Homeಅಂಕಣಗಳುಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ಓದಿರಿ ಗೌರಿ ಕಣ್ಣೋಟ

- Advertisement -
- Advertisement -

|ಗೌರಿ ಲಂಕೇಶ್ |

18 ಫೆಬ್ರವರಿ, 2009 (‘ಕಂಡಹಾಗೆ’ ಸಂಪಾದಕೀಯದಿಂದ)

1990ರಲ್ಲಿ ಅಪ್ಪ ಬರೆದಿದ್ದ ‘ಸಾಹಿತ್ಯ ಪರಿಷತ್ತು ಮತ್ತು ಸಾಹಿತಿಗಳು’ ಎಂಬ ಲೇಖನದಲ್ಲಿ ಸಾಹಿತ್ಯ ಪರಿಷತ್ತಿನ ಆರಂಭಿಕ ಆಶಯಗಳನ್ನು ಮೆಚ್ಚಿದ್ದರೂ ಆನಂತರ ಅದರಲ್ಲಿ ನಡೆದ ಸೆಣಸಾಟ, ಹೊಡೆದಾಟ, ಜಾತಿ ರಾಜಕೀಯ ಇತ್ಯಾದಿಗಳ ಬಗ್ಗೆ ಬೇಸರಗೊಂಡಿದ್ದರ ಬಗ್ಗೆ ಹೇಳುತ್ತಾರೆ.

“ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನಗಳಲ್ಲಿ ಆದ ಜಗಳಗಳು, ವಿವಾದ, ಹಗರಣಗಳು ಇವೆಲ್ಲವನ್ನು ನೋಡುತ್ತಿದ್ದ ಸೂಕ್ಷ್ಮ ಮನಸ್ಸಿನ ಸಾಹಿತಿಗಳಲ್ಲಿ ಅಸಹ್ಯ ಹುಟ್ಟಿಸಿದವು. ಸಾಹಿತಿಗಳೆಂದರೆ ಲಜ್ಜೆಯ, ಘನತೆಯ ವ್ಯಕ್ತಿಗಳು ಎಂದು ತಿಳಿದಿದ್ದವರಿಗೆ ದಿಗ್ಭ್ರಮೆಯಾಯಿತು. ಸಾಹಿತ್ಯ ಮೂಲಭೂತವಾಗಿ ನಿಷ್ಪಕ್ಷಪಾತವಾದುದು ಎಂದು ತಿಳಿದವರಿಗೆ ಸಾಹಿತ್ಯದ ಇತರೆ ಮುಖಗಳು ಕಾಣತೊಡಗಿದವು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಜಕೀಯ ಮುಖಂಡನಂತೆ ಮೆರೆಯತೊಡಗಿದರೆ, ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಉತ್ಸವ ಮೂರ್ತಿಯಾಗಿ ವಿಜೃಂಭಿಸತೊಡಗಿದ… ರಾಜಕೀಯ ಚುನಾವಣೆಯ ಕೊಳಕುತನವನ್ನೆಲ್ಲ ಮೀರಿಸತೊಡಗಿದ ಪರಿಷತ್ತು ಎಲ್ಲರ ತಾತ್ಸಾರಕ್ಕೆ ಗುರಿಯಾಗತೊಡಗಿತು”. ಎಂದು ಅಪ್ಪ ಅದೇ ಲೇಖನದಲ್ಲಿ ಬರೆದಿದ್ದಾರೆ.

ಕನ್ನಡಿಗರಲ್ಲಿ ಯಾವುದೇ ಸ್ಫೂರ್ತಿ, ಭರವಸೆ ಮೂಡಿಸಲಾಗದಂತಹ ಅವಸ್ಥೆಯ ಮಟ್ಟಕ್ಕೆ ಪರಿಷತ್ ಇಳಿದಾಗ ಅಪ್ಪ ಮತ್ತು ಇತರ ಸಾಹಿತಿಗಳಿಗೆ ಉಳಿದಿದ್ದ ಮಾರ್ಗ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಪ್ರತ್ಯೇಕವಾಗಿ ಏರ್ಪಡಿಸುವುದು. ಫೆಬ್ರವರಿ 16, 1990ರಲ್ಲಿ ನಡೆದ ಈ ‘ಜಾಗೃತ ಸಾಹಿತ್ಯ ಸಮಾವೇಶ’ವನ್ನು ಅಪ್ಪ ಉದ್ಘಾಟಿಸಿ ಮಾಡಿದ ಭಾಷಣದ ತುಣುಕು ಹೀಗಿದೆ…

“ರಾಜ್ಯಭಾಷೆ ಬಹುಸಂಖ್ಯಾತ ಜನರ ಮಾತೃಭಾಷೆ. ಆಡಳಿತ ಭಾಷೆ, ವ್ಯವಹಾರ ಭಾಷೆ-ಅದು ನಮ್ಮಲ್ಲಿ ಕನ್ನಡ: ಹಾಗೆಯೇ ಬಳ್ಳಾರಿಯ ಒಂದು ಹಳ್ಳಿಯೊಂದರಲ್ಲಿ ವಾಸಿಸುವ ತೆಲುಗರ ಆಡಳಿತ ಭಾಷೆ, ವ್ಯವಹಾರ ಭಾಷೆ ಕನ್ನಡ: ಅಂತೆಯೇ ಅವರೆಲ್ಲರ ಮಾತೃಭಾಷೆಯನ್ನು ನಾಶಮಾಡುವುದು ಕರ್ನಾಟಕ ಆಡಳಿತದ ಉದ್ದೇಶವಾಗಕೂಡದು.

ಒಂದು ರಾಜ್ಯ ಪೂರ್ಣ ಸಾಕ್ಷರತೆಯತ್ತ ಸಾಗಿದೆ ಎಂದರೆ ಅರ್ಥ, ಇಲ್ಲಿಯ ಎಲ್ಲ, ವರ್ಗ, ಜಾತಿಯ ಜನರಿಗೆ ಹೊಸತೊಂದು ಶಕ್ತಿ, ಹೊಸತೊಂದು ಚೈತನ್ಯ ಬಂದಿದೆ ಎಂಬುದು: ಹಾಗೆಯೇ ಮುಂದುವರಿದ ಜಾತಿಗಳ ಸ್ವತ್ತಾಗಿದ್ದ ನೆನಪನ್ನು ದಾಖಲಿಸುವ, ಅನುಭವವನ್ನು ನಮೂದಿಸುವ, ಗ್ರಂಥಗಳನ್ನು ರಚಿಸುವ ಬರವಣಿಗೆಯ ಸವಲತ್ತು ದಲಿತರಿಗೆ, ಹಿಂದುಳಿದವರಿಗೆ ಕೂಡ ದೊರೆತಿದೆ ಎಂಬುದು; ಹಾಗೆಯೆ ಲಕ್ಷಾಂತರ ವರ್ಷಗಳಿಂದ ನೋವು, ಅವಮಾನ ಅನುಭವಿಸಿದ ಜನತೆಗೆ ಆತ್ಮವಿಶ್ವಾಸ, ಆತ್ಮಗೌರವ ದೊರೆತು ಹಲವಾರು ಅರ್ಥಪೂರ್ಣ ಅನುಭವಸ್ಥರುಗಳೊಂದಿಗೆ ಸಾಂಸ್ಕೃತಿಕ ರಾಜಕೀಯ ಕ್ರಿಯೆಯಲ್ಲಿ ಭಾಗವಹಿಸುವುದು ಸಾಧ್ಯವಾಗಿದೆ ಎಂಬುದು.

ಒಂದು ಅನಕ್ಷರಸ್ಥ ದಲಿತ ಕುಟುಂಬ, ಹಿಂದುಳಿದವರ ಕುಟುಂಬ ಈ ವಲಯಗಳಲ್ಲಿ ಅನುಭವಿಸುವ ದಿಗ್ಭ್ರಮೆ ಅವರಿಗೆ ಮಾತ್ರ ಗೊತ್ತಾಗುವಂಥದು. ಮೀಸಲಾತಿ ವಿರೋಧಿಸುವ, ಇವರ ಕಷ್ಟಗಳನ್ನು ಅರ್ಥಮಾಡಿಕೊಳ್ಳದ ಜನರಿಂದಲೇ ಈ ಬಗೆಯ ದಿಗ್ಭ್ರಮೆ ಹುಟ್ಟಿದೆ ಮತ್ತು ಈ ಜನರಿಂದಲೇ ಇವತ್ತು ಏನನ್ನೂ ಮಾಡಲಾರದ ಸ್ಥಿತಿಯನ್ನು ಸರ್ಕಾರಗಳು ತಲುಪಿವೆ. ಸರ್ಕಾರ, ಸಾಂಸ್ಕøತಿಕ ವ್ಯವಸ್ಥೆ ನೇರಗೊಳ್ಳದೆ ಇಲ್ಲಿ ಅಸಹಾಯಕರಿಗೆ ನೆಮ್ಮದಿ, ಕನ್ನಡದ ಸಂಪೂರ್ಣ ವಿಕಾಸ ಕಷ್ಟಸಾಧ್ಯ.

ಈ ಸಮಾವೇಶ ಐತಿಹಾಸಿಕ ಎಂದು ನಾನಂತೂ ತಿಳಿದಿದ್ದೇನೆ. ನಿಜಕ್ಕೂ ಕ್ರಿಯಾಶೀಲ ಸಾಹಿತಿಗಳಾಗಿರುವ, ಸಂಶೋಧಕರಾಗಿರುವ ಎಲ್ಲ ಜಾತಿ ಹಿನ್ನೆಲೆಯ ಜನ ಒಂದೆಡೆ ಸೇರಿ ಚರ್ಚಿಸುವುದು, ಕೃತಿಗಳ, ಸಂಶೋಧನೆಯ ಬೆಲೆ ಕಟ್ಟುವುದು ಅಗತ್ಯವಾಗಿದೆ. ಹಿಂದುಳಿದವರು, ದಲಿತರು ತಮ್ಮ ತಮ್ಮ ಕೃತಿಗಳನ್ನು ತಮ್ಮ ತಮ್ಮ ಮಾನದಂಡಕ್ಕೆ ತಕ್ಕಂತೆ ನಿರ್ಧರಿಸುವುದಕ್ಕೆ ಬದಲು ತಮ್ಮಿಂದ ಹೊರತಾದ ಮಾಪನದ ಸವಾಲು ಎತ್ತಿಕೊಳ್ಳಬೇಕಾಗಿದೆ. ಅಂತೆಯೇ ಈ ಸಮಾಜಕ್ಕೆ ಪರಂಪರಾಗತವಾಗಿ ಬಂದಿರುವ ಅಂಧತ್ವವನ್ನು ಎಲ್ಲರೂ ಗಮನಿಸಬೇಕಾಗಿದೆ. ಪರಕೀಯರ ಆಕ್ರಮಣ, ದಬ್ಬಾಳಿಕೆಯಿಂದ ತತ್ತಿರಿಸಿಹೋದ ಜನರು ಜಾತೀಯತೆಯ ಸಣ್ಣಪುಟ್ಟ ಗುಂಪಿನ ರಕ್ಷಣೆಯಲ್ಲಿ, ಇದ್ದುದ್ದನ್ನು ಹೇಗಾದರೂ ಮಾಡಿ ಕಾಪಾಡಿಕೊಳ್ಳಲು ಯತ್ನಿಸಿದರು. ಹೊಸಬರ ಅಕ್ಷರಾಭ್ಯಾಸ, ಸಂವೇದನೆಯ ವಿಚಾರವೇ ಅವರನ್ನು ಬೆಚ್ಚಿಸಿತು. ಇದರಿಂದ ಸಾಹಿತ್ಯ, ಛಂದಸ್ಸು, ವ್ಯಾಕರಣಗಳೆಲ್ಲ ಜೀವಂತ ಅನುಭವದೊಂದಿಗಿನ ಪ್ರಯೋಗಗಳಾಗದೆ ಜಡ ಶಾಸ್ತ್ರಗಳಾದವು. ಸಾಹಿತ್ಯವನ್ನು ನೋಡುವ ಕಣ್ಣು ಕುರುಡಾದವು. ಜಾತಿಯ ವಲಯವನ್ನು ಮೀರಿದ ಸತ್ಯ ಇರಬಹುದೆಂಬುದು ಅವರಿಗೆ ತಿಳಿಯಲೇ ಇಲ್ಲ. ಈ ಕಾರಣಕ್ಕಾಗಿಯೇ ದಲಿತರಿಗೆ, ಹಿಂದುಳಿದವರಿಗೆ ಅವರ ಸದ್ಯದ ಅನ್ನಿಸಿಕೆಯನ್ನು ಮೀರಿದ ಮಾಪನ, ಮೌಲ್ಯ ಇರುವುದು ಗೊತ್ತಾಗಬೇಕಾಗಿರುವಂತೆಯೇ ಪರಂಪರಾಗತ ಅನುಭವಗಳ ಕುರುಡರೂ ತಮ್ಮ ಕಣ್ಣು ತೆರೆದು ತಮ್ಮಿಂದ ಹೊರಗಿರುವ ಮಾಪನವನ್ನು ಗಮನಿಸಬೇಕಾಗಿದೆ. ಅರ್ಜುನ, ಏಕಲವ್ಯರ ಪ್ರತಿಭೆ ಈ ಸತ್ಯದೆದುರು ಅರಳಬೇಕಾಗಿದೆ.

ಸಾಹಿತಿ ವಿಚಿತ್ರ ಸಾತಂತ್ರ್ಯ ಪ್ರೇಮಿ. ರಾಜಕೀಯ ಹಂಗುತೊರೆದ ನಿಷ್ಠುರ. ಇಲ್ಲಿ ಕೂಡ ಸಾಹಿತಿಯ ದಿಟ್ಟತನ, ನಿಷ್ಠುರತೆಯನ್ನು ಗಮನಿಸುತ್ತಾ ನಾವು ಆತನ ಅಸಹಾಯಕತೆಯನ್ನು ಮರೆಯದಿರೋಣ. ಸಾಹಿತಿ ಮತ್ತು ಸಹೃದಯನ, ಸಾಹಿತಿ ಮತ್ತು ಸಂಶೋಧಕನ, ಸಾಹಿತಿ ಮತ್ತು ಓದುಗನ ಸಂಬಂಧ ಮುಖ್ಯವಾದುದ್ದು. ಸಾಹಿತಿಗೆ ನಿಜವಾದ ಕೃತಕೃತ್ಮತೆ ದೊರೆಯುವುದು ಆತ ಈ ಸೇತುವೆಗಳನ್ನು ಕಂಡುಕೊಂಡಾಗ. ತನ್ನ ಅಂತರಾಳದಲ್ಲಿ ಸಲ್ಲುವ ಆತ ಸಹೃದಯನ ಆಂತರ್ಯದಲ್ಲಿ ಸಲ್ಲುವಂತಾದಾಗ. ಆದ್ದರಿಂದಲೇ ಈ ಸಾಹಿತ್ಯ ಸಮಾವೇಶ ರಾಜಕೀಯ, ಸಾಂಸ್ಕೃತಿಕ, ಆರ್ಥಿಕ ವಿಷಯಗಳನ್ನೆಲ್ಲ ಒಳಗೊಂಡು ಸಾಹಿತ್ಯದಲ್ಲಿನ ವರ್ಣ, ವರ್ಗವನ್ನೆಲ್ಲ ಧ್ಯಾನಿಸುವಂತಾಗಬೇಕು. ಇಲ್ಲಿಯ ಚರ್ಚೆ ಮತ್ತು ವಾದ ಮೈಲುಗಟ್ಟಲೆ ಬಾಹ್ಯವನ್ನು ಕ್ರಮಿಸುವಾಗಲೇ ಸಾಹಿತಿಯ ಪುಟ್ಟ, ಮನೋಹರ, ವ್ಯಸನಗಳ, ನೋವುಗಳ ಜಗತ್ತನ್ನೂ ನೋಡಬೇಕು. ಆಗಲೇ ಕನ್ನಡ ಸಾಹಿತ್ಯ ಕನ್ನಡ ಭಾಷೆಗೆ ಅಮೂಲ್ಯ ಕೊಡುಗೆ ನೀಡುವ ಶಕ್ತಿ ಪಡೆಯುತ್ತದೆ: ವ್ಯಾಕರಣದ ಬದ್ಧತೆ ಮತ್ತು ಅನುಭವದ ಉಜ್ವಲತೆ ನಮ್ಮದಾಗುತ್ತದೆ. ಎಲ್ಲ ನಿರ್ಜೀವ ಸಂಸ್ಥೆಗಳ ವಿರುದ್ಧ ಸಾಹಿತಿ ಮತ್ತು ಸಾಹಿತ್ಯ ಕೃತಿಗಳ ಸೂಕ್ಷ್ಮಜ್ಞ ಪ್ರತಿಭಟನೆಯಾಗುತ್ತದೆ”.

ಅಪ್ಪ ಈ ಆಶಯಗಳನ್ನು ವ್ಯಕ್ತಪಡಿಸಿ ಹತ್ತಿರತ್ತಿರ ಎರಡು ದಶಕಗಳಾಗಿದ್ದರೂ ಪರಿಸ್ಥಿತಿ ಉದ್ಧಾರವಾಗುವ ಬದಲು ಇನ್ನಷ್ಟು ಕೆಟ್ಟಿದೆ, ಅದು ನಿರುತ್ಸಾಹ ತರುವ ಸಂಗತಿ.

ಇದನ್ನು ಓದಿರಿ ಗೌರಿ ಕಣ್ಣೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...