Homeಮುಖಪುಟಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? - ಇಸ್ಮತ್‌ ಪಜೀರ್‌

ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? – ಇಸ್ಮತ್‌ ಪಜೀರ್‌

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ.

- Advertisement -
- Advertisement -

ಡಾ.ಫಿರೋಝ್ ಖಾನ್ ಎಂಬ ಸಂಸ್ಕೃತ ವಿದ್ವಾಂಸ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸಂಸ್ಕೃತ ಪ್ರೊಫೆಸರ್ ಆದದ್ದನ್ನು ಸಹಿಸದ ಮನುವಾದಿಗಳು ಅವರ ವಿರುದ್ಧ ದೊಡ್ಡ ಮಟ್ಟದ ಗಲಾಟೆಯೆಬ್ಬಿಸಿದ್ದಾರೆ. ಬನಾರಸ್ ವಿವಿಯ ವಿದ್ಯಾರ್ಥಿಗಳಲ್ಲಿ ಒಂದು ವಿಭಾಗವು ಡಾ.ಫಿರೋಝ್ ಖಾನ್ ಪರವಾಗಿದ್ದರೆ ಮನುವಾದಿ ಸಂಘಪರಿವಾರದ ಪರವಿರುವ ವಿದ್ಯಾರ್ಥಿ ಗುಂಪು ಖಾನರ ವಿರುದ್ಧವಿದ್ದಾರೆ. ಈ ಹೆಸರಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಮಾಡುತ್ತಿರುವ ರಾಜಕೀಯ ಅತ್ಯಂತ ನಾಚಿಕೆಗೇಡಿನದ್ದು ಎಂದು ನಾವು ಹೇಳಿದರೆ ಅದೇನೂ ಅವರಿಗೆ ನಾಟದು..‌ ಉಡಲು ಉಡುಪಿದ್ದೂ ಅದನ್ನು ಕಳಚಿ ಬಿಟ್ಟು ಪ್ರಜ್ಞಾಪೂರ್ವಕವಾಗಿ
ಬೆತ್ತಲಾದವರಲ್ಲಿ ಈ ರೀತಿಯ ವಾದವೇ ವ್ಯರ್ಥ…

ಅದಾಗ್ಯೂ ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ. ಇಂದು ಜಗತ್ತು ಮುಸ್ಲಿಮರ ಭಾಷೆ ಎನ್ನುವ ಖುರ್‌ಆನಿನ ಭಾಷೆ ಅರಬಿಕ್. ಅಂದ ಮಾತ್ರಕ್ಕೆ ಅದನ್ನು ಯಾವತ್ತೂ ಮುಸ್ಲಿಮರ ಭಾಷೆ ಎನ್ನಲಾಗದು. ಮಧ್ಯ ಪ್ರಾಚ್ಯದ ಹೆಚ್ಚಿನೆಲ್ಲಾ ದೇಶಗಳ ಕ್ರೈಸ್ತರು ಮತ್ತು ಯಹೂದಿಯರ ಮಾತೃ ಭಾಷೆಯೇ ಅರಬಿಕ್. ಅರಬಿ ಮಾತೃ ಭಾಷೆಯವರು ಎಂಬ ಕಾರಣಕ್ಕೆ ಅವರನ್ನು ಮುಸ್ಲಿಮರೆನ್ನಲಾದೀತೆ..?

ಇದನ್ನೂ ಓದಿ: ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಇಸ್ಲಾಮಿಕ್ ಕರ್ಮಶಾಸ್ತ್ರ ಮತ್ತು ಚರಿತ್ರೆಗಳು ಅರಬಿಕ್‌ನ ಬಳಿಕ ಅತೀ ಹೆಚ್ಚು ಬರೆದಿಡಲ್ಪಟ್ಟ ಭಾಷೆ ಪರ್ಶ್ಯನ್ ಭಾಷೆ. ಅಂತೆಯೇ ಅರೆಬಿಕ್ ಬಿಟ್ಟರೆ ಅತೀ ಹೆಚ್ಚು ಇಸ್ಲಾಮೀ ಸಾಹಿತ್ಯವಿರುವುದೂ ಪರ್ಷ್ಯನ್ ಭಾಷೆಯಲ್ಲಾಗಿದೆ. ಆದರೆ ಪರ್ಷ್ಯನ್ ಆ ಭಾಗದ ಅಥವಾ ಜಗತ್ತಿನ ಯಾವುದೇ ಭಾಗದ ಮುಸ್ಲಿಮರು ಮಾತ್ರ ಮಾತನಾಡುವ ಭಾಷೆಯಲ್ಲ. ಹಾಗೆಯೇ ಪಾರ್ಸಿ ಎಂದು ಅರಿಯಲ್ಪಡುವ ಜನಾಂಗವೇ ಇಸ್ಲಾಮ್ ಧರ್ಮಾನುಯಾಯಿಗಳಲ್ಲ.

ಜಗತ್ತಿನ ಅತ್ಯಂತ ಸುಂದರ ಮತ್ತು ಮಧುರ ಭಾಷೆಗಳಲ್ಲೊಂದೆಂದು ಗುರುತಿಸಲ್ಪಟ್ಟ ಉರ್ದುವಿನ ಮೇಲೆ ಸಂಘಪರಿವಾರದ ಉರಿನಂಜು ಇಂದು ನಿನ್ನೆಯದಲ್ಲ. ಅದಾಗ್ಯೂ ಉರ್ದು ಸಾಹಿತ್ಯದ ಮೇರು‌ ಸಾಹಿತಿಗಳಲ್ಲಿ ಅಸಂಖ್ಯ ಹಿಂದೂಗಳಿದ್ದಾರೆ. ಪಾಕಿಸ್ತಾನದ ಹಿಂದೂಗಳು ಮತ್ತು ಸಿಖ್ಖರಲ್ಲಿ ಬಹು ಸಂಖ್ಯಾತರ ಮಾತೃ ಭಾಷೆಯೂ ಉರ್ದು. ಅಷ್ಟು ದೂರವೇಕೆ ನಮ್ಮದೇ ದೇಶದ ಲಕ್ನೋ ಮತ್ತು ಹೈದರಾಬಾದಿನಲ್ಲಿ ಉರ್ದು ಮಾತೃ ಭಾಷಿಕರಾದ ಹಿಂದೂಗಳು ಧಾರಾಳವಾಗಿ ಕಾಣಸಿಗುತ್ತಾರೆ.

ಕಾಶ್ಮೀರಿಗರ ಅಧಿಕೃತ ಭಾಷೆ ಕಾಶ್ಮೀರಿ ಎಂದು ಎಲ್ಲಾ ಕಾಶ್ಮೀರಿಗರೂ ಒಪ್ಪುತ್ತಾರೆ. ಕಾಶ್ಮೀರದಲ್ಲಿ ಮುಸ್ಲಿಮರೇ ಬಹು ಸಂಖ್ಯಾತರು. ಅವರಲ್ಲಿ ಬಹುತೇಕರು ಕಾಶ್ಮೀರಿ ಮನೆ ಭಾಷೆಯವರು. (ಉರ್ದು ಮ‌ನೆ ಭಾಷಿಕರೂ ಇದ್ದಾರೆ) ಅಂತೆಯೇ ಅಲ್ಲಿನ ಹಿಂದೂಗಳ ಮನೆಭಾಷೆಯೂ ಕಾಶ್ಮೀರಿ.

ನನ್ನದೇ ಮಾತೃಭಾಷೆ ಬ್ಯಾರಿಯನ್ನು ತೆಗೆದುಕೊಳ್ಳೋಣ. ಬ್ಯಾರಿ ಭಾಷೆ ಕೇವಲ ಮುಸ್ಲಿಮರ ಭಾಷೆ ಎಂಬ ನಂಬಿಕೆ ಬಹುತೇಕರಲ್ಲಿದೆ. ಈ ಭಾಷೆಯಲ್ಲಿ ಎರಡು ಪ್ರಬೇಧಗಳಿವೆ. ಒಂದು ಬ್ಯಾರಿ ,ಇನ್ನೊಂದು ಮಲಾಮೆ. ಇವೆರಡರಲ್ಲಿರುವ ಶಬ್ಧಗಳು 98% ಒಂದೇ ಆಗಿವೆ. ಲಯದಲ್ಲಿ ಬ್ಯಾರಿ ಎಂಬ ಪ್ರಬೇಧ ತುಳುವನ್ನು ಹೋಲುತ್ತದಾದರೆ, ಮಲಾಮೆ ಮಲಯಾಳವನ್ನು ಹೋಲುತ್ತದೆ. ಆದರೆ ಮಲಾಮೆ ಮಲಯಾಳಂಗೆ ಬಹಳ ವ್ಯತ್ಯಾಸವಿದೆ. ಮಲಾಮೆ ಎಂಬ ಪ್ರಬೇಧದಲ್ಲಿ ಬ್ಯಾರಿಗಳಲ್ಲದೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತೀಯ ಸಮುದಾಯ, ಮೋಯ ಸಮುದಾಯ,ಮಣಿಯಾಣಿ ಸಮುದಾಯ ಮತ್ತು ಆಶಾರಿ ಸಮುದಾಯದವರ ಮನೆಭಾಷೆಯೂ ಹೌದು. ಹಾಗಾದರೆ ಇದು ಯಾರ ಭಾಷೆ?

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ. ಆ ಭಾಷೆಯ ಕುರಿತಂತೆ ಅವರು ಪೂನಾ ವಿಶ್ವವಿದ್ಯಾನಿಲಯಕ್ಕೆ ಸಂಶೋಧನಾ ಪ್ರಬಂಧ ಮಂಡಿಸಿ ೧೯೬೮ರಲ್ಲಿ ಪಿ.ಎಚ್.ಡಿ.ಪಡೆದಿರುತ್ತಾರೆ. ಅಂದಿನಿಂದ ಇಂದಿನವರೆಗೆ ಬ್ಯಾರಿ ಭಾಷೆಯ ಕುರಿತಂತೆ ಇನ್ನೊಂದು ಪಿ.ಎಚ್.ಡಿ. ಅಧ್ಯಯನ ನಡೆದಿಲ್ಲ.

ತುಳು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಹಿಂದೂ ಧರ್ಮೀಯರ ಭಾಷೆ. ಆದರೆ ತುಳು ಭಾಷೆಯಲ್ಲಿ ಗ್ರಾಂಥಿಕ ಸಾಹಿತ್ಯಕ್ಕೆ ನಾಂದಿ ಹಾಡಿದವರು ಮತ್ತು ತುಳು ಭಾಷೆಗೆ ಅಕಾಡೆಮಿಕ್ ಮನ್ನಣೆ ಒದಗಿಸಿದವರು ದೂರದ ಜರ್ಮನಿಯ ಬಾಸೆಲ್ ಮಿಶನ್‌‌ನ ಪ್ರವರ್ತಕರು. ಆಧುನಿಕ ತುಳು ರಂಗ ಭೂಮಿಯ ಭೀಷ್ಮ ಮೊಯ್ದಿನಬ್ಬ ಎಂಬ ಬ್ಯಾರಿ ಮುಸ್ಲಿಂ ನಾಟಕಕಾರ. (ಆದರೆ ದುರದೃಷ್ಟವಶಾತ್ ಇಂದು ತುಳು ನಾಟಕರಂಗ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿದೆ.)

ಕನ್ನಡದ ಜಾನಪದ ಸಾಹಿತ್ಯವನ್ನು ಸಂಗ್ರಹಿಸಿ ಕೂಡಿಟ್ಟ ಜಾನಪದ ದಿಗ್ಗಜ ಎಸ್.ಕೆ.ಕರೀಂ ಖಾನ್ ಅಫ್ಘಾನ್ ಮೂಲದವರು. ಅವರ ಮನೆ ಭಾಷೆ ಕನ್ನಡವಲ್ಲ.

ಕನ್ನಡದ ಮೇರು ಸಾಹಿತಿಗಳಾದ ಬೇಂದ್ರೆ ಮರಾಠಿ ಮನೆ ಭಾಷಿಕರಾದರೆ, ಮಾಸ್ತಿ ತಮಿಳು ಮನೆ ಭಾಷಿಕರು, ಗಿರೀಶ್ ಕಾರ್ನಾಡ್ ಕೊಂಕಣಿ ಮನೆ ಭಾಷಿಕರು, ಅಮೃತ ಸೋಮೇಶ್ವರ ಮಲಾಮೆ ಮನೆ ಭಾಷಿಕರು.

ಹೀಗೆ ಜಗತ್ತಿನ ಎಲ್ಲಾ ಭಾಷೆಗಳಿಗೂ ಆಯಾ ಭಾಷಿಕಲ್ಲದವರ ಕೊಡುಗೆ ಧಾರಾಳವಾಗಿ ಕಾಣಸಿಗುತ್ತವೆ.

ಹೀಗಿರುವಾಗ ಭಾಷೆಯೊಂದನ್ನು ನಿರ್ಧಿಷ್ಟ ಜಾತಿ, ಧರ್ಮ, ಜನಾಂಗ ಮತ್ತು ಭಾಷಿಕರಿಗೆ ಮಾತ್ರ ಸೀಮಿತಗೊಳಿಸಲು ಮನುವಾದಿಗಳಿಗೆ ಮಾತ್ರ ಸಾಧ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...