Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...