Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....