Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...