Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...