Homeಕರ್ನಾಟಕಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

ಭಾಷಾ ವೈವಿಧ್ಯತೆ: ಪ್ರಧಾನಿ ಮೋದಿ ಹೇಳಿಕೆ ಸ್ವಾಗತಿಸಿದ ಕಿಚ್ಚ ಸುದೀಪ್‌

- Advertisement -
- Advertisement -

“ಭಾಷಾ ವೈವಿಧ್ಯತೆಯು ದೇಶದ ಹೆಮ್ಮೆ, ಆದರೆ ಅದರ ಬಗ್ಗೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಿರುವುದನ್ನು ನಟ ಕಿಚ್ಚ ಸುದೀಪ್‌ ಸ್ವಾಗತಿಸಿದ್ದಾರೆ.

“ಹಿಂದಿ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ” ಎಂದು ಇತ್ತೀಚೆಗೆ ಸುದೀಪ್‌ ಹೇಳಿಕೆ ನೀಡಿದ್ದು ಚರ್ಚೆಗೆ ಕಾರಣವಾಗಿತ್ತು. ಸುದೀಪ್‌ ಅವರ ಬೆಂಬಲಕ್ಕೆ ಕನ್ನಡಿಗರು ಹಾಗೂ ಹಲವಾರು ಸಿನಿಮಾ ನಟ-ನಟಿಯವರು ನಿಂತಿದ್ದರು. ಸಂವಿಧಾನವನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದ ಕನ್ನಡಿಗರು ‘ರಾಷ್ಟ್ರಭಾಷೆ ಎಂಬುದಿಲ್ಲ’ ಎಂದು ನೆನಪಿಸಿದರು. ಕಿಚ್ಚ ಸುದೀಪ್‌ ಹೇಳಿಕೆಯನ್ನು ವಿರೋಧಿಸಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌, ‘ಹಿಂದಿ ರಾಷ್ಟ್ರ ಭಾಷೆ’ ಎಂದದ್ದು ತೀವ್ರ ವಿರೋಧಕ್ಕೆ ಕಾರಣವಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೆ ಹೇರಿಕೆ ಸಂಬಂಧ ಎದ್ದಿರುವ ಕಿಡಿಯ ನಡುವೆ ಪ್ರಧಾನಿ ಹೇಳಿಕೆ ಹೊರಬಿದ್ದಿದ್ದು, ಕಿಚ್ಚ ಸುದೀಪ್‌ ಪ್ರಧಾನಿಯವರ ಮಾತನ್ನು ಸ್ವಾಗತಿಸಿದ್ದಾರೆ. ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಸುದೀಪ್‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ನಾನು ಯಾವುದೇ ಗಲಭೆ ಅಥವಾ ಯಾವುದೇ ರೀತಿಯ ಚರ್ಚೆಯನ್ನು ಪ್ರಾರಂಭಿಸಲು ಉದ್ದೇಶಿಸಿರಲಿಲ್ಲ. ಇದು ಅಜೆಂಡಾ ಇಲ್ಲದೆ ನಡೆದಿದೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನಷ್ಟೇ. ಪ್ರಧಾನಿಯವರೇ ಗೌರವಯುತ ಹಾಗೂ ಸೌಭಾಗ್ಯಯುತವಾದ ಮಾತುಗಳನ್ನು ಆಡಿದ್ದಾರೆ” ಅಭಿಪ್ರಾಯಪಟ್ಟಿದ್ದಾರೆ.

ಪ್ರಧಾನಿಯವರು ಈ ರೀತಿಯಲ್ಲಿ ಹೇಳಿರುವುದು ತಮ್ಮ ತಮ್ಮ ಭಾಷೆಯನ್ನು ಗೌರವಿಸುವ ಪ್ರತಿಯೊಬ್ಬರಿಗೂ ಅಗಾಧವಾದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

“ಎಲ್ಲಾ ಭಾಷೆಗಳಿಗೂ ಆತ್ಮೀಯ ಸ್ವಾಗತ. ನಾನು ಕೇವಲ ಕನ್ನಡವನ್ನು ಮಾತ್ರ ಪ್ರತಿನಿಧಿಸಿ ಹೇಳುತ್ತಿಲ್ಲ, ಎಲ್ಲರ ಮಾತೃಭಾಷೆಗಳ ಕುರಿತು ಮಾತನಾಡುತ್ತಿದ್ದೇನೆ. ಪ್ರಧಾನಿಯವರು ಇಂದು ಪ್ರತಿಯೊಬ್ಬರ ಮಾತೃಭಾಷೆಯನ್ನು ಗೌರವಿಸಿದ್ದಾರೆ. ನಾವು ನರೇಂದ್ರ ಮೋದಿ ಅವರನ್ನು ಕೇವಲ ರಾಜಕಾರಣಿಯಾಗಿ ನೋಡುವುದಿಲ್ಲ, ನಾಯಕರನ್ನಾಗಿ ನೋಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಯಾರನ್ನೂ ದೂಷಿಸಲು ಬಯಸುವುದಿಲ್ಲ, ಕೆಲವು ವಿಷಯಗಳು ಬಂದಾಗ ನನ್ನ ಅಭಿಪ್ರಾಯಗಳನ್ನು ಹೇಳುವ ಹಕ್ಕು ನನಗಿದೆ” ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಭಗತ್ ಸಿಂಗ್ ಬದಲು ಹೆಡಗೇವಾರ್ ಪಾಠ; ಮಕ್ಕಳ ಮೇಲೆ ಹಿಂದುತ್ವದ ಪ್ರಯೋಗ

ಬಾಲಿವುಡ್ ಹಾಗೂ  ದಕ್ಷಿಣ ಸಿನಿಮಾಗಳ ನಡುವೆ ಇತ್ತೀಚೆಗೆ ನಡೆದ ಕಿರು ತಿಕ್ಕಾಟದತ್ತ ಗಮನ ಸೆಳೆದ ಸುದೀಪ್‌, “ಪ್ಯಾನ್‌ ಇಂಡಿಯಾ ಸಿನಿಮಾ ಎಂಬುದು ಯಾವುದೋ ಒಂದು ಭಾಷೆಗೆ ಸೀಮಿತವಾಗಿಲ್ಲ. ಸಿನಿಮಾ ಚೆನ್ನಾಗಿದ್ದರೆ ಎಲ್ಲಾ ಭಾಷೆಯ ಜನರು ದೇಶದಾದ್ಯಂತ ನೋಡುತ್ತಾರೆ. ಅದು ದಕ್ಷಿಣ ಭಾರತದ ಸಿನಿಮಾವಾಗಿರಲಿ, ಹಿಂದಿ ಸಿನಿಮಾವಾಗಿರಲಿ, ಡಬ್ಬಿಂಗ್‌ ಆಗಿರಲಿ ಎಲ್ಲರೂ ನೋಡುತ್ತಾರೆ” ಎಂದಿದ್ದಾರೆ.

ಪ್ರಧಾನಿ ಮೋದಿಯವರು ಭಾಷೆಗಳ ಕುರಿತು ಮಾತನಾಡುತ್ತಾ, “ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಿರುವುದು ಎಲ್ಲಾ ಪ್ರಾದೇಶಿಕ ಭಾಷೆಗಳಿಗೆ ನಾವು ವ್ಯಕ್ತಪಡಿಸಿರುವ ಬದ್ಧತೆಯನ್ನು ತೋರಿಸುತ್ತದೆ. ಬಿಜೆಪಿಯು ಭಾರತೀಯ ಭಾಷೆಗಳನ್ನು ದೇಶದ ಆತ್ಮ ಮತ್ತು ದೇಶಕ್ಕೆ ಉತ್ತಮ ಭವಿಷ್ಯದ ಲಿಂಕ್ ಎಂದು ಪರಿಗಣಿಸುತ್ತದೆ” ಎಂದು ಹೇಳಿದ್ದಾರೆ.

“ನಾನು ಇದನ್ನು ವಿಶೇಷವಾಗಿ ಪ್ರಸ್ತಾಪಿಸಲು ಬಯಸುತ್ತೇನೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಭಾಷೆಯ ಆಧಾರದ ಮೇಲೆ ಹೊಸ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆದಿವೆ. ನಾವು ಈ ಬಗ್ಗೆ ದೇಶದ ಜನರನ್ನು ನಿರಂತರವಾಗಿ ಎಚ್ಚರಿಸಬೇಕು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...