Homeಮುಖಪುಟಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? - ಇಸ್ಮತ್‌ ಪಜೀರ್‌

ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? – ಇಸ್ಮತ್‌ ಪಜೀರ್‌

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ.

- Advertisement -
- Advertisement -

ಡಾ.ಫಿರೋಝ್ ಖಾನ್ ಎಂಬ ಸಂಸ್ಕೃತ ವಿದ್ವಾಂಸ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸಂಸ್ಕೃತ ಪ್ರೊಫೆಸರ್ ಆದದ್ದನ್ನು ಸಹಿಸದ ಮನುವಾದಿಗಳು ಅವರ ವಿರುದ್ಧ ದೊಡ್ಡ ಮಟ್ಟದ ಗಲಾಟೆಯೆಬ್ಬಿಸಿದ್ದಾರೆ. ಬನಾರಸ್ ವಿವಿಯ ವಿದ್ಯಾರ್ಥಿಗಳಲ್ಲಿ ಒಂದು ವಿಭಾಗವು ಡಾ.ಫಿರೋಝ್ ಖಾನ್ ಪರವಾಗಿದ್ದರೆ ಮನುವಾದಿ ಸಂಘಪರಿವಾರದ ಪರವಿರುವ ವಿದ್ಯಾರ್ಥಿ ಗುಂಪು ಖಾನರ ವಿರುದ್ಧವಿದ್ದಾರೆ. ಈ ಹೆಸರಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಮಾಡುತ್ತಿರುವ ರಾಜಕೀಯ ಅತ್ಯಂತ ನಾಚಿಕೆಗೇಡಿನದ್ದು ಎಂದು ನಾವು ಹೇಳಿದರೆ ಅದೇನೂ ಅವರಿಗೆ ನಾಟದು..‌ ಉಡಲು ಉಡುಪಿದ್ದೂ ಅದನ್ನು ಕಳಚಿ ಬಿಟ್ಟು ಪ್ರಜ್ಞಾಪೂರ್ವಕವಾಗಿ
ಬೆತ್ತಲಾದವರಲ್ಲಿ ಈ ರೀತಿಯ ವಾದವೇ ವ್ಯರ್ಥ…

ಅದಾಗ್ಯೂ ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ. ಇಂದು ಜಗತ್ತು ಮುಸ್ಲಿಮರ ಭಾಷೆ ಎನ್ನುವ ಖುರ್‌ಆನಿನ ಭಾಷೆ ಅರಬಿಕ್. ಅಂದ ಮಾತ್ರಕ್ಕೆ ಅದನ್ನು ಯಾವತ್ತೂ ಮುಸ್ಲಿಮರ ಭಾಷೆ ಎನ್ನಲಾಗದು. ಮಧ್ಯ ಪ್ರಾಚ್ಯದ ಹೆಚ್ಚಿನೆಲ್ಲಾ ದೇಶಗಳ ಕ್ರೈಸ್ತರು ಮತ್ತು ಯಹೂದಿಯರ ಮಾತೃ ಭಾಷೆಯೇ ಅರಬಿಕ್. ಅರಬಿ ಮಾತೃ ಭಾಷೆಯವರು ಎಂಬ ಕಾರಣಕ್ಕೆ ಅವರನ್ನು ಮುಸ್ಲಿಮರೆನ್ನಲಾದೀತೆ..?

ಇದನ್ನೂ ಓದಿ: ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಇಸ್ಲಾಮಿಕ್ ಕರ್ಮಶಾಸ್ತ್ರ ಮತ್ತು ಚರಿತ್ರೆಗಳು ಅರಬಿಕ್‌ನ ಬಳಿಕ ಅತೀ ಹೆಚ್ಚು ಬರೆದಿಡಲ್ಪಟ್ಟ ಭಾಷೆ ಪರ್ಶ್ಯನ್ ಭಾಷೆ. ಅಂತೆಯೇ ಅರೆಬಿಕ್ ಬಿಟ್ಟರೆ ಅತೀ ಹೆಚ್ಚು ಇಸ್ಲಾಮೀ ಸಾಹಿತ್ಯವಿರುವುದೂ ಪರ್ಷ್ಯನ್ ಭಾಷೆಯಲ್ಲಾಗಿದೆ. ಆದರೆ ಪರ್ಷ್ಯನ್ ಆ ಭಾಗದ ಅಥವಾ ಜಗತ್ತಿನ ಯಾವುದೇ ಭಾಗದ ಮುಸ್ಲಿಮರು ಮಾತ್ರ ಮಾತನಾಡುವ ಭಾಷೆಯಲ್ಲ. ಹಾಗೆಯೇ ಪಾರ್ಸಿ ಎಂದು ಅರಿಯಲ್ಪಡುವ ಜನಾಂಗವೇ ಇಸ್ಲಾಮ್ ಧರ್ಮಾನುಯಾಯಿಗಳಲ್ಲ.

ಜಗತ್ತಿನ ಅತ್ಯಂತ ಸುಂದರ ಮತ್ತು ಮಧುರ ಭಾಷೆಗಳಲ್ಲೊಂದೆಂದು ಗುರುತಿಸಲ್ಪಟ್ಟ ಉರ್ದುವಿನ ಮೇಲೆ ಸಂಘಪರಿವಾರದ ಉರಿನಂಜು ಇಂದು ನಿನ್ನೆಯದಲ್ಲ. ಅದಾಗ್ಯೂ ಉರ್ದು ಸಾಹಿತ್ಯದ ಮೇರು‌ ಸಾಹಿತಿಗಳಲ್ಲಿ ಅಸಂಖ್ಯ ಹಿಂದೂಗಳಿದ್ದಾರೆ. ಪಾಕಿಸ್ತಾನದ ಹಿಂದೂಗಳು ಮತ್ತು ಸಿಖ್ಖರಲ್ಲಿ ಬಹು ಸಂಖ್ಯಾತರ ಮಾತೃ ಭಾಷೆಯೂ ಉರ್ದು. ಅಷ್ಟು ದೂರವೇಕೆ ನಮ್ಮದೇ ದೇಶದ ಲಕ್ನೋ ಮತ್ತು ಹೈದರಾಬಾದಿನಲ್ಲಿ ಉರ್ದು ಮಾತೃ ಭಾಷಿಕರಾದ ಹಿಂದೂಗಳು ಧಾರಾಳವಾಗಿ ಕಾಣಸಿಗುತ್ತಾರೆ.

ಕಾಶ್ಮೀರಿಗರ ಅಧಿಕೃತ ಭಾಷೆ ಕಾಶ್ಮೀರಿ ಎಂದು ಎಲ್ಲಾ ಕಾಶ್ಮೀರಿಗರೂ ಒಪ್ಪುತ್ತಾರೆ. ಕಾಶ್ಮೀರದಲ್ಲಿ ಮುಸ್ಲಿಮರೇ ಬಹು ಸಂಖ್ಯಾತರು. ಅವರಲ್ಲಿ ಬಹುತೇಕರು ಕಾಶ್ಮೀರಿ ಮನೆ ಭಾಷೆಯವರು. (ಉರ್ದು ಮ‌ನೆ ಭಾಷಿಕರೂ ಇದ್ದಾರೆ) ಅಂತೆಯೇ ಅಲ್ಲಿನ ಹಿಂದೂಗಳ ಮನೆಭಾಷೆಯೂ ಕಾಶ್ಮೀರಿ.

ನನ್ನದೇ ಮಾತೃಭಾಷೆ ಬ್ಯಾರಿಯನ್ನು ತೆಗೆದುಕೊಳ್ಳೋಣ. ಬ್ಯಾರಿ ಭಾಷೆ ಕೇವಲ ಮುಸ್ಲಿಮರ ಭಾಷೆ ಎಂಬ ನಂಬಿಕೆ ಬಹುತೇಕರಲ್ಲಿದೆ. ಈ ಭಾಷೆಯಲ್ಲಿ ಎರಡು ಪ್ರಬೇಧಗಳಿವೆ. ಒಂದು ಬ್ಯಾರಿ ,ಇನ್ನೊಂದು ಮಲಾಮೆ. ಇವೆರಡರಲ್ಲಿರುವ ಶಬ್ಧಗಳು 98% ಒಂದೇ ಆಗಿವೆ. ಲಯದಲ್ಲಿ ಬ್ಯಾರಿ ಎಂಬ ಪ್ರಬೇಧ ತುಳುವನ್ನು ಹೋಲುತ್ತದಾದರೆ, ಮಲಾಮೆ ಮಲಯಾಳವನ್ನು ಹೋಲುತ್ತದೆ. ಆದರೆ ಮಲಾಮೆ ಮಲಯಾಳಂಗೆ ಬಹಳ ವ್ಯತ್ಯಾಸವಿದೆ. ಮಲಾಮೆ ಎಂಬ ಪ್ರಬೇಧದಲ್ಲಿ ಬ್ಯಾರಿಗಳಲ್ಲದೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತೀಯ ಸಮುದಾಯ, ಮೋಯ ಸಮುದಾಯ,ಮಣಿಯಾಣಿ ಸಮುದಾಯ ಮತ್ತು ಆಶಾರಿ ಸಮುದಾಯದವರ ಮನೆಭಾಷೆಯೂ ಹೌದು. ಹಾಗಾದರೆ ಇದು ಯಾರ ಭಾಷೆ?

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ. ಆ ಭಾಷೆಯ ಕುರಿತಂತೆ ಅವರು ಪೂನಾ ವಿಶ್ವವಿದ್ಯಾನಿಲಯಕ್ಕೆ ಸಂಶೋಧನಾ ಪ್ರಬಂಧ ಮಂಡಿಸಿ ೧೯೬೮ರಲ್ಲಿ ಪಿ.ಎಚ್.ಡಿ.ಪಡೆದಿರುತ್ತಾರೆ. ಅಂದಿನಿಂದ ಇಂದಿನವರೆಗೆ ಬ್ಯಾರಿ ಭಾಷೆಯ ಕುರಿತಂತೆ ಇನ್ನೊಂದು ಪಿ.ಎಚ್.ಡಿ. ಅಧ್ಯಯನ ನಡೆದಿಲ್ಲ.

ತುಳು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಹಿಂದೂ ಧರ್ಮೀಯರ ಭಾಷೆ. ಆದರೆ ತುಳು ಭಾಷೆಯಲ್ಲಿ ಗ್ರಾಂಥಿಕ ಸಾಹಿತ್ಯಕ್ಕೆ ನಾಂದಿ ಹಾಡಿದವರು ಮತ್ತು ತುಳು ಭಾಷೆಗೆ ಅಕಾಡೆಮಿಕ್ ಮನ್ನಣೆ ಒದಗಿಸಿದವರು ದೂರದ ಜರ್ಮನಿಯ ಬಾಸೆಲ್ ಮಿಶನ್‌‌ನ ಪ್ರವರ್ತಕರು. ಆಧುನಿಕ ತುಳು ರಂಗ ಭೂಮಿಯ ಭೀಷ್ಮ ಮೊಯ್ದಿನಬ್ಬ ಎಂಬ ಬ್ಯಾರಿ ಮುಸ್ಲಿಂ ನಾಟಕಕಾರ. (ಆದರೆ ದುರದೃಷ್ಟವಶಾತ್ ಇಂದು ತುಳು ನಾಟಕರಂಗ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿದೆ.)

ಕನ್ನಡದ ಜಾನಪದ ಸಾಹಿತ್ಯವನ್ನು ಸಂಗ್ರಹಿಸಿ ಕೂಡಿಟ್ಟ ಜಾನಪದ ದಿಗ್ಗಜ ಎಸ್.ಕೆ.ಕರೀಂ ಖಾನ್ ಅಫ್ಘಾನ್ ಮೂಲದವರು. ಅವರ ಮನೆ ಭಾಷೆ ಕನ್ನಡವಲ್ಲ.

ಕನ್ನಡದ ಮೇರು ಸಾಹಿತಿಗಳಾದ ಬೇಂದ್ರೆ ಮರಾಠಿ ಮನೆ ಭಾಷಿಕರಾದರೆ, ಮಾಸ್ತಿ ತಮಿಳು ಮನೆ ಭಾಷಿಕರು, ಗಿರೀಶ್ ಕಾರ್ನಾಡ್ ಕೊಂಕಣಿ ಮನೆ ಭಾಷಿಕರು, ಅಮೃತ ಸೋಮೇಶ್ವರ ಮಲಾಮೆ ಮನೆ ಭಾಷಿಕರು.

ಹೀಗೆ ಜಗತ್ತಿನ ಎಲ್ಲಾ ಭಾಷೆಗಳಿಗೂ ಆಯಾ ಭಾಷಿಕಲ್ಲದವರ ಕೊಡುಗೆ ಧಾರಾಳವಾಗಿ ಕಾಣಸಿಗುತ್ತವೆ.

ಹೀಗಿರುವಾಗ ಭಾಷೆಯೊಂದನ್ನು ನಿರ್ಧಿಷ್ಟ ಜಾತಿ, ಧರ್ಮ, ಜನಾಂಗ ಮತ್ತು ಭಾಷಿಕರಿಗೆ ಮಾತ್ರ ಸೀಮಿತಗೊಳಿಸಲು ಮನುವಾದಿಗಳಿಗೆ ಮಾತ್ರ ಸಾಧ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...