ಭಾಷಾ ವಿವಾದ ನಡೆಯುತ್ತಿರುವ ನಡುವೆಯೂ, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ ಅವರು, ಭಾಷೆಯ ಬಗ್ಗೆ ಸಂಘರ್ಷದ ನಿಲುವು ಏಕೆ ಇರಬೇಕು ಎಂದು ಭಾನುವಾರ ಕೇಳಿದ್ದಾರೆ. ಪ್ರತಿಯೊಂದು ಭಾಷೆಯನ್ನು ಪೋಷಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಹೈದರಾಬಾದ್‌ನ ಐಐಟಿಯ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂವಾದದ ಸಂದರ್ಭದಲ್ಲಿ ಮಾತನಾಡಿದ ಧನ್ಖರ್, ಭಾರತವು ಸಂಸ್ಕೃತ, ಬಾಂಗ್ಲಾ, ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಇತರ ಹಲವು ಶ್ರೀಮಂತ ಭಾಷೆಗಳ ಭೂಮಿಯಾಗಿದ್ದು, ಸಂಸತ್ತಿನಲ್ಲಿಯೂ ಸಹ, 22 ಭಾಷೆಗಳಲ್ಲಿ ಏಕಕಾಲದಲ್ಲಿ ಅನುವಾದ ನಡೆಯುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಕೆಲವು ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿರುವುದನ್ನು ಹೆಮ್ಮೆಯ ಕ್ಷಣ ಎಂದು ಅವರು ಉಲ್ಲೇಖಿಸಿದ್ದಾರೆ. ಭಾಷೆಗಳು ಜಾಗತಿಕ ವ್ಯಾಪ್ತಿಯನ್ನು ಹೊಂದಿರುವುದರಿಂದ, ಪ್ರತಿಯೊಂದು ಭಾಷೆಯನ್ನು ಪೋಷಿಸಬೇಕು. ಅವು ಸಾಹಿತ್ಯದ ಚಿನ್ನದ ಗಣಿ, ಮತ್ತು ಈ ಸಾಹಿತ್ಯ ಕೃತಿಗಳಾದ ವೇದಗಳು, ಪುರಾಣಗಳು, ಮಹಾಕಾವ್ಯಗಳು ರಾಮಾಯಣ, ಮಹಾಭಾರತ ಮತ್ತು ಗೀತೆಯು ಜ್ಞಾನ ಮತ್ತು ಬುದ್ಧಿವಂತಿಕೆಯಿಂದ ತುಂಬಿವೆ ಎಂದು ಅವರು ಹೇಳಿದ್ದಾರೆ. ಭಾಷೆಯ ಬಗ್ಗೆ

ಪ್ರತಿಷ್ಠಿತ ಸಂಸ್ಥೆಗಳಿಂದ ಹಳೆಯ ವಿದ್ಯಾರ್ಥಿಗಳ ಸಂಘಗಳ ಒಕ್ಕೂಟವನ್ನು ರಚಿಸುವ ಕಲ್ಪನೆಯ ಬಗ್ಗೆ ಮಾತನಾಡಿದ ಜಗದೀಪ್ ಧನ್ಖರ್ ಅವರು, “ಜಾಗತಿಕ ವಿಶ್ವವಿದ್ಯಾಲಯಗಳು ಮತ್ತು ಅವುಗಳ ದತ್ತಿ ನಿಧಿಯನ್ನು ಗಮನಿಸಿ. ಅವುಗಳ ಶತಕೋಟಿ ಯುಎಸ್ ಡಾಲರ್‌ಗಳಾಗಿರುತ್ತವೆ. ಅಗ್ರ ಪಟ್ಟಿಯಲ್ಲಿ 50 ಬಿಲಿಯನ್ ಡಾಲರ್‌ಗಳನ್ನು ಸಮೀಪಿಸುತ್ತದೆ. ಇದು ನಮ್ಮಲ್ಲಿ ಏಕೆ ಇಲ್ಲ?” ಎಂದು ಪ್ರಶ್ನಿಸಿದ್ದಾರೆ.

“ನಮ್ಮಲ್ಲಿ ಹಳೆಯ ವಿದ್ಯಾರ್ಥಿಗಳಿದ್ದಾರೆ. ನಮ್ಮ ಹಳೆಯ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳಿಗೆ ಕೊಡುಗೆ ನೀಡಲಿ. ಇಲ್ಲಿ ಮೊತ್ತವು ಅಪ್ರಸ್ತುತವಾಗುತ್ತದೆ; ಆದರೆ ಸಂಸ್ಥೆಯೊಂದಿಗೆ ಸಂಪರ್ಕವನ್ನು ಬೆಳೆಸುವುದು ಈ ಕೊಡುಗೆಯ ಮನೋಭಾವವಾಗಿದೆ.” ಎಂದು ಅವರು ಹೇಳಿದ್ದಾರೆ.

“ನಾನು ಒಂದು ಕಲ್ಪನೆಯನ್ನು ಪ್ರಸ್ತಾಪಿಸುತ್ತಿದ್ದೇನೆ. ನಮ್ಮಲ್ಲಿ ಐಐಟಿಗಳು ಮತ್ತು ಇತರ ಪ್ರತಿಷ್ಠಿತ ಸಂಸ್ಥೆಗಳಿವೆ. ಅದರ ಹಳೆಯ ವಿದ್ಯಾರ್ಥಿಗಳ ಸಂಘಗಳು ಒಂದು ಒಕ್ಕೂಟವನ್ನು ರಚಿಸಬೇಕು. ಅದು ನೀತಿ ನಿರೂಪಕರಿಗೆ ಉನ್ನತ ಜಾಗತಿಕ ಮಾನದಂಡದ ಚಿಂತಕರ ಚಾವಡಿಯಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಕಾರ್ಪೊರೇಟ್ ವಲಯವು ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಮಾಡುವಂತೆ ಒತ್ತಾಯಿಸಿದ ಅವರು, “ಮೊದಲನೆಯದಾಗಿ, ನಮ್ಮ ಕಾರ್ಪೊರೇಟ್‌ಗಳು ಸಂಶೋಧನೆಯಲ್ಲಿ ಹೂಡಿಕೆ ಮಾಡಬೇಕು. ಅದರಲ್ಲೂ ಮುಖ್ಯವಾಗಿ ಅಭಿವೃದ್ಧಿ ಮತ್ತು ನಾವೀನ್ಯತೆಗಾಗಿ ಸಂಶೋಧನೆಯಲ್ಲಿ ಹೂಡಿಕೆ ಮಾಡಬೇಕು.” ಎಂದು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ಮುಖ್ಯ ನ್ಯಾಯಮೂರ್ತಿ ಯಾಕೆ ಪಾಲ್ಗೊಳ್ಳಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

ಸಿಬಿಐ ನಿರ್ದೇಶಕರ ನೇಮಕಾತಿಯಲ್ಲಿ ಮುಖ್ಯ ನ್ಯಾಯಮೂರ್ತಿ ಯಾಕೆ ಪಾಲ್ಗೊಳ್ಳಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...