Homeಕರ್ನಾಟಕಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

ಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

- Advertisement -
- Advertisement -

“ಭಾಷಾ ವೈವಿಧ್ಯತೆಯು ದೇಶದ ಹೆಮ್ಮೆ, ಆದರೆ ಅದರ ಬಗ್ಗೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಿರುವುದನ್ನು ನಟ ಕಿಚ್ಚ ಸುದೀಪ್‌ ಸ್ವಾಗತಿಸಿದ್ದಾರೆ.

“ಹಿಂದಿ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ” ಎಂದು ಇತ್ತೀಚೆಗೆ ಸುದೀಪ್‌ ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಸುದೀಪ್‌ ಅವರ ಬೆಂಬಲಕ್ಕೆ ಕನ್ನಡಿಗರು ಹಾಗೂ ಹಲವಾರು ಸಿನಿಮಾ ನಟ-ನಟಿಯವರು ನಿಂತಿದ್ದರು. ಸಂವಿಧಾನವನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದ ಕನ್ನಡಿಗರು ‘ರಾಷ್ಟ್ರಭಾಷೆ ಎಂಬುದಿಲ್ಲ’ ಎಂದು ನೆನಪಿಸಿದರು. ಕಿಚ್ಚ ಸುದೀಪ್‌ ಹೇಳಿಕೆಯನ್ನು ವಿರೋಧಿಸಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌, ‘ಹಿಂದಿ ರಾಷ್ಟ್ರ ಭಾಷೆ’ ಎಂದದ್ದು ತೀವ್ರ ವಿರೋಧಕ್ಕೆ ಕಾರಣವಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೆ ಹೇರಿಕೆ ಸಂಬಂಧ ಎದ್ದಿರುವ ಕಿಡಿಯ ನಡುವೆ ಪ್ರಧಾನಿ ಹೇಳಿಕೆ ಹೊರಬಿದ್ದಿದ್ದು, ಕಿಚ್ಚ ಸುದೀಪ್‌ ಪ್ರಧಾನಿಯವರ ಮಾತನ್ನು ಸ್ವಾಗತಿಸಿದ್ದಾರೆ. ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಸುದೀಪ್‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸಲು ಉದ್ದೇಶಿಸಿರಲಿಲ್ಲ. ಇದು ಅಜೆಂಡಾ ಇಲ್ಲದೆ ನಡೆದಿದೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನಷ್ಟೇ. ಪ್ರಧಾನಿಯವರೇ ಗೌರವಯುತ ಹಾಗೂ ಸೌಭಾಗ್ಯಯುತವಾದ ಮಾತುಗಳನ್ನು ಆಡಿದ್ದಾರೆ” ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯವರು ಈ ರೀತಿಯಲ್ಲಿ ಹೇಳಿರುವುದು ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಅಗಾಧವಾದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

“ಎಲ್ಲಾ ಭಾಷೆಗಳಿಗೂ ಆತ್ಮೀಯ ಸ್ವಾಗತ. ನಾನು ಕೇವಲ ಕನ್ನಡವನ್ನು ಮಾತ್ರ ಪ್ರತಿನಿಧಿಸಿ ಹೇಳುತ್ತಿಲ್ಲ, ಎಲ್ಲರ ಮಾತೃಭಾಷೆಗಳ ಕುರಿತು ಮಾತನಾಡುತ್ತಿದ್ದೇನೆ. ಪ್ರಧಾನಿಯವರು ಇಂದು ಪ್ರತಿಯೊಬ್ಬರ ಮಾತೃಭಾಷೆಯನ್ನು ಗೌರವಿಸಿದ್ದಾರೆ. ನಾವು ನರೇಂದ್ರ ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ನಾಯಕರನ್ನಾಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ, ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ” ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

ಬಾಲಿವುಡ್ ಹಾಗೂ  ದಕ್ಷಿಣ ಸಿನಿಮಾಗಳ ನಡುವೆ ಇತ್ತೀಚೆಗೆ ನಡೆದ ಕಿರು ತಿಕ್ಕಾಟದತ್ತ ಗಮನ ಸೆಳೆದ ಸುದೀಪ್‌, “ಪ್ಯಾನ್‌ ಇಂಡಿಯಾ ಸಿನಿಮಾ ಎಂಬುದು ಯಾವುದೋ ಒಂದು ಭಾಷೆಗೆ ಸೀಮಿತವಾಗಿಲ್ಲ. ಸಿನಿಮಾ ಚೆನ್ನಾಗಿದ್ದರೆ ಎಲ್ಲಾ ಭಾಷೆಯ ಜನರು ದೇಶದಾದ್ಯಂತ ನೋಡುತ್ತಾರೆ. ಅದು ದಕ್ಷಿಣ ಭಾರತದ ಸಿನಿಮಾವಾಗಿರಲಿ, ಹಿಂದಿ ಸಿನಿಮಾವಾಗಿರಲಿ, ಡಬ್ಬಿಂಗ್‌ ಆಗಿರಲಿ ಎಲ್ಲರೂ ನೋಡುತ್ತಾರೆ” ಎಂದಿದ್ದಾರೆ.

ಪ್ರಧಾನಿ ಮೋದಿಯವರು ಭಾಷೆಗಳ ಕುರಿತು ಮಾತನಾಡುತ್ತಾ, “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿರುವುದು ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ನಾವು ವ್ಯಕ್ತಪಡಿಸಿರುವ ಬದ್ಧತೆಯನ್ನು ತೋರಿಸುತ್ತದೆ. ಬಿಜೆಪಿಯು ಭಾರತೀಯ ಭಾಷೆಗಳನ್ನು ದೇಶದ ಆತ್ಮ ಮತ್ತು ದೇಶಕ್ಕೆ ಉತ್ತಮ ಭವಿಷ್ಯದ ಲಿಂಕ್ ಎಂದು ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

“ನಾನು ಇದನ್ನು ವಿಶೇಷವಾಗಿ ಪ್ರಸ್ತಾಪಿಸಲು ಬಯಸುತ್ತೇನೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಭಾಷೆಯ ಆಧಾರದ ಮೇಲೆ ಹೊಸ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ನಾವು ಈ ಬಗ್ಗೆ ದೇಶದ ಜನರನ್ನು ನಿರಂತರವಾಗಿ ಎಚ್ಚರಿಸಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...