Homeಕರ್ನಾಟಕಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

ಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

- Advertisement -
- Advertisement -

“ಭಾಷಾ ವೈವಿಧ್ಯತೆಯು ದೇಶದ ಹೆಮ್ಮೆ, ಆದರೆ ಅದರ ಬಗ್ಗೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಿರುವುದನ್ನು ನಟ ಕಿಚ್ಚ ಸುದೀಪ್‌ ಸ್ವಾಗತಿಸಿದ್ದಾರೆ.

“ಹಿಂದಿ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ” ಎಂದು ಇತ್ತೀಚೆಗೆ ಸುದೀಪ್‌ ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಸುದೀಪ್‌ ಅವರ ಬೆಂಬಲಕ್ಕೆ ಕನ್ನಡಿಗರು ಹಾಗೂ ಹಲವಾರು ಸಿನಿಮಾ ನಟ-ನಟಿಯವರು ನಿಂತಿದ್ದರು. ಸಂವಿಧಾನವನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದ ಕನ್ನಡಿಗರು ‘ರಾಷ್ಟ್ರಭಾಷೆ ಎಂಬುದಿಲ್ಲ’ ಎಂದು ನೆನಪಿಸಿದರು. ಕಿಚ್ಚ ಸುದೀಪ್‌ ಹೇಳಿಕೆಯನ್ನು ವಿರೋಧಿಸಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌, ‘ಹಿಂದಿ ರಾಷ್ಟ್ರ ಭಾಷೆ’ ಎಂದದ್ದು ತೀವ್ರ ವಿರೋಧಕ್ಕೆ ಕಾರಣವಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೆ ಹೇರಿಕೆ ಸಂಬಂಧ ಎದ್ದಿರುವ ಕಿಡಿಯ ನಡುವೆ ಪ್ರಧಾನಿ ಹೇಳಿಕೆ ಹೊರಬಿದ್ದಿದ್ದು, ಕಿಚ್ಚ ಸುದೀಪ್‌ ಪ್ರಧಾನಿಯವರ ಮಾತನ್ನು ಸ್ವಾಗತಿಸಿದ್ದಾರೆ. ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಸುದೀಪ್‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸಲು ಉದ್ದೇಶಿಸಿರಲಿಲ್ಲ. ಇದು ಅಜೆಂಡಾ ಇಲ್ಲದೆ ನಡೆದಿದೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನಷ್ಟೇ. ಪ್ರಧಾನಿಯವರೇ ಗೌರವಯುತ ಹಾಗೂ ಸೌಭಾಗ್ಯಯುತವಾದ ಮಾತುಗಳನ್ನು ಆಡಿದ್ದಾರೆ” ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯವರು ಈ ರೀತಿಯಲ್ಲಿ ಹೇಳಿರುವುದು ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಅಗಾಧವಾದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

“ಎಲ್ಲಾ ಭಾಷೆಗಳಿಗೂ ಆತ್ಮೀಯ ಸ್ವಾಗತ. ನಾನು ಕೇವಲ ಕನ್ನಡವನ್ನು ಮಾತ್ರ ಪ್ರತಿನಿಧಿಸಿ ಹೇಳುತ್ತಿಲ್ಲ, ಎಲ್ಲರ ಮಾತೃಭಾಷೆಗಳ ಕುರಿತು ಮಾತನಾಡುತ್ತಿದ್ದೇನೆ. ಪ್ರಧಾನಿಯವರು ಇಂದು ಪ್ರತಿಯೊಬ್ಬರ ಮಾತೃಭಾಷೆಯನ್ನು ಗೌರವಿಸಿದ್ದಾರೆ. ನಾವು ನರೇಂದ್ರ ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ನಾಯಕರನ್ನಾಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ, ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ” ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

ಬಾಲಿವುಡ್ ಹಾಗೂ  ದಕ್ಷಿಣ ಸಿನಿಮಾಗಳ ನಡುವೆ ಇತ್ತೀಚೆಗೆ ನಡೆದ ಕಿರು ತಿಕ್ಕಾಟದತ್ತ ಗಮನ ಸೆಳೆದ ಸುದೀಪ್‌, “ಪ್ಯಾನ್‌ ಇಂಡಿಯಾ ಸಿನಿಮಾ ಎಂಬುದು ಯಾವುದೋ ಒಂದು ಭಾಷೆಗೆ ಸೀಮಿತವಾಗಿಲ್ಲ. ಸಿನಿಮಾ ಚೆನ್ನಾಗಿದ್ದರೆ ಎಲ್ಲಾ ಭಾಷೆಯ ಜನರು ದೇಶದಾದ್ಯಂತ ನೋಡುತ್ತಾರೆ. ಅದು ದಕ್ಷಿಣ ಭಾರತದ ಸಿನಿಮಾವಾಗಿರಲಿ, ಹಿಂದಿ ಸಿನಿಮಾವಾಗಿರಲಿ, ಡಬ್ಬಿಂಗ್‌ ಆಗಿರಲಿ ಎಲ್ಲರೂ ನೋಡುತ್ತಾರೆ” ಎಂದಿದ್ದಾರೆ.

ಪ್ರಧಾನಿ ಮೋದಿಯವರು ಭಾಷೆಗಳ ಕುರಿತು ಮಾತನಾಡುತ್ತಾ, “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿರುವುದು ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ನಾವು ವ್ಯಕ್ತಪಡಿಸಿರುವ ಬದ್ಧತೆಯನ್ನು ತೋರಿಸುತ್ತದೆ. ಬಿಜೆಪಿಯು ಭಾರತೀಯ ಭಾಷೆಗಳನ್ನು ದೇಶದ ಆತ್ಮ ಮತ್ತು ದೇಶಕ್ಕೆ ಉತ್ತಮ ಭವಿಷ್ಯದ ಲಿಂಕ್ ಎಂದು ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

“ನಾನು ಇದನ್ನು ವಿಶೇಷವಾಗಿ ಪ್ರಸ್ತಾಪಿಸಲು ಬಯಸುತ್ತೇನೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಭಾಷೆಯ ಆಧಾರದ ಮೇಲೆ ಹೊಸ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ನಾವು ಈ ಬಗ್ಗೆ ದೇಶದ ಜನರನ್ನು ನಿರಂತರವಾಗಿ ಎಚ್ಚರಿಸಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...