Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...