Homeಕರ್ನಾಟಕಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು...

ಲಂಕೇಶ್ ಮೋಹಕ ರೂಪಕಗಳು ಕಟ್ಟಿಕೊಡುವ ವ್ಯಕ್ತಿಚಿತ್ರಣಗಳು…

- Advertisement -
- Advertisement -

| ಕುಮಾರ ರೈತ |

ಪಿ. ಲಂಕೇಶ್ ಅವರು ಕನ್ನಡ ಸಾಹಿತ್ಯ, ಸಂಸ್ಕೃತಿ, ಪತ್ರಿಕಾರಂಗವನ್ನು ಪ್ರಭಾವಿಸಿದವರು. ಇವರ ವರ್ತುಲದಲ್ಲಿದ್ದವರು ತಾವು ಕಂಡ ಲಂಕೇಶ್ ಅವರನ್ನು ಚಿತ್ರಿಸಿದ್ದಾರೆ. ಆದರೆ ಆ ಕೃತಿಗಳಲ್ಲಿ ಲಂಕೇಶರು ಚೆದುರಿದ ಚಿತ್ರಗಳು ಎನ್ನುವ ಹಾಗೆ ಕಾಣಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿಯೇ ಅವರ ವಿದ್ಯಾರ್ಥಿ, ಅನುಗಾಲದ ಗೆಳೆಯ ಶೂದ್ರ ಶ್ರೀನಿವಾಸ್ ಅವರು “ಲಂಕೇಶ್ ಮೋಹಕ ರೂಪಗಳ ನಡುವೆ” ಕೃತಿ ಬರೆದಿದ್ದಾರೆ.

ಕೃತಿಯ ಆರಂಭದಲ್ಲಿ ಶೂದ್ರ ಶ್ರೀನಿವಾಸ್ ಹೀಗೆ ಹೇಳುತ್ತಾರೆ “ಡಾ. ಜಾನ್ಸನ್ ಮತ್ತು ಬಾಸ್ ವೆಲ್ ಎಂಬ ಎರಡು ದೀಪಸ್ತಂಭಗಳನ್ನು ರೂಪಕವಾಗಿಟ್ಟುಕೊಂಡು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯನ್ನು ನೋಡಲು ಪ್ರಯತ್ನಿಸಿರುವೆ. ಇಲ್ಲಿ ನನಗೆ ಲಂಕೇಶ್ ಅವರ ವ್ಯಕ್ತಿತ್ವವೇ ಪ್ರಧಾನ” ಲೇಖಕರ ಇರಾದೆ ಹೀಗಿದ್ದರೂ ಅದು ಅವರು ಅಂದುಕೊಂಡ ಚೌಕಟ್ಟನ್ನೂ ಮೀರಿ ಬೆಳೆದು, ಚಿತ್ರಪಟಗಳಂತೆ ಸರಿದು ಹೋಗುವ ವ್ಯಕ್ತಿಚಿತ್ರಗಳಾಗಿವೆ.

ಲಂಕೇಶ್ ಅವರ ಒಡನಾಟದಲ್ಲಿ, ಸಾಂಗತ್ಯದಲ್ಲಿ, ಪರಿಧಿಯಲ್ಲಿ ಕರ್ನಾಟಕ ಸಾಂಸ್ಕೃತಿಕ-ರಾಜಕೀಯ ಲೋಕದ ಗಣ್ಯರುಗಳು ಬಂದು ಹೋಗಿದ್ದಾರೆ. ಲಂಕೇಶರ ವ್ಯಕ್ತಿತ್ವವನ್ನು ಇಡಿಯಾಗಿ ಹಿಡಿಯ ಹೊರಟ ಶೂದ್ರ ಶ್ರೀನಿವಾಸರು ಇಂಥ ಬಹುತೇಕರ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಡುತ್ತಾರೆ. ಅದೇ ಕಾಲದಲ್ಲಿ ಆ ವ್ಯಕ್ತಿಗಳ ಕಣ್ಣುಗಳಲ್ಲಿ ಲಂಕೇಶ್ ಚಿತ್ರಿತವಾದ ರೀತಿಯೂ ಇಲ್ಲಿ ಅನಾವರಣಗೊಂಡಿದ್ದೆ. ಇದು ‘ಲಂಕೇಶ್; ಮೋಹಕ ರೂಪಗಳ ನಡುವೆ’ ಕೃತಿಯ ಬಹುಮುಖ್ಯ ವೈಶಿಷ್ಟ್ಯ.

ಶೂದ್ರ ಶ್ರೀನಿವಾಸ್ ಈ ಕೃತಿಯನ್ನು ಏಕೆ ಬರೆದರು ಎಂಬುದೂ ಪ್ರಶ್ನೆ. ತಮಗೆ ಪಾಠ ಮಾಡಿದ, ಪ್ರಭಾವಿಸಿದ, ಸಾಮಿಪ್ಯದಿಂದ ರೇಗಿಸಿದ, ನೋಯಿಸಿದ ಲಂಕೇಶರು ಇಲ್ಲವಾದ ನಂತರವೂ ಮನೋಭಿತ್ತಿಯಲ್ಲಿ ಅನುಗಾಲವೂ ಕಾಡುತ್ತಿರುವುದರಿಂದ ಬಿಡುಗಡೆ ಪಡೆದು ನಿರಾಳವಾಗುವ ಹಿನ್ನೆಲೆಯಲ್ಲಿ ಬರೆದಿದ್ದಾರೆ ಎಂಬುದು ಇದನ್ನೋದುವಾಗ ಗಮನಕ್ಕೆ ಬರುತ್ತದೆ. ಆದ್ದರಿಂದಲೇ ತಮ್ಮ ಆರಂಭದ ಮಾತುಗಳಿಗೆ ಅವರಿಟ್ಟ ಹೆಸರು “ನಿರಾಳವಾಗುವುದೆಂದರೆ”.

ಲಂಕೇಶರನ್ನು ಹತ್ತಿರದಿಂದ ಕಾಣದೇ ಅವರ ಕೃತಿಗಳ ಮೂಲಕವೇ ಪರಿಚಯಿಸಿಕೊಂಡವರು ಅನೇಕ. ಅವರ ವ್ಯಕ್ತಿ ಚಿತ್ರಣ ನೀಡುವ ಪುಸ್ತಕಗಳಿಂದ, ಗೊತ್ತಿದ್ದವರು, ಗೊತ್ತಿಲ್ಲದವರು ಹೇಳುವ ವರ್ಣರಂಜಿತ ಹೇಳಿಕೆಗಳಿಂದ ಅಸ್ಪಷ್ಟ ವ್ಯಕ್ತಿಚಿತ್ರಣವನ್ನೂ ಕಟ್ಟಿಕೊಂಡಿರುತ್ತಾರೆ. ಆದರೆ ಈ ಕೃತಿ ಅವರ ಬಗ್ಗೆ ಸ್ಪಷ್ಟ ಚಿತ್ರಣವನ್ನು ಕಟ್ಟಿಕೊಡಲು ಯತ್ನಿಸುತ್ತದೆ. ಇದಿಷ್ಟೇ ಅಲ್ಲ; ಈ ಕೃತಿಯಿಂದ 50 ವರ್ಷಗಳ ಕರ್ನಾಟಕದ ರಾಜಕೀಯ – ಸಾಂಸ್ಕೃತಿಕ – ರಾಜಕೀಯ ದಿನಗಳ ಪರಿಚಯವೂ ಆಗುತ್ತದೆ.

ಸಾಹಿತಿ ರಾಜೇಂದ್ರ ಚೆನ್ನಿ ಅವರ ಮುನ್ನಡಿಯಲ್ಲಿ “ಲಂಕೇಶರ ಬಗ್ಗೆಗಿನ ಕೃತಿಯನ್ನು ಓದುವುದು, ಕೆಲವು ದಶಕಗಳ ಕರ್ನಾಟಕದ ಸಾಂಸ್ಕೃತಿಕ ಚರಿತ್ರೆ ಓದಿದಂತೆ. ಕೊನೇಪಕ್ಷ ಎರಡು ತಲೆಮಾರುಗಳ ಪ್ರಜ್ಞೆಯನ್ನು ರೂಪಿಸಿದ ಎಲ್ಲ ಸಾಂಸ್ಕೃತಿಕ ಘಟನೆಗಳ ಹಿಂದೆ ಲಂಕೇಶ್ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಇದ್ದಾರೆ. ಲಂಕೇಶ್ ಪತ್ರಿಕೆ ಸೆಕ್ಯುಲರ್ ಸಂವೇದನೆ ಕಾಪಾಡಿ ಬೆಳೆಸಿದೆ. ರಾಜಕೀಯ ಹಾಗೂ ಇತರ ಅಧಿಕಾರ ಕೇಂದ್ರಗಳನ್ನು ಆದಷ್ಟು ಮಟ್ಟಿಗೆ ಎಚ್ಚರವಾಗಿಸಿದೆ. ಶೂದ್ರರ ನಿರೂಪಣೆಯಲ್ಲಿ ಆ ಕಾಲದ ಎಲ್ಲ ಮುಖ್ಯಘಟನೆಗಳೂ ಬಂದು ಹೋಗುತ್ತವೆ” ಎಂದಿದ್ದಾರೆ.

ಲಂಕೇಶರ ಯೌವ್ವನ, ಗರ್ವ, ಆರ್ಥಿಕ ಅಸಹಾಯಕತೆ, ಶ್ರೀಮಂತಿಕೆ, ಜನಪ್ರಿಯತೆ ಎಲ್ಲವನ್ನೂ ಕಂಡ ಲೇಖಕರು ಅವರು ಸಾಯುವ ಕೆಲವು ದಿನಗಳ ಮುಂಚೆ ಭೇಟಿ ಮಾಡುತ್ತಾರೆ. ಆಗ ಲಂಕೇಶರು ಹೇಳುವ ಮಾತುಗಳು ಓದುಗರನ್ನು ಆರ್ದ್ರಗೊಳಿಸುತ್ತವೆ. ಮನುಷ್ಯನ ಅಸಹಾಯಕ ಘಳಿಗೆಗಳು ದಿಗಿಲು ಮೂಡಿಸುವಂತೆ, ನಮ್ಮೊಳಗನ್ನು ನಾವೇ ನೋಡಿಕೊಳ್ಳುವಂತೆ ಮಾಡುತ್ತವೆ…

ಕೃತಿ: ಲಂಕೇಶ್ ಮೋಹಕ ರೂಪಗಳ ನಡುವೆ

ಲೇಖಕ: ಶೂದ್ರ ಶ‍್ರೀನಿವಾಸ್

ಪ್ರಕಾಶನ: ಪಲ್ಲವ ಪ್ರಕಾಶನ, ಬಳ್ಳಾರಿ, ಸಂಪರ್ಕ ಸಂಖ್ಯೆ: 94803 53507

ಪುಟಗಳು: 282, ಬೆಲೆ: 250 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...