Homeಮುಖಪುಟಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? - ಇಸ್ಮತ್‌ ಪಜೀರ್‌

ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ: ಉದಾಹರಣೆಗಳು ಬೇಕೆ? – ಇಸ್ಮತ್‌ ಪಜೀರ್‌

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ.

- Advertisement -
- Advertisement -

ಡಾ.ಫಿರೋಝ್ ಖಾನ್ ಎಂಬ ಸಂಸ್ಕೃತ ವಿದ್ವಾಂಸ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸಂಸ್ಕೃತ ಪ್ರೊಫೆಸರ್ ಆದದ್ದನ್ನು ಸಹಿಸದ ಮನುವಾದಿಗಳು ಅವರ ವಿರುದ್ಧ ದೊಡ್ಡ ಮಟ್ಟದ ಗಲಾಟೆಯೆಬ್ಬಿಸಿದ್ದಾರೆ. ಬನಾರಸ್ ವಿವಿಯ ವಿದ್ಯಾರ್ಥಿಗಳಲ್ಲಿ ಒಂದು ವಿಭಾಗವು ಡಾ.ಫಿರೋಝ್ ಖಾನ್ ಪರವಾಗಿದ್ದರೆ ಮನುವಾದಿ ಸಂಘಪರಿವಾರದ ಪರವಿರುವ ವಿದ್ಯಾರ್ಥಿ ಗುಂಪು ಖಾನರ ವಿರುದ್ಧವಿದ್ದಾರೆ. ಈ ಹೆಸರಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಮಾಡುತ್ತಿರುವ ರಾಜಕೀಯ ಅತ್ಯಂತ ನಾಚಿಕೆಗೇಡಿನದ್ದು ಎಂದು ನಾವು ಹೇಳಿದರೆ ಅದೇನೂ ಅವರಿಗೆ ನಾಟದು..‌ ಉಡಲು ಉಡುಪಿದ್ದೂ ಅದನ್ನು ಕಳಚಿ ಬಿಟ್ಟು ಪ್ರಜ್ಞಾಪೂರ್ವಕವಾಗಿ
ಬೆತ್ತಲಾದವರಲ್ಲಿ ಈ ರೀತಿಯ ವಾದವೇ ವ್ಯರ್ಥ…

ಅದಾಗ್ಯೂ ಭಾಷೆ ಇತಿಹಾಸದಲ್ಲಿ ಯಾವತ್ತೂ ಧರ್ಮ ಸೂಚಕವಾಗಿರಲಿಲ್ಲ. ಇಂದು ಜಗತ್ತು ಮುಸ್ಲಿಮರ ಭಾಷೆ ಎನ್ನುವ ಖುರ್‌ಆನಿನ ಭಾಷೆ ಅರಬಿಕ್. ಅಂದ ಮಾತ್ರಕ್ಕೆ ಅದನ್ನು ಯಾವತ್ತೂ ಮುಸ್ಲಿಮರ ಭಾಷೆ ಎನ್ನಲಾಗದು. ಮಧ್ಯ ಪ್ರಾಚ್ಯದ ಹೆಚ್ಚಿನೆಲ್ಲಾ ದೇಶಗಳ ಕ್ರೈಸ್ತರು ಮತ್ತು ಯಹೂದಿಯರ ಮಾತೃ ಭಾಷೆಯೇ ಅರಬಿಕ್. ಅರಬಿ ಮಾತೃ ಭಾಷೆಯವರು ಎಂಬ ಕಾರಣಕ್ಕೆ ಅವರನ್ನು ಮುಸ್ಲಿಮರೆನ್ನಲಾದೀತೆ..?

ಇದನ್ನೂ ಓದಿ: ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಇಸ್ಲಾಮಿಕ್ ಕರ್ಮಶಾಸ್ತ್ರ ಮತ್ತು ಚರಿತ್ರೆಗಳು ಅರಬಿಕ್‌ನ ಬಳಿಕ ಅತೀ ಹೆಚ್ಚು ಬರೆದಿಡಲ್ಪಟ್ಟ ಭಾಷೆ ಪರ್ಶ್ಯನ್ ಭಾಷೆ. ಅಂತೆಯೇ ಅರೆಬಿಕ್ ಬಿಟ್ಟರೆ ಅತೀ ಹೆಚ್ಚು ಇಸ್ಲಾಮೀ ಸಾಹಿತ್ಯವಿರುವುದೂ ಪರ್ಷ್ಯನ್ ಭಾಷೆಯಲ್ಲಾಗಿದೆ. ಆದರೆ ಪರ್ಷ್ಯನ್ ಆ ಭಾಗದ ಅಥವಾ ಜಗತ್ತಿನ ಯಾವುದೇ ಭಾಗದ ಮುಸ್ಲಿಮರು ಮಾತ್ರ ಮಾತನಾಡುವ ಭಾಷೆಯಲ್ಲ. ಹಾಗೆಯೇ ಪಾರ್ಸಿ ಎಂದು ಅರಿಯಲ್ಪಡುವ ಜನಾಂಗವೇ ಇಸ್ಲಾಮ್ ಧರ್ಮಾನುಯಾಯಿಗಳಲ್ಲ.

ಜಗತ್ತಿನ ಅತ್ಯಂತ ಸುಂದರ ಮತ್ತು ಮಧುರ ಭಾಷೆಗಳಲ್ಲೊಂದೆಂದು ಗುರುತಿಸಲ್ಪಟ್ಟ ಉರ್ದುವಿನ ಮೇಲೆ ಸಂಘಪರಿವಾರದ ಉರಿನಂಜು ಇಂದು ನಿನ್ನೆಯದಲ್ಲ. ಅದಾಗ್ಯೂ ಉರ್ದು ಸಾಹಿತ್ಯದ ಮೇರು‌ ಸಾಹಿತಿಗಳಲ್ಲಿ ಅಸಂಖ್ಯ ಹಿಂದೂಗಳಿದ್ದಾರೆ. ಪಾಕಿಸ್ತಾನದ ಹಿಂದೂಗಳು ಮತ್ತು ಸಿಖ್ಖರಲ್ಲಿ ಬಹು ಸಂಖ್ಯಾತರ ಮಾತೃ ಭಾಷೆಯೂ ಉರ್ದು. ಅಷ್ಟು ದೂರವೇಕೆ ನಮ್ಮದೇ ದೇಶದ ಲಕ್ನೋ ಮತ್ತು ಹೈದರಾಬಾದಿನಲ್ಲಿ ಉರ್ದು ಮಾತೃ ಭಾಷಿಕರಾದ ಹಿಂದೂಗಳು ಧಾರಾಳವಾಗಿ ಕಾಣಸಿಗುತ್ತಾರೆ.

ಕಾಶ್ಮೀರಿಗರ ಅಧಿಕೃತ ಭಾಷೆ ಕಾಶ್ಮೀರಿ ಎಂದು ಎಲ್ಲಾ ಕಾಶ್ಮೀರಿಗರೂ ಒಪ್ಪುತ್ತಾರೆ. ಕಾಶ್ಮೀರದಲ್ಲಿ ಮುಸ್ಲಿಮರೇ ಬಹು ಸಂಖ್ಯಾತರು. ಅವರಲ್ಲಿ ಬಹುತೇಕರು ಕಾಶ್ಮೀರಿ ಮನೆ ಭಾಷೆಯವರು. (ಉರ್ದು ಮ‌ನೆ ಭಾಷಿಕರೂ ಇದ್ದಾರೆ) ಅಂತೆಯೇ ಅಲ್ಲಿನ ಹಿಂದೂಗಳ ಮನೆಭಾಷೆಯೂ ಕಾಶ್ಮೀರಿ.

ನನ್ನದೇ ಮಾತೃಭಾಷೆ ಬ್ಯಾರಿಯನ್ನು ತೆಗೆದುಕೊಳ್ಳೋಣ. ಬ್ಯಾರಿ ಭಾಷೆ ಕೇವಲ ಮುಸ್ಲಿಮರ ಭಾಷೆ ಎಂಬ ನಂಬಿಕೆ ಬಹುತೇಕರಲ್ಲಿದೆ. ಈ ಭಾಷೆಯಲ್ಲಿ ಎರಡು ಪ್ರಬೇಧಗಳಿವೆ. ಒಂದು ಬ್ಯಾರಿ ,ಇನ್ನೊಂದು ಮಲಾಮೆ. ಇವೆರಡರಲ್ಲಿರುವ ಶಬ್ಧಗಳು 98% ಒಂದೇ ಆಗಿವೆ. ಲಯದಲ್ಲಿ ಬ್ಯಾರಿ ಎಂಬ ಪ್ರಬೇಧ ತುಳುವನ್ನು ಹೋಲುತ್ತದಾದರೆ, ಮಲಾಮೆ ಮಲಯಾಳವನ್ನು ಹೋಲುತ್ತದೆ. ಆದರೆ ಮಲಾಮೆ ಮಲಯಾಳಂಗೆ ಬಹಳ ವ್ಯತ್ಯಾಸವಿದೆ. ಮಲಾಮೆ ಎಂಬ ಪ್ರಬೇಧದಲ್ಲಿ ಬ್ಯಾರಿಗಳಲ್ಲದೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತೀಯ ಸಮುದಾಯ, ಮೋಯ ಸಮುದಾಯ,ಮಣಿಯಾಣಿ ಸಮುದಾಯ ಮತ್ತು ಆಶಾರಿ ಸಮುದಾಯದವರ ಮನೆಭಾಷೆಯೂ ಹೌದು. ಹಾಗಾದರೆ ಇದು ಯಾರ ಭಾಷೆ?

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಬ್ಯಾರಿ ಭಾಷೆಗೆ ಅಕಾಡೆಮಿಕ್ ಮನ್ನಣೆಯೊದಗಿಸಿದ ಮೊಟ್ಟ ಮೊದಲ ಸಂಶೋಧಕಿ ಡಾ.ಸುಶೀಲಾ ಉಪಾಧ್ಯಾಯ ಎಂಬ ಬ್ರಾಹ್ಮಣ ಮಹಿಳೆ. ಆ ಭಾಷೆಯ ಕುರಿತಂತೆ ಅವರು ಪೂನಾ ವಿಶ್ವವಿದ್ಯಾನಿಲಯಕ್ಕೆ ಸಂಶೋಧನಾ ಪ್ರಬಂಧ ಮಂಡಿಸಿ ೧೯೬೮ರಲ್ಲಿ ಪಿ.ಎಚ್.ಡಿ.ಪಡೆದಿರುತ್ತಾರೆ. ಅಂದಿನಿಂದ ಇಂದಿನವರೆಗೆ ಬ್ಯಾರಿ ಭಾಷೆಯ ಕುರಿತಂತೆ ಇನ್ನೊಂದು ಪಿ.ಎಚ್.ಡಿ. ಅಧ್ಯಯನ ನಡೆದಿಲ್ಲ.

ತುಳು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಹಿಂದೂ ಧರ್ಮೀಯರ ಭಾಷೆ. ಆದರೆ ತುಳು ಭಾಷೆಯಲ್ಲಿ ಗ್ರಾಂಥಿಕ ಸಾಹಿತ್ಯಕ್ಕೆ ನಾಂದಿ ಹಾಡಿದವರು ಮತ್ತು ತುಳು ಭಾಷೆಗೆ ಅಕಾಡೆಮಿಕ್ ಮನ್ನಣೆ ಒದಗಿಸಿದವರು ದೂರದ ಜರ್ಮನಿಯ ಬಾಸೆಲ್ ಮಿಶನ್‌‌ನ ಪ್ರವರ್ತಕರು. ಆಧುನಿಕ ತುಳು ರಂಗ ಭೂಮಿಯ ಭೀಷ್ಮ ಮೊಯ್ದಿನಬ್ಬ ಎಂಬ ಬ್ಯಾರಿ ಮುಸ್ಲಿಂ ನಾಟಕಕಾರ. (ಆದರೆ ದುರದೃಷ್ಟವಶಾತ್ ಇಂದು ತುಳು ನಾಟಕರಂಗ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿದೆ.)

ಕನ್ನಡದ ಜಾನಪದ ಸಾಹಿತ್ಯವನ್ನು ಸಂಗ್ರಹಿಸಿ ಕೂಡಿಟ್ಟ ಜಾನಪದ ದಿಗ್ಗಜ ಎಸ್.ಕೆ.ಕರೀಂ ಖಾನ್ ಅಫ್ಘಾನ್ ಮೂಲದವರು. ಅವರ ಮನೆ ಭಾಷೆ ಕನ್ನಡವಲ್ಲ.

ಕನ್ನಡದ ಮೇರು ಸಾಹಿತಿಗಳಾದ ಬೇಂದ್ರೆ ಮರಾಠಿ ಮನೆ ಭಾಷಿಕರಾದರೆ, ಮಾಸ್ತಿ ತಮಿಳು ಮನೆ ಭಾಷಿಕರು, ಗಿರೀಶ್ ಕಾರ್ನಾಡ್ ಕೊಂಕಣಿ ಮನೆ ಭಾಷಿಕರು, ಅಮೃತ ಸೋಮೇಶ್ವರ ಮಲಾಮೆ ಮನೆ ಭಾಷಿಕರು.

ಹೀಗೆ ಜಗತ್ತಿನ ಎಲ್ಲಾ ಭಾಷೆಗಳಿಗೂ ಆಯಾ ಭಾಷಿಕಲ್ಲದವರ ಕೊಡುಗೆ ಧಾರಾಳವಾಗಿ ಕಾಣಸಿಗುತ್ತವೆ.

ಹೀಗಿರುವಾಗ ಭಾಷೆಯೊಂದನ್ನು ನಿರ್ಧಿಷ್ಟ ಜಾತಿ, ಧರ್ಮ, ಜನಾಂಗ ಮತ್ತು ಭಾಷಿಕರಿಗೆ ಮಾತ್ರ ಸೀಮಿತಗೊಳಿಸಲು ಮನುವಾದಿಗಳಿಗೆ ಮಾತ್ರ ಸಾಧ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...