Homeಮುಖಪುಟಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? - ಇಸ್ಮತ್‌ ಪಜೀರ್‌

ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? – ಇಸ್ಮತ್‌ ಪಜೀರ್‌

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ.

- Advertisement -
- Advertisement -

ಡಾ.ಫಿರೋಝ್ ಖಾನ್ ಎಂಬ ಸಂಸ್ಕೃತ ವಿದ್ವಾಂಸ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸಂಸ್ಕೃತ ಪ್ರೊಫೆಸರ್ ಆದದ್ದನ್ನು ಸಹಿಸದ ಮನುವಾದಿಗಳು ಅವರ ವಿರುದ್ಧ ದೊಡ್ಡ ಮಟ್ಟದ ಗಲಾಟೆಯೆಬ್ಬಿಸಿದ್ದಾರೆ. ಬನಾರಸ್ ವಿವಿಯ ವಿದ್ಯಾರ್ಥಿಗಳಲ್ಲಿ ಒಂದು ವಿಭಾಗವು ಡಾ.ಫಿರೋಝ್ ಖಾನ್ ಪರವಾಗಿದ್ದರೆ ಮನುವಾದಿ ಸಂಘಪರಿವಾರದ ಪರವಿರುವ ವಿದ್ಯಾರ್ಥಿ ಗುಂಪು ಖಾನರ ವಿರುದ್ಧವಿದ್ದಾರೆ. ಈ ಹೆಸರಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಮಾಡುತ್ತಿರುವ ರಾಜಕೀಯ ಅತ್ಯಂತ ನಾಚಿಕೆಗೇಡಿನದ್ದು ಎಂದು ನಾವು ಹೇಳಿದರೆ ಅದೇನೂ ಅವರಿಗೆ ನಾಟದು..‌ ಉಡಲು ಉಡುಪಿದ್ದೂ ಅದನ್ನು ಕಳಚಿ ಬಿಟ್ಟು ಪ್ರಜ್ಞಾಪೂರ್ವಕವಾಗಿ
ಬೆತ್ತಲಾದವರಲ್ಲಿ ಈ ರೀತಿಯ ವಾದವೇ ವ್ಯರ್ಥ…

ಅದಾಗ್ಯೂ ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ. ಇಂದು ಜಗತ್ತು ಮುಸ್ಲಿಮರ ಭಾಷೆ ಎನ್ನುವ ಖುರ್‌ಆನಿನ ಭಾಷೆ ಅರಬಿಕ್. ಅಂದ ಮಾತ್ರಕ್ಕೆ ಅದನ್ನು ಯಾವತ್ತೂ ಮುಸ್ಲಿಮರ ಭಾಷೆ ಎನ್ನಲಾಗದು. ಮಧ್ಯ ಪ್ರಾಚ್ಯದ ಹೆಚ್ಚಿನೆಲ್ಲಾ ದೇಶಗಳ ಕ್ರೈಸ್ತರು ಮತ್ತು ಯಹೂದಿಯರ ಮಾತೃ ಭಾಷೆಯೇ ಅರಬಿಕ್. ಅರಬಿ ಮಾತೃ ಭಾಷೆಯವರು ಎಂಬ ಕಾರಣಕ್ಕೆ ಅವರನ್ನು ಮುಸ್ಲಿಮರೆನ್ನಲಾದೀತೆ..?

ಇದನ್ನೂ ಓದಿ: ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಇಸ್ಲಾಮಿಕ್ ಕರ್ಮಶಾಸ್ತ್ರ ಮತ್ತು ಚರಿತ್ರೆಗಳು ಅರಬಿಕ್‌ನ ಬಳಿಕ ಅತೀ ಹೆಚ್ಚು ಬರೆದಿಡಲ್ಪಟ್ಟ ಭಾಷೆ ಪರ್ಶ್ಯನ್ ಭಾಷೆ. ಅಂತೆಯೇ ಅರೆಬಿಕ್ ಬಿಟ್ಟರೆ ಅತೀ ಹೆಚ್ಚು ಇಸ್ಲಾಮೀ ಸಾಹಿತ್ಯವಿರುವುದೂ ಪರ್ಷ್ಯನ್ ಭಾಷೆಯಲ್ಲಾಗಿದೆ. ಆದರೆ ಪರ್ಷ್ಯನ್ ಆ ಭಾಗದ ಅಥವಾ ಜಗತ್ತಿನ ಯಾವುದೇ ಭಾಗದ ಮುಸ್ಲಿಮರು ಮಾತ್ರ ಮಾತನಾಡುವ ಭಾಷೆಯಲ್ಲ. ಹಾಗೆಯೇ ಪಾರ್ಸಿ ಎಂದು ಅರಿಯಲ್ಪಡುವ ಜನಾಂಗವೇ ಇಸ್ಲಾಮ್ ಧರ್ಮಾನುಯಾಯಿಗಳಲ್ಲ.

ಜಗತ್ತಿನ ಅತ್ಯಂತ ಸುಂದರ ಮತ್ತು ಮಧುರ ಭಾಷೆಗಳಲ್ಲೊಂದೆಂದು ಗುರುತಿಸಲ್ಪಟ್ಟ ಉರ್ದುವಿನ ಮೇಲೆ ಸಂಘಪರಿವಾರದ ಉರಿನಂಜು ಇಂದು ನಿನ್ನೆಯದಲ್ಲ. ಅದಾಗ್ಯೂ ಉರ್ದು ಸಾಹಿತ್ಯದ ಮೇರು‌ ಸಾಹಿತಿಗಳಲ್ಲಿ ಅಸಂಖ್ಯ ಹಿಂದೂಗಳಿದ್ದಾರೆ. ಪಾಕಿಸ್ತಾನದ ಹಿಂದೂಗಳು ಮತ್ತು ಸಿಖ್ಖರಲ್ಲಿ ಬಹು ಸಂಖ್ಯಾತರ ಮಾತೃ ಭಾಷೆಯೂ ಉರ್ದು. ಅಷ್ಟು ದೂರವೇಕೆ ನಮ್ಮದೇ ದೇಶದ ಲಕ್ನೋ ಮತ್ತು ಹೈದರಾಬಾದಿನಲ್ಲಿ ಉರ್ದು ಮಾತೃ ಭಾಷಿಕರಾದ ಹಿಂದೂಗಳು ಧಾರಾಳವಾಗಿ ಕಾಣಸಿಗುತ್ತಾರೆ.

ಕಾಶ್ಮೀರಿಗರ ಅಧಿಕೃತ ಭಾಷೆ ಕಾಶ್ಮೀರಿ ಎಂದು ಎಲ್ಲಾ ಕಾಶ್ಮೀರಿಗರೂ ಒಪ್ಪುತ್ತಾರೆ. ಕಾಶ್ಮೀರದಲ್ಲಿ ಮುಸ್ಲಿಮರೇ ಬಹು ಸಂಖ್ಯಾತರು. ಅವರಲ್ಲಿ ಬಹುತೇಕರು ಕಾಶ್ಮೀರಿ ಮನೆ ಭಾಷೆಯವರು. (ಉರ್ದು ಮ‌ನೆ ಭಾಷಿಕರೂ ಇದ್ದಾರೆ) ಅಂತೆಯೇ ಅಲ್ಲಿನ ಹಿಂದೂಗಳ ಮನೆಭಾಷೆಯೂ ಕಾಶ್ಮೀರಿ.

ನನ್ನದೇ ಮಾತೃಭಾಷೆ ಬ್ಯಾರಿಯನ್ನು ತೆಗೆದುಕೊಳ್ಳೋಣ. ಬ್ಯಾರಿ ಭಾಷೆ ಕೇವಲ ಮುಸ್ಲಿಮರ ಭಾಷೆ ಎಂಬ ನಂಬಿಕೆ ಬಹುತೇಕರಲ್ಲಿದೆ. ಈ ಭಾಷೆಯಲ್ಲಿ ಎರಡು ಪ್ರಬೇಧಗಳಿವೆ. ಒಂದು ಬ್ಯಾರಿ ,ಇನ್ನೊಂದು ಮಲಾಮೆ. ಇವೆರಡರಲ್ಲಿರುವ ಶಬ್ಧಗಳು 98% ಒಂದೇ ಆಗಿವೆ. ಲಯದಲ್ಲಿ ಬ್ಯಾರಿ ಎಂಬ ಪ್ರಬೇಧ ತುಳುವನ್ನು ಹೋಲುತ್ತದಾದರೆ, ಮಲಾಮೆ ಮಲಯಾಳವನ್ನು ಹೋಲುತ್ತದೆ. ಆದರೆ ಮಲಾಮೆ ಮಲಯಾಳಂಗೆ ಬಹಳ ವ್ಯತ್ಯಾಸವಿದೆ. ಮಲಾಮೆ ಎಂಬ ಪ್ರಬೇಧದಲ್ಲಿ ಬ್ಯಾರಿಗಳಲ್ಲದೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತೀಯ ಸಮುದಾಯ, ಮೋಯ ಸಮುದಾಯ,ಮಣಿಯಾಣಿ ಸಮುದಾಯ ಮತ್ತು ಆಶಾರಿ ಸಮುದಾಯದವರ ಮನೆಭಾಷೆಯೂ ಹೌದು. ಹಾಗಾದರೆ ಇದು ಯಾರ ಭಾಷೆ?

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ. ಆ ಭಾಷೆಯ ಕುರಿತಂತೆ ಅವರು ಪೂನಾ ವಿಶ್ವವಿದ್ಯಾನಿಲಯಕ್ಕೆ ಸಂಶೋಧನಾ ಪ್ರಬಂಧ ಮಂಡಿಸಿ ೧೯೬೮ರಲ್ಲಿ ಪಿ.ಎಚ್.ಡಿ.ಪಡೆದಿರುತ್ತಾರೆ. ಅಂದಿನಿಂದ ಇಂದಿನವರೆಗೆ ಬ್ಯಾರಿ ಭಾಷೆಯ ಕುರಿತಂತೆ ಇನ್ನೊಂದು ಪಿ.ಎಚ್.ಡಿ. ಅಧ್ಯಯನ ನಡೆದಿಲ್ಲ.

ತುಳು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಹಿಂದೂ ಧರ್ಮೀಯರ ಭಾಷೆ. ಆದರೆ ತುಳು ಭಾಷೆಯಲ್ಲಿ ಗ್ರಾಂಥಿಕ ಸಾಹಿತ್ಯಕ್ಕೆ ನಾಂದಿ ಹಾಡಿದವರು ಮತ್ತು ತುಳು ಭಾಷೆಗೆ ಅಕಾಡೆಮಿಕ್ ಮನ್ನಣೆ ಒದಗಿಸಿದವರು ದೂರದ ಜರ್ಮನಿಯ ಬಾಸೆಲ್ ಮಿಶನ್‌‌ನ ಪ್ರವರ್ತಕರು. ಆಧುನಿಕ ತುಳು ರಂಗ ಭೂಮಿಯ ಭೀಷ್ಮ ಮೊಯ್ದಿನಬ್ಬ ಎಂಬ ಬ್ಯಾರಿ ಮುಸ್ಲಿಂ ನಾಟಕಕಾರ. (ಆದರೆ ದುರದೃಷ್ಟವಶಾತ್ ಇಂದು ತುಳು ನಾಟಕರಂಗ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿದೆ.)

ಕನ್ನಡದ ಜಾನಪದ ಸಾಹಿತ್ಯವನ್ನು ಸಂಗ್ರಹಿಸಿ ಕೂಡಿಟ್ಟ ಜಾನಪದ ದಿಗ್ಗಜ ಎಸ್.ಕೆ.ಕರೀಂ ಖಾನ್ ಅಫ್ಘಾನ್ ಮೂಲದವರು. ಅವರ ಮನೆ ಭಾಷೆ ಕನ್ನಡವಲ್ಲ.

ಕನ್ನಡದ ಮೇರು ಸಾಹಿತಿಗಳಾದ ಬೇಂದ್ರೆ ಮರಾಠಿ ಮನೆ ಭಾಷಿಕರಾದರೆ, ಮಾಸ್ತಿ ತಮಿಳು ಮನೆ ಭಾಷಿಕರು, ಗಿರೀಶ್ ಕಾರ್ನಾಡ್ ಕೊಂಕಣಿ ಮನೆ ಭಾಷಿಕರು, ಅಮೃತ ಸೋಮೇಶ್ವರ ಮಲಾಮೆ ಮನೆ ಭಾಷಿಕರು.

ಹೀಗೆ ಜಗತ್ತಿನ ಎಲ್ಲಾ ಭಾಷೆಗಳಿಗೂ ಆಯಾ ಭಾಷಿಕಲ್ಲದವರ ಕೊಡುಗೆ ಧಾರಾಳವಾಗಿ ಕಾಣಸಿಗುತ್ತವೆ.

ಹೀಗಿರುವಾಗ ಭಾಷೆಯೊಂದನ್ನು ನಿರ್ಧಿಷ್ಟ ಜಾತಿ, ಧರ್ಮ, ಜನಾಂಗ ಮತ್ತು ಭಾಷಿಕರಿಗೆ ಮಾತ್ರ ಸೀಮಿತಗೊಳಿಸಲು ಮನುವಾದಿಗಳಿಗೆ ಮಾತ್ರ ಸಾಧ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...